ತಾಪಂಗೆ ಸೈಕಲ್ನಲ್ಲಿ ಉಪಾಧ್ಯಕ್ಷ
Team Udayavani, Feb 10, 2021, 4:39 PM IST
ಸಾಗರ: ತಾಪಂ ಉಪಾಧ್ಯಕ್ಷ ಅಶೋಕ್ ಬರದವಳ್ಳಿ ತಮ್ಮ ಗ್ರಾಮದಿಂದ 9 ಕಿಮೀ ದೂರದ ತಾಪಂ ಕಚೇರಿಗೆ ಸೈಕಲ್ ಸವಾರಿ ಮೂಲಕ ಆಗಮಿಸಿ ಪೆಟ್ರೋಲ್- ಡೀಸೆಲ್ ದರ ಏರಿಕೆ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದರು.
ಮಂಗಳವಾರ ತಾಪಂ ಕಚೇರಿ ಎದುರು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರುತ್ತಲೇ ಇದೆ. ಕೂಲಿ ನಾಲಿ ಮಾಡಿ ಬದುಕುವ ಮತ್ತು ಕೆಳ ಮಧ್ಯಮ ವರ್ಗಕ್ಕೆ ಇದು ಭಾರಿ ಹೊರೆಯಾಗುತ್ತಿದೆ. ಜನರ ಆಕ್ರೋಶದ ನಡುವೆಯೂ ಕೇಂದ್ರ ಸರ್ಕಾರ ಅದಾನಿ ಅಂಬಾನಿ ತಾಳಕ್ಕೆ ತಕ್ಕ ಹಾಗೆ ಕುಣಿಯುತ್ತಿದೆ. ದೇಶ ಅಂದರೆ ಪ್ರಧಾನಿ, ಅದಾನಿ, ಅಂಬಾನಿಯಂತಾಗಿದೆ. ಹೀಗಾಗಿ ವಿದ್ಯಾರ್ಥಿ ಯುವಜನರು ಮತ್ತು ಇತರ ನಾಗರಿಕರು ಸೈಕಲ್ ಅನ್ನು ಹೆಚ್ಚಾಗಿ ಬಳಸಿ ಬೆಲೆ ಏರಿಕೆ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಬೇಕು ಎಂದರು.
ಇದನ್ನೂ ಓದಿ :ಹಳ್ಳಿ ಪ್ರತಿ ಮನೆಗೂ ಶುದ್ಧ ಜಲ
ಪ್ರಧಾನಿ ಕೋವಿಡ್ ಓಡಿಸಲು ದೀಪ ಹಚ್ಚಿ, ಜಾಗಟೆ ಬಾರಿಸಿ ಎಂದು ಕರೆ ಕೊಟ್ಟ ಹಾಗೆ ದೇಶದ ಜನತೆಗೆ ನಿತ್ಯವು ಸೈಕಲ್ ಬಳಸಿ ಎಂದು ಕರೆಕೊಡಬೇಕು ಎಂದು ಸಲಹೆ ನೀಡಿದರು.
ಸೈಕಲ್ ಬಳಕೆಯಿಂದ ಪರಿಸರ ಮಾಲಿನ್ಯ ಕಡಿಮೆ ಆಗುತ್ತದೆ. ಭೂಮಿ ಮೇಲೆ ಇರುವ ಸಕಲ ಜೀವಿಗಳ ಆರೋಗ್ಯ ಸುಧಾರಿಸುವುದು ಅಲ್ಲದೆ ಆರ್ಥಿಕ ಹೊರೆಯು ತಪ್ಪುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ