ತುಂಗೆ ಒಡಲಲೂ ಬೇಸಿಗೆಯಲ್ಲಿ ನೀರಿನ ಬರ!

ನೀರಿನ ದುರ್ಬಳಕೆ ತಡೆಯದಿದ್ದರೆ ಸಮಸ್ಯೆ ಗ್ಯಾರಂಟಿನೀರಿನ ಸಮಸ್ಯೆ ಕಾಡದಂತೆ ಮುಂಜಾಗ್ರತಾ ಕ್ರಮ

Team Udayavani, Mar 22, 2020, 4:32 PM IST

22-March-15

ತೀರ್ಥಹಳ್ಳಿ: ಮಲೆನಾಡಿನ ಮಡಿಲು, ತುಂಗೆಯ ಒಡಲು ತೀರ್ಥಹಳ್ಳಿ ತಾಲೂಕಿನಲ್ಲೂ ಬೇಸಿಗೆಯಲ್ಲಿ ನೀರಿಗೆ ಬರ.! ಕಳೆದ ಬಾರಿ ದಾಖಲೆ ಮಳೆ ಸುರಿದಿದ್ದರೂ ಹತ್ತಕ್ಕೂ ಹೆಚ್ಚು ಗ್ರಾಪಂ ವ್ಯಾಪ್ತಿಯಲ್ಲಿ ಈಗಲೇ ಕೆರೆ ಬಾವಿಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಸಕಾಲದಲ್ಲಿ ಮಳೆಯಾಗದಿದ್ದಲ್ಲಿ ಕಳೆದ ಸಾಲಿನಂತೆ ಈ ವರ್ಷ ಕೂಡ ಬೇಸಿಗೆಯ ಕೊನೆಗೆ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವ ಲಕ್ಷಣ ಗೋಚರವಾಗುತ್ತಿದೆ.

ಪಂಪ್‌ಸೆಟ್‌ಗೆ ಬೇಕಿದೆ ಕಡಿವಾಣ: ತಾಲೂಕಿನ ಜೀವನದಿ ತುಂಗಾ ಮತ್ತು ಮಾಲತಿ ನದಿಗಳಲ್ಲಿ ನೀರಿನ ಮಟ್ಟ ಉತ್ತಮವಾಗಿದ್ದು, ನದಿ ದಡದ ಪ್ರದೇಶಗಳಲ್ಲಿ ಸದ್ಯದ ಸ್ಥಿತಿ ಸಮಾಧಾನಕರವಾಗಿದೆ. ಈ ನದಿಗಳಿಗೆ ಹಾಕಿರುವ ಸಾವಿರಾರು ಕೃಷಿ ಪಂಪ್‌ ಸೆಟ್‌ಗಳು ಅಗತ್ಯಕ್ಕಿಂತ ಹೆಚ್ಚಾಗಿ ಬಳಕೆಯಾಗುತ್ತವೆ. ಇಂತಹ ಕೃಷಿ ಪಂಪ್‌ಗ್ಳಿಗೆ ನಿಯಂತ್ರಣ ಹಾಕಿದಲ್ಲಿ ಈ ನದಿಗಳನ್ನು ಅವಲಂಬಿಸಿರುವ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇಲ್ಲವೇ ಇಲ್ಲ. ಕೃಷಿ ಪಂಪ್‌ಗ್ಳಿಗೆ ಉಚಿತ ವಿದ್ಯುತ್‌ ನೀಡುತ್ತಿರುವ ಕಾರಣ ಹೆಚ್ಚಿನ ರೈತರು ಸರ್ಕಾರದ ಈ ಸವಲತ್ತನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾತು ರೈತರಿಂದಲೇ ವ್ಯಕ್ತವಾಗುತ್ತಿದೆ. ಪಂಪ್‌ ಸೆಟ್‌ಗಳಿಗೆ ಆಟೋ ಸ್ಟಾರ್ಟರ್‌ ಬಳಸಿ ವಿದ್ಯುತ್‌ ಇರುವಷ್ಟು ಹೊತ್ತು ಅನಗತ್ಯವಾಗಿ ತೋಟಕ್ಕೆ ನೀರು ಹಾಯಿಸಲಾಗುತ್ತಿದೆ. ಅಲ್ಲದೆ ರಾತ್ರಿ ವೇಳೆ ವಿಪರೀತವಾಗಿ ನೀರು ಪೋಲಾಗುತ್ತಿರುತ್ತದೆ. ಇದರಿಂದ ಕಡುಬೇಸಿಗೆಯಲ್ಲಿ ನೀರಿನ ಕೊರತೆ ತಂದೊಡ್ಡಿದರೂ ಆಶ್ಚರ್ಯವಿಲ್ಲ.

ಎದುರಾದೀತು ಸಮಸ್ಯೆ: ಮಳೆ ಕೊರತೆಯಿಂದ ಕಳೆದ ಬೇಸಿಗೆಯಲ್ಲಿ ತಾಲೂಕಿನ ಬಹುತೇಕ ಎಲ್ಲಾ ಹೋಬಳಿಗಳಲ್ಲೂ ನೀರಿನ ಸಮಸ್ಯೆ ಉದ್ಭವವಾಗಿತ್ತು. ಆಗುಂಬೆ ಗ್ರಾಪಂ ವ್ಯಾಪ್ತಿಯಲ್ಲಿನ ಮಲ್ಲಂದೂರು, ಕೆಸರುಕೊಂಡ, ಬಿಳಿಗಿನ ಮನೆ, ಕಾರೆಕುಂಬ್ರಿಗಳಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೋರಿಲ್ಲ. ಆದರೂ ಏಪ್ರಿಲ್‌-ಮೇ ತಿಂಗಳಿನಲ್ಲಿ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇರುವುದರಿಂದ ಈಗಾಗಲೇ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಗುತ್ತಿದೆ.

ಮಂಡಗದ್ದೆ ಹೋಬಳಿಯ ಕೆಲವು ಗ್ರಾಮಗಳಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಹಿಂದಿನ ಬಾರಿ ಟ್ಯಾಂಕರ್‌ನಲ್ಲಿ ನೀರು ಪೂರೈಸಲಾಗಿತ್ತು. ಈ ಬಾರಿ ನೀರಿಗೆ ಕೊರತೆಯಾಗದಂತೆ ಪ್ರತಿ ಗ್ರಾಪಂನಲ್ಲಿ ಶೇ. 25 ಅನುದಾನವನ್ನು ಕುಡಿಯುವ ನೀರಿಗಾಗಿ ಕಾದಿರಿಸಲಾಗಿದೆ. ಮಂಡಗದ್ದೆ ಗ್ರಾಪಂ ವ್ಯಾಪ್ತಿಯ ಒಂದೆರಡು ಗ್ರಾಮಗಳಲ್ಲಿ ಈಗಲೇ ನೀರಿನ ಸಮಸ್ಯೆ ಉಂಟಾಗಿದೆ. ಹಣಗೆರೆ ಗ್ರಾಪಂನ ಕೊಂಬಿನಕೈ, ಕಲ್ಲುಕೊಪ್ಪದಲ್ಲಿ ಕೊಳವೆ ಬಾವಿಗಳಿವೆ. ಆದರೆ ಅದರಲ್ಲೂ ನೀರಿಲ್ಲವಾಗಿದೆ.

ಕುಣಜೆ, ಶಿರನಲ್ಲಿ, ಬಾಂಡ್ಯ, ಕುಕ್ಕೆ ಗ್ರಾಪಂ ವ್ಯಾಪ್ತಿಯ ದಾನಸಾಲೆ, ಸಮಕಾನಿ, ಬೆಜ್ಜವಳ್ಳಿ ಗ್ರಾಪಂ ವ್ಯಾಪ್ತಿಯ ಮಾಳೂರು, ಹಿರೇತೋಟ, ಕಾನಳ್ಳಿ ಹಿರೇಬೈಲು ಎಸ್‌ಸಿ ಕಾಲೋನಿ ಮತ್ತು ಹೆದ್ದೂರು ಪಂಚಾಯತ್‌ ನ ಹೊಳೆಕೊಪ್ಪ ಹರಿಜನ ಕಾಲೋನಿಯಲ್ಲಿ ಕೂಡ ಈ ನೀರಿನ ಸಮಸ್ಯೆ ಉಂಟಾಗಿದೆ. ಇನ್ನು ಒಂಟಿ ಮನೆಗಳಿರುವ ಕಡೆಗಳಲ್ಲಿ ನೀರಿನ ಸಮಸ್ಯೆ ಇದ್ದು ಇದನ್ನು ಬಗೆಹರಿಸುವುದು ಅಷ್ಟು ಸುಲಭವಲ್ಲ.

ಗ್ರಾಮಗಳಲ್ಲಿ ಕುಡಿಯುವ ನೀರಿನ ಯೋಜನೆಜಾರಿಮಾಡಿದ್ದರೂ ಒಂಟಿಯಾಗಿರುವ ಪ್ರತಿ ಮನೆಗಳಿಗೆ ಪೈಪ್‌ ಅಳವಡಿಸಿ ನೀರನ್ನು ಒದಗಿಸಲು ಲಕ್ಷಾಂತರ ರೂ. ಅನುದಾನ ಬೇಕಾಗುತ್ತದೆ. ಇಂತಹ ನೂರಾರು ಮನೆಗಳಿದ್ದು, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಷ್ಟ ಎಂಬಂತಾಗಿದೆ.

ಕೊಳವೆ ಬಾವಿಗಳಲ್ಲಿ ಕ್ಲೋರೈಡ್‌ ಅಂಶದ ಸಮಸ್ಯೆ: ತಾಲೂಕಿನ ನೊಣಬೂರು ಹಾಗೂ ಅರಳಸುರುಳಿ ಗ್ರಾಪಂ ವ್ಯಾಪ್ತಿಯ ಕೆಲವೆಡೆ ಬೋರ್‌ವೆಲ್‌ ನೀರಿನಲ್ಲಿ ಕ್ಲೋರೈಡ್‌ ಅಂಶ ಕಂಡು ಬಂದಿದೆ. ಈ ಗ್ರಾಪಂ ವ್ಯಾಪ್ತಿಯ ಹುಲಿಸರ, ಮಲ್ಲೇಸರ ಮತ್ತು ಹೊಸಗದ್ದೆ ಈ ಭಾಗದಲ್ಲಿ ಈ ಸಮಸ್ಯೆ ಕಂಡು ಬಂದಿದ್ದು ಇಲ್ಲಿ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹೋಬಳಿಯಲ್ಲಿ ವಾಡಿಕೆಯ ಶೇ.31ಅಧಿ ಕ ಮಳೆ ಬಿದ್ದಿದ್ದರೂ ಕೆಲವೆಡೆ ನೀರಿನ ಸಮಸ್ಯೆ ಇದೆ.

ದುರ್ಬಳಕೆ ನಿಲ್ಲಲಿ: ನೀರಿನ ಮೂಲಗಳ ದುರ್ಬಳಕೆಯಾಗದೆ ಕ್ರಮಬದ್ಧವಾಗಿ ಬಳಸಿಕೊಂಡಲ್ಲಿ ಈ ವರ್ಷ ತಾಲೂಕಿನಲ್ಲಿ ನೀರಿಗೆ ಹಾಹಾಕಾರದ ಸ್ಥಿತಿ ಉಂಟಾಗದು. ಆದರೆ ಹಲವೆಡೆ ಕುಡಿಯುವ ನೀರಿನ ಬಾವಿಗಳಿಂದ ಕೆಲವು ಪ್ರಭಾವಿಗಳು ನೇರವಾಗಿ ಮತ್ತೆ ಕೆಲವರು ಅಂಡರ್‌ ಗ್ರೌಂಡ್‌ ಪೈಪ್‌ಲೈನ್‌ ಮೂಲಕ ಗುಟ್ಟಾಗಿ ಜಮೀನಿಗೆ ನೀರು ಹಾಯಿಸುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಜನಪ್ರತಿನಿ ಧಿಗಳಿಗೆ ಈ ವಿಚಾರ ತಿಳಿದಿದ್ದರೂ ಅವರು ಮೌನ ವಹಿಸುತ್ತಿದ್ದಾರೆ ಎಂಬ ಮಾತೂ ಕೇಳಿ ಬರುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಅಂತಹ ಪ್ರಕರಣಗಳನ್ನು ಗುರುತಿಸಿ ಬಿಗಿ ಕ್ರಮ ಕೈಗೊಳ್ಳುವುದು ಅತೀ ಅಗತ್ಯವಾಗಿದೆ ಇಲ್ಲದಿದ್ದಲ್ಲಿ ಕುಡಿಯುವ ನೀರಿನ ಸಮಸ್ಯೆ ತಪ್ಪಿದ್ದಲ್ಲ.

ಮಧ್ಯಾಹ್ನ ನೀರು ಕೊಡಿ: ಮೇಲಿನ ಕುರುವಳ್ಳಿ ಗ್ರಾಪಂನ ಮೇಲಿನ ಕುರುವಳ್ಳಿಯಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರಿದ್ದು ಸುಮಾರು ನಾಲ್ಕು ನೂರಕ್ಕೂ ಹೆಚ್ಚು ಮನೆಗಳಿವೆ. ಕಳೆದ ಬೇಸಿಗೆಯಲ್ಲಿ ಇಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಹೆಚ್ಚಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಇಲ್ಲಿಯವರಲ್ಲಿ ಹೆಚ್ಚಿನವರು ಬಂಡೆ ಒಡೆಯುವ ಕೆಲಸವನ್ನೇ ತಮ್ಮ ಮೂಲ ಕಸುಬಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಬೇಸಿಗೆಯಲ್ಲಿ ತಾಪ ಹೆಚ್ಚಿರುವುದರಿಂದ ಮಧ್ಯಾಹ್ನ ಕೆಲಸ ಮಾಡದೆ ಬೆಳಗ್ಗೆ ಮತ್ತು ಸಂಜೆ ಕೆಲಸ ಮಾಡಬೇಕಾಗುತ್ತದೆ. ಹೀಗಾಗಿ ಇವರಿಗೆ ಮಧ್ಯಾಹ್ನದ ಸಮಯದಲ್ಲಿ ನೀರು ಪೂರೈಸಿದಲ್ಲಿ ಒಳ್ಳೆಯದು ಎನ್ನುತ್ತಾರೆ ಮೇಲಿನ ಕುರುವಳ್ಳಿಯ ಹಿರಿಯರಾದ ಮಂಜುನಾಥ್‌.

ಇದಲ್ಲದೆ ಕಟ್ಟೇಹಕ್ಕಲು-ಶೇಡ್ಗಾರು ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಗ್ರಾಪಂನಿಂದ ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಪಟ್ಟಣದಲ್ಲಿ ಇಲ್ಲ ಸಮಸ್ಯೆ: ತೀರ್ಥಹಳ್ಳಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ನೀರಿನ ಮೂಲವಾದ ಕೆರೆ ಮತ್ತು ಬಾವಿಗಳಿದ್ದರೂ ಅದರ ನೀರು ಉಪಯೋಗಕ್ಕೆ ಯೋಗ್ಯವಿಲ್ಲ ವಾದ್ದರಿಂದ ಜನ ತುಂಗಾ ನದಿಯ ನೀರನ್ನೇ ಅವಲಂಬಿಸಿದ್ದಾರೆ.

ದಿನದ ಇಪ್ಪತ್ತನಾಲ್ಕು ಗಂಟೆಯೂ ನೀರು ಪೂರೈಕೆ ಮಾಡುತ್ತಿದ್ದು ಪಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದುವರೆಗೆ ತಲೆದೋರಿಲ್ಲ. ತುಂಗಾ ಸೇತುವೆ ಸಮೀಪ ಅತ್ಯಂತ ಆಳವಿರುತ್ತಿದ್ದ ನದಿಯಲ್ಲಿ ಈ ಬಾರಿ ಹೂಳು ತುಂಬಿದ್ದು ಬಂಡೆಗಳು ಕಾಣುವಂತಾಗಿದೆ.

ಶ್ರೀಕಾಂತ್‌ ವಿ. ನಾಯಕ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdas

ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!

1-sffdsfsd

Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ

rain

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

1-tir-a

NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!

ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.