ಆರೋಗ್ಯವಂತ ಮರಕ್ಕೇ ಕೊಡಲಿ ಏಟು!


Team Udayavani, Sep 14, 2020, 6:34 PM IST

ಆರೋಗ್ಯವಂತ ಮರಕ್ಕೇ ಕೊಡಲಿ ಏಟು!

ಸಾಗರ: ಅರಣ್ಯ ಇಲಾಖೆ ಅವಕೃಪೆಯಿಂದ ನೆಲ ಕಚ್ಚಿದ ರಂಜಲು ಮರ.

ಸಾಗರ: ರಸ್ತೆಯಲ್ಲಿ ಸಂಚರಿಸುವ ಜನ, ವಾಹನಗಳಿಗೆ ಅಪಾಯ ಆಗುತ್ತದೆ ಎಂಬ ಸೂಚನೆ ಸಿಕ್ಕ ತಕ್ಷಣ ಬೃಹತ್‌ ಮರಗಳನ್ನು ಕಡಿಯುವ ಪ್ರಕ್ರಿಯೆಗೆ ಚಾಲನೆ ನೀಡುವಅರಣ್ಯ ಇಲಾಖೆ, ರಸ್ತೆ ಪಕ್ಕದಲ್ಲಿರುವ ಒಣ ಮರಗಳನ್ನು ಕಟಾವು ಮಾಡುವಂತೆ ಕೋರಿ ಹತ್ತಾರು ಅರ್ಜಿ ಸಲ್ಲಿಸಿದರೂ ಗಮನ ಹರಿಸದಿರುವುದು ಕಲ್ಮನೆ ಗ್ರಾಪಂ ವ್ಯಾಪ್ತಿಯ ಜನರಿಗೆ ಅಚ್ಚರಿಯುಂಟು ಮಾಡಿದೆ.

ಸಾಗರದಿಂದ ಸಿಗಂದೂರು ಕಡೆಗೆ ಪಯಣಿಸಲಿರುವ ಆವಿನಹಳ್ಳಿ ರಸ್ತೆ ಸದಾಜನ, ವಾಹನಗಳಿಂದ ಕೂಡಿರುತ್ತದೆ. ಅಲ್ಲಿ ಒಣಗಿ ಬೀಳುವ ಮರಗಳಿಂದ ಅಪಾಯ ಇದ್ದೇ ಇದೆ. ಈ ಹಿಂದೆ ಹಲವು ಸಂದರ್ಭಗಳಲ್ಲಿ ಇಂತಹ ಘಟನೆ ನಡೆದಿದೆ. ಈ ಮಾರ್ಗದಲ್ಲಿ ಚಿಪ್ಪಳಿ ಲಿಂಗದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಹಾಗೂ ಸಾರಿಗೆ ಇಲಾಖೆ ಕಚೇರಿಗೆ ಹೋಗುವ ರಸ್ತೆ ಸೇರುವಲ್ಲಿ ಒಣ ಮರಗಳು ಹತ್ತಾರು ತಿಂಗಳಿನಿಂದ ರಸ್ತೆ ಪಕ್ಕದಲ್ಲಿವೆ. ಅದನ್ನು ತೆರವುಗೊಳಿಸುವ ವಿಚಾರದಲ್ಲಿ ಸಾರ್ವಜನಿಕರು ಹಲವು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಆ ಮರಗಳ ವಿಚಾರದಲ್ಲಿ ಅರಣ್ಯ ಇಲಾಖೆ ಸ್ವಲ್ಪವೂ ತಲೆಕೆಡಿಸಿಕೊಂಡಂತಿಲ್ಲ.

ಈ ಹಿಂದೆ ಇದೇ ಆರ್‌ಟಿಒ ಅಧಿಕಾರಿಗಳ ಮೇಲೆ ಈಗ ಒಣಗಿ ನಿಂತಿರುವ ಮರದ ಸಮೀಪವೇ ಸಾಲು ಮರದ ರೆಂಬೆ ಆರ್‌ ಟಿಒ ಜೀಪಿನ ಮೇಲೆ ಬಿದ್ದು ಇಲಾಖೆಯ ಹಲವರಿಗೆ ಗಾಯಗಳಾಗಿತ್ತು. ಒಣ ಮಾವಿನ ಮರದಿಂದ ಅನತಿ ದೂರದಲ್ಲಿ ಇನ್ನೊಂದು ಒಣ ಮರ 2 ವರ್ಷಗಳ ಹಿಂದೆ ಬೈಕ್‌ ಮೇಲೆ ಬಿದ್ದು ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇತ್ತ ಇದೇ ರಸ್ತೆಯಲ್ಲಿನ ಪೆಟ್ರೋಲ್‌ಬಂಕ್‌ ಎದುರು ಇರುವ ರಂಜಲು ಜಾತಿಯ ಆರೋಗ್ಯವಂತ ಮರದ ಮೇಲೆ ಅರಣ್ಯ ಇಲಾಖೆ ಕಣ್ಣುಬಿದ್ದಿದೆ. ಇದು ಅಕ್ಕಪಕ್ಕದ ಮನೆಗಳಿಗೆ ಅಪಾಯ ಒಡ್ಡಲಿದೆ ಎಂಬ ಅರ್ಜಿ ರೂಪಿಸಿ, ಮರವನ್ನು ಕಡಿತಲೆಗೆ ಯೋಜನೆ ರೂಪಿಸಲಾಗಿದೆ. ಯಾರ ಗಮನಕ್ಕೂ ಬಾರದಂತೆ ಕಡಿತಲೆಗೆ ಅನುಮತಿಸಿ, ಕಟಾವಿಗೆ ಹರಾಜು ಹಾಕಲಾಗಿದೆ ಎಂದು ಸಾಗರದ ಪರಿಸರಾಸಕ್ತರು ದೂರಿದ್ದಾರೆ.

ಬೆಳ್ಳಂಬೆಳಗ್ಗೆ ಜನ ಕಣ್ಣುಜ್ಜಿಕೊಂಡು ಮನೆಯಿಂದ ಹೊರಬೀಳುವ ಮುನ್ನವೇ ಯಂತ್ರಗಳು ಅದನ್ನು ಕತ್ತರಿಸಿಹಾಕಿದ್ದವು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಸರ ವ್ಯಕ್ತಪಡಿಸಿರುವ ಪರಿಸರ ಪ್ರೇಮಿ, ಸ್ವಾನ್‌ ಆ್ಯಂಡ್‌ ಮ್ಯಾನ್‌ ಸಂಸ್ಥೆಯ ಅಖೀಲೇಶ್‌ ಚಿಪ್ಳಿ, ಜನ ಅರಣ್ಯ ಇಲಾಖೆಯವರನ್ನು ದೂರುವುದಕ್ಕೂ, ಅವರು ಮಾಡುವುದಕ್ಕೂ ಸರಿಯಾಗಿದೆ. ಸಾಗರದಿಂದ ಆವಿನಹಳ್ಳಿಗೆ ಹೋಗುವ ರಸ್ತೆಯಲ್ಲಿ ಕಳೆದ ಐದು ವರ್ಷಗಳಿಂದ ಒಣಗಿದ ಮಾವಿನ ಮರ ರಸ್ತೆಗೆ ವಾಲಿ ನಿಂತಿದೆ. ಅದನ್ನು ಮುಟ್ಟದ ಅರಣ್ಯ ಇಲಾಖೆ ಇಲ್ಲಿಂದ ಒಂದೈವತ್ತು ಮೀಟರ್‌ ಸಾಗರದ ಕಡೆಗೆ ಹೋದರೆ ಸಿಗುವ 30, 40 ವರ್ಷದ, ಹಣ್ಣು ಬಿಡುತ್ತಿದ್ದ ರಂಜಲ ಮರವನ್ನು ಕಡಿದಿದ್ದಾರೆ. ಇದನ್ನು ಪ್ರಶ್ನಿಸಿದರೆ ನಾವು ಗುತ್ತಿಗೆದಾರರಿಗೆ ಪರಿಸರ ವ್ಯಾಧಿಗಳಾಗುತ್ತೇವೆ ಎಂದು ವಿಷಯ ಪ್ರಸ್ತಾಪಿಸಿದ್ದಾರೆ.

ಅರಣ್ಯ ಇಲಾಖೆ ಮರ ಕಡಿತಲೆಯ ವಿಚಾರದಲ್ಲಿ ಪಾರದರ್ಶಕತೆ ಯನ್ನು ಕಾಪಾಡ ದಿರುವುದೇ ಆ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ. ರಾಜ್ಯ ಸರ್ಕಾರ ಅರಣ್ಯ ಇಲಾಖೆಯನ್ನು ರದ್ದುಗೊಳಿಸಿ ಜನರಿಗೇ ಮರಗಳ ರಕ್ಷಣೆಯ ಹೊಣೆ ವಹಿಸಿದರೇ ಹೆಚ್ಚಿನ ಅರಣ್ಯ ಉಳಿಯುತ್ತದೆ ಎನಿಸುತ್ತದೆ! ಜಯಪ್ರಕಾಶ್‌ ಗೋಳಿಕೊಪ್ಪ, ಪರಿಸರ ಕಾರ್ಯಕರ್ತ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.