ಆಗುಂಬೆ ಘಾಟಿಯಲ್ಲಿ ಉರುಳಿದ ಮರ: ಕೆಲಕಾಲ ವಾಹನ ಸಂಚಾರ ಬಂದ್
ಅದೃಷ್ಟವಶಾತ್ ಯಾವುದೆ ಅಪಾಯ ಸಂಭವಿಸಿಲ್ಲ
Team Udayavani, Jun 1, 2022, 3:44 PM IST
ಶಿವಮೊಗ್ಗ: ಮರ ಧರೆಗುರುಳಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರ ತೆರವು ಮಾಡಿದ್ದಾರೆ.
ಆಗುಂಬೆ ಘಾಟಿಯ ಮೂರನೆ ತಿರುವಿನಲ್ಲಿ ಬುಧವಾರ ಬೆಳಗ್ಗೆ ಮರವೊಂದು ಧರೆಗುರುಳಿತ್ತು. ಅದೃಷ್ಟವಶಾತ್ ಯಾವುದೆ ಅಪಾಯ ಸಂಭವಿಸಿಲ್ಲ.
ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಡ್ಡಲಾಗಿ ಬಿದ್ದಿದ್ದ ಮರದ ಕೆಳಗೆ ಸ್ವಲ್ಪ ಜಾಗವಿದ್ದಿದ್ದರಿಂದ ಕಾರುಗಳು, ಬೈಕುಗಳು ಸಂಚರಿಸಿದವು.
ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರವನ್ನು ಕತ್ತರಿಸಿದರು. ಆ ಬಳಿಕ ವಾಹನ ಸಂಚಾರ ಪುನಾರಂಭವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ