ಶಿವಮೊಗ್ಗ-ಮೈಸೂರು ರೈಲು ವೇಳೆ ಬದಲಾವಣೆ

ರೈಲ್ವೆ ಅಧಿಕಾರಿಗಳೊಂದಿಗೆ ಸಭೆ

Team Udayavani, Jan 23, 2021, 7:05 PM IST

A-23

ಶಿವಮೊಗ್ಗ: ಪ್ರತಿದಿನ ರಾತ್ರಿ ಶಿವಮೊಗ್ಗದಿಂದ ಮೈಸೂರಿಗೆ ಹೊರಡುವ ರೈಲು ಬೆಳಗಿನ ಜಾವ 3.50ಕ್ಕೆ ಬೆಂಗಳೂರಿನ ಮೆಜೆಸ್ಟಿಕ್‌ ತಲುಪುತ್ತಿತ್ತು. ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಮಯ ಬದಲಾವಣೆ ಮಾಡಿದ್ದು, ಜ.31ರಿಂದ ಬೆಳಗ್ಗೆ 5ಗಂಟೆಗೆ ಮೆಜೆಸ್ಟಿಕ್‌ ತಲುಪಲಿದೆ. ಇದರಿಂದಾಗಿ ಪ್ರಯಾಣಿಕರು ತಮ್ಮ ನಿರೀಕ್ಷಿತ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಲು ಸಾಧ್ಯವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶುಕ್ರವಾರ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ವಿಭಾಗಗಳ ರೈಲ್ವೆ ಅಧಿಕಾರಿಗಳೊಂದಿಗೆ ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ವೆà ಪ್ರಗತಿಯ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದ ಅವರು, ಪ್ರತಿನಿತ್ಯ ಯಶವಂತಪುರ-ಶಿವಮೊಗ್ಗ ಹಾಗೂ ಶಿವಮೊಗ್ಗ ಯಶವಂತಪುರದವರೆಗೆ ಚಲಿಸುತ್ತಿದ್ದ ಜನಶತಾಬ್ಧಿ ರೈಲಿನ ಸೇವೆಯನ್ನು ಮೆಜಸ್ಟಿಕ್‌ವರೆಗೆ ವಿಸ್ತರಿಸಲಾಗಿದೆ.

ಪ್ರತಿದಿನ ಬೆಳಗ್ಗೆ 5.30ಕ್ಕೆ ಹೊರಡುತ್ತಿದ್ದ ಈ ರೈಲು ಮುಂದಿನ ದಿನಗಳಲ್ಲಿ ಬೆಳಗ್ಗೆ 5.15ಕ್ಕೆ ಹೊರಟು ಬೆಳಗ್ಗೆ 9.50ಕ್ಕೆ ಮೆಜಸ್ಟಿಕ್‌ ತಲುಪಲಿದೆ. ಇದರಿಂದಾಗಿ ವೈಯಕ್ತಿಕ ಹಾಗೂ ಕಚೇರಿ ಕೆಲಸಗಳಿಗಾಗಿ ಒಂದೇ ದಿನದಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗಿ ಬರುವವರಿಗೆ ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ : ಹೈಕೋರ್ಟ್‌ನಲ್ಲಿ ಸಿಕ್ತು ಲೆಕ್ಕ ಶಾಸ್ತ್ರಕ್ಕೆ  ಶೇ. 100 ಅಂಕ!

ಅಲ್ಲದೆ ಶಿವಮೊಗ್ಗ-ಚೆನ್ನೈ, ಶಿವಮೊಗ್ಗ-ರೇಣಿಗುಂಟ ರೈಲು ಮಾರ್ಗವನ್ನು ಅಲ್ಪ ಪ್ರಮಾಣದಲ್ಲಿ ಮಾರ್ಪಡಿಸಿ, ಸಮಯ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಇದರಿಂದಾಗಿ ತಿರುಪತಿಗೆ ತೆರಳುವ ಭಕ್ತಾದಿಗಳಿಗೆ ಹಾಗೂ ಚೆನ್ನೈಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಯಾವುದೇ ಕಾರಣಕ್ಕೂ ಈ ರೈಲು ಮಾರ್ಗದ ತಡೆ ಮಾಡಲಾಗುವುದಿಲ್ಲ ಎಂದ ಅವರು, ಅರಸಾಳು ನಿಲ್ದಾಣವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಐತಿಹಾಸಿಕವೆನ್ನುವಂತೆ ರೂಪಿಸಲಾಗಿರುವ ಈ ನಿಲ್ದಾಣದ ಮೂಲಕ ಹಾದು ಹೋಗುತ್ತಿದ್ದ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ರೈಲ್ವೆ ಕೋಚಿಂಗ್‌ ಡಿಪೋ ಮತ್ತು ಟರ್ಮಿನಲ್‌ ಗಳ ನಿರ್ಮಾಣ ಕಾರ್ಯಕ್ಕೆ ಸಂಬಂಸಿಧಿದಂತೆ ಶೀಘ್ರವೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ, ಚಾಲನೆ ನೀಡುವುದಾಗಿ ರೈಲ್ವೆ ಜನರಲ್‌ ಮ್ಯಾನೇಜರ್‌ ಎ.ಕೆ. ಸಿಂಗ್‌ ಅವರು ಭರವಸೆ ನೀಡಿದ್ದಾರೆ. 150- 200 ಕೋಟಿ ರೂ.ಗಳ ವೆಚ್ಚದಲ್ಲಿ ಸಾಗರ ಮತ್ತು ತಾಳಗುಪ್ಪ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ನೆರವಿನಿಂದ ಮೆಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾ.31ರೊಳಗಾಗಿ 4 ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ ಮತ್ತು ಕೋಚಿಂಗ್‌ ಡಿಪೋ ನಿರ್ಮಾಣಕ್ಕೆ ಚಾಲನೆ ಹಾಗೂ ಶಿವಮೊಗ್ಗ- ಶಿಕಾರಿಪುರ- ರಾಣೆಬೆನ್ನೂರು ಹೊಸ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಈ ಕಾಮಗಾರಿಗಳ ಚಾಲನೆಗೆ ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಅವರನ್ನು ಆಹ್ವಾನಿಸಲಾಗುವುದು ಎಂದರು.

ತಾಳಗುಪ್ಪ- ಹುಬ್ಬಳ್ಳಿ ಹೊಸ ರೈಲು ಮಾರ್ಗದ ಸರ್ವೆ ಕಾರ್ಯಕ್ಕೆ ಸರ್ಕಾರ ಈಗಾಗಲೇ 15ಲಕ್ಷ ರೂ. ಗಳನ್ನು ಮಂಜೂರು ಮಾಡಿದೆ. ಸಮೀಕ್ಷೆ ವರದಿಯ ನಂತರ ರೈಲು ಮಾರ್ಗದ ನಿರ್ಮಾಣ ಕಾರ್ಯಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು. ಸಭೆಯಲ್ಲಿ ಹುಬ್ಬಳ್ಳಿ ರೈಲ್ವೆ ಜನರಲ್‌ ಮ್ಯಾನೇಜರ್‌ ಎ.ಕೆ. ಸಿಂಗ್‌, ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್‌ ಅಗರ್‌ವಾಲ್‌, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್‌, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್‌. ಅರುಣ್‌, ಹುಬ್ಬಳ್ಳಿ ರೈಲ್ವೆಯ ಡೆಪ್ಯುಟಿ ಜನರಲ್‌ ಮ್ಯಾನೇಜರ್‌ ವಿಜಯ, ವಿಭಾಗೀಯ ಹಿರಿಯ ವಾಣಿಜ್ಯ ಅ ಧಿಕಾರಿ ಡಾ| ಮಂಜುನಾಥ್‌, ವಿಭಾಗೀಯ ಹಿರಿಯ ಅಧಿಕಾರಿಗಳಾದ ಡಾ| ಸತೀಶ್‌, ಎಚ್‌.ಎಸ್‌. ವರ್ಮಾ, ಅನಿಲ್‌ ಪವಿತ್ರನ್‌, ರೂಪಾ ಸಾವಿತ್ರನ್‌, ವಿಫುಲ್‌ ಜೈನ್‌, ರವಿಕುಮಾರ್‌, ರಾಜಶೇಖರ್‌, ಸರೋಜ ಸೇರಿದಂತೆ ರೈಲ್ವೆಯ ವಿವಿಧ ಶ್ರೇಣಿಯ ಅಧಿಕಾರಿಗಳು ಇದ್ದರು.

ಇದನ್ನೂ ಓದಿ : ರೈತರ ಪರೇಡ್‌ ಲಾಂಛನ ಬಿಡುಗಡೆ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.