ಕೇಂದ್ರದ ವಿರುದ್ಧ ನಾಳೆ ಪ್ರತಿಭಟನಾ ಮೆರವಣಿಗೆ

ಕೇಂದ್ರ ಸರಕಾರದ ಸರ್ವಧಿಕಾರಿ ಧೋರಣೆ ವಿರುದ್ಧ ಹೋರಾಟ: ಜೆಸಿಟಿಯು ಜಿಲ್ಲಾ ಸಂಚಾಲಕ ನಾರಾಯಣ್‌

Team Udayavani, Nov 25, 2020, 8:07 PM IST

ಕೇಂದ್ರದ ವಿರುದ್ಧ ನಾಳೆ ಪ್ರತಿಭಟನಾ ಮೆರವಣಿಗೆ

ಶಿವಮೊಗ್ಗ: ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನ.26ರಂದು ಅಖೀಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು, ಶಿವಮೊಗ್ಗದಲ್ಲೂ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜೆಸಿಟಿಯು ಜಿಲ್ಲಾ ಸಂಚಾಲಕ ಎಂ. ನಾರಾಯಣ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಹಾಗೂ ಅನ್ನದಾತ ರೈತ, ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕನನ್ನು ಪೂರ್ಣ ಗುಲಾಮಗಿರಿಗೆ ತಳ್ಳುವ ಕೇಂದ್ರ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಅನಿರೀಕ್ಷಿತವಾಗಿ ಲಾಕ್‌ಡೌನ್‌ ಆಯಿತು. ಮೊದಲೇ ಸಂಕಷ್ಟದಲ್ಲಿರುವ ಕಾರ್ಮಿಕರ ಹಿತವನ್ನು ಕಾಪಾಡುವ ಬದಲಿಗೆ ಮತ್ತಷ್ಟು ಸಂಕಷ್ಟಕ್ಕೆ ಕೇಂದ್ರ ಸರ್ಕಾರ ನೂಕಿದೆ. ಇದನ್ನು ವಿರೋ ಧಿಸಿ ನ.26ರ ಬೆಳಿಗ್ಗೆ 11 ಗಂಟೆಗೆ ಮಹಾವೀರ ವೃತ್ತದಿಂದ ಜಿಲ್ಲಾ ಧಿಕಾರಿಗಳ ಕಚೇರಿವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಕೇಂದ್ರ ಸರ್ಕಾರ ಕಾರ್ಮಿಕ ಸಂಘಟನೆಗಳ ಜೊತೆಯಾವುದೇ ಚರ್ಚೆ ನಡೆಸದೇ ಕೋವಿಡ್‌-19 ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಹಾಗೂ ವಿರೋಧ ಪಕ್ಷದ ಗೈರು ಹಾಜರಿಯಲ್ಲಿ ಕಾರ್ಮಿಕರ ಹಿತಕ್ಕೆ ಧಕ್ಕೆ ತರುವಂತಹ ಮೂರು ಕಾರ್ಮಿಕ ಸಂಹಿತೆಗಳನ್ನು ಸಂಸತ್‌ ನಲ್ಲಿ ಅಪ್ರಜಾಸತ್ತಾತ್ಮಕ ರೀತಿಯಿಂದ ಅಂಗೀಕರಿಸಿದೆ. ಇದರಿಂದಾಗಿ ಕಾರ್ಮಿಕರಿಗೆ ಅನ್ಯಾಯವಾಗಿದೆ ಎಂದು ದೂರಿದರು.

ಇದನ್ನೂ ಓದಿ: ಎಂಪಿಎಂ ಕಾರ್ಖಾನೆಗೆ ಅರಣ್ಯಲೀಸ್‌ ಬೇಡ

ರೈತ ವಿರೋಧಿ  ಕಾನೂನುಗಳನ್ನು ವಾಪಸ್‌ಪಡೆಯಬೇಕು. ಆದಾಯ ತೆರಿಗೆ ರಹಿತ ಕುಟುಂಬಗಳಿಗೆ 7,500 ರೂ. ಪಾವತಿಸಬೇಕು. ಎಲ್ಲ ಅಗತ್ಯವಿರುವವರಿಗೆ ತಿಂಗಳಿಗೆ 10 ಕೆಜಿ ಉಚಿತ ಪಡಿತರ ನೀಡಬೇಕು. ಸಾರ್ವಜನಿಕ ವಲಯ ಸೇವಾ ಸಂಸ್ಥೆಗಳ ಖಾಸಗೀ ಕರಣ ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಅಖೀಲ ಭಾರತ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರಕ್ಕೆ ಅಖೀಲ ಭಾರತ ಸಂಘಟನೆಗಳು, ಕಾರ್ಮಿಕರು, ನೌಕರರು, ಅಸಂಘಟಿತ ಕ್ಷೇತ್ರದ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರು, ಆಟೋ, ಟ್ಯಾಕ್ಸಿ, ಸಾರಿಗೆ ನೌಕರರು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರು, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ನೀಡಿ ಮುಷ್ಕರದಲ್ಲಿ ಭಾಗವಹಿಸುತ್ತಿವೆ ಎಂದರು.

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.