ಶಾಂತಿ ಕದಡಲು ಯತ್ನಿಸಿದರೆ ಕಠಿಣ ಕ್ರಮ


Team Udayavani, Aug 30, 2018, 10:00 AM IST

shiv.jpg

ಶಿವಮೊಗ್ಗ: ಆ. 31ರಂದು ನಡೆಯಲಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದು, ಶಾಂತಿಯನ್ನು ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಎಚ್ಚರಿಕೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಯುತವಾಗಿ ಚುನಾವಣೆ ನಡೆಸಲು ಕೈಗೊಂಡಿರುವ ಕ್ರಮಗಳ ವಿವರ ನೀಡಿದರು. ಒಟ್ಟು 35 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 274218 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. 

ಇವರಲ್ಲಿ 135524 ಪುರುಷ ಹಾಗೂ 138673 ಮಹಿಳಾ ಮತದಾರರು ಮತ್ತು 21 ಇತರೆ ಮತದಾರರು ಇದ್ದಾರೆ. ಒಟ್ಟು 303 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ಇದರಲ್ಲಿ 86 ಸೂಕ್ಷ್ಮ, 21 ಅತಿ ಸೂಕ್ಷ್ಮ ಮತ್ತು 196 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ ಎಂದರು.

 ಚುನಾವಣೆಯನ್ನು ಸುಗಮವಾಗಿ ನಡೆಸಲು 320 ಮತಗಟ್ಟೆ ಅಧಿಕಾರಿಗಳು, 320 ಮತಗಟ್ಟೆ ಸಹಾಯಕ ಅಧಿಕಾರಿಗಳು, 640 ಮತಗಟ್ಟೆ ಸಿಬ್ಬಂದಿ, 303 ಸಹಾಯಕರು, 303 ಪೊಲೀಸ್‌ ಸಿಬ್ಬಂದಿ ಸೇರಿದಂತೆ ಒಟ್ಟು 1886 ಅಧಿಕಾರಿ/ಸಿಬ್ಬಂದಿ ನಿಯೋಜಿಸಲಾಗಿದೆ. ಶಿವಮೊಗ್ಗ ತಾಲೂಕು ಹೊರತುಪಡಿಸಿ ನೆರೆಯ ತಾಲೂಕುಗಳ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ನಿಯೋಜನೆ ಮಾಡಲಾಗಿದ್ದು, ಇದರಿಂದ ಅಂಚೆ ಮತದಾನಕ್ಕಾಗಿ ಅತಿ ಕಡಿಮೆ ಅರ್ಜಿಗಳು ಬಂದಿವೆ ಎಂದು ಹೇಳಿದರು. 

ಚುನಾವಣಾ ಕರ್ತವ್ಯಕ್ಕಾಗಿ ಒಟ್ಟು 82 ವಾಹನಗಳನ್ನು ಬಳಸಲಾಗುತ್ತಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಇದರ ಮೇಲುಸ್ತುವಾರಿಗಾಗಿ ಉಪವಿಭಾಗಾಧಿಕಾರಿ ಶಿವಮೊಗ್ಗ ಅವರನ್ನು ನೋಡೆಲ್‌ ಅಧಿಕಾರಿಯಾಗಿ ನೇಮಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಯ ಯಾವುದೇ ಪ್ರಕರಣಗಳು
ಗಮನಕ್ಕೆ ಬಂದಲ್ಲಿ ದೂರವಾಣಿ ಸಂಖ್ಯೆ 91485 85855 ಸಂಪರ್ಕಿಸಬಹುದಾಗಿದೆ ಎಂದರು.

ಬಹಿರಂಗ ಮತ ಪ್ರಚಾರ ಕಾರ್ಯ ಈಗಾಗಲೇ ಮುಕ್ತಾಯವಾಗಿದ್ದು, ಕ್ಷೇತ್ರಕ್ಕೆ ಸಂಬಂಧಪಡದ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ವ್ಯಕ್ತಿಗಳು ಕ್ಷೇತ್ರ ವ್ಯಾಪ್ತಿಯನ್ನು ಖಾಲಿ ಮಾಡಲು ಆದೇಶ ನೀಡಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದವರು ಮಾತ್ರ ಮತ ಚಲಾಯಿಸಬಹುದಾಗಿದೆ. 

ಈಗಾಗಲೇ ಅರ್ಹ ಮತದಾರರಿಗೆ ವೋಟರ್‌ ಸ್ಲಿಪ್‌ ನೀಡಲಾಗುತ್ತಿದೆ. ಮತದಾನದ ದಿನ ಮತಗಟ್ಟೆ ಹೊರಗೆ ಬಿಎಲ…ಒಗಳಿಂದ ಸಹ ವೋಟರ್‌ ಸ್ಲಿಪ್‌ ಪಡೆಯಬಹುದಾಗಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಇತರ 22 ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಗುರುತಿಸಲಾಗಿದ್ದು, ಇವುಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ. ಚುನಾವಣೆಗೆ ಅಳಿಸಲಾಗದ ಶಾಯಿಯನ್ನು ಎಡಗೈ ಉಂಗುರದ ಬೆರಳಿಗೆ ಹಾಕಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮತ ಎಣಿಕೆ: ಮತ ಎಣಿಕೆ ಕಾರ್ಯ ಸೆ. 3ರಂದು ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಏಕಕಾಲದಲ್ಲಿ ನಡೆಯಲಿದೆ. ಇದಕ್ಕಾಗಿ 2 ಭದ್ರತಾ ಕೊಠಡಿಗಳು, 7 ಮತ ಎಣಿಕೆ ಹಾಲ…, 49 ಮತ ಎಣಿಕೆ ಟೇಬಲ್‌ ಹಾಗೂ 147 ಮತ ಎಣಿಕೆ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ. ಮತದಾನ ಕೇಂದ್ರದ ಸುತ್ತಲೂ 144 ಸೆಕ್ಸನ್‌ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.