ಸಂಚಾರಕ್ಕೆ ಸಂಚಕಾರ!

•ಶಿವಮೊಗ್ಗ ನಗರದ ಬಹುತೇಕ ರಸ್ತೆಗಳು ಗುಂಡಿಮಯ•ಕೆಲವೆಡೆ ಅಪೂರ್ಣ ಕಾಮಗಾರಿ ಜನರಿಗೆ ಕಿರಿಕಿರಿ

Team Udayavani, Sep 10, 2019, 2:38 PM IST

sm-tdy-1

ಶಿವಮೊಗ್ಗ: ಕುವೆಂಪು ರಸ್ತೆಯ ಕೆನರಾ ಬ್ಯಾಂಕ್‌ ಸರ್ಕಲ್ ಬಳಿಯ ರಸ್ತೆ ಗುಂಡಿ.

ಶಿವಮೊಗ್ಗ: ನಗರದ ಬಿ.ಎಚ್. ರಸ್ತೆ ಹೊರತುಪಡಿಸಿದರೆ ಬಹುತೇಕ ಎಲ್ಲ ರಸ್ತೆಗಳು ಗುಂಡಿಮಯವಾಗಿವೆ. ಇತ್ತ ಗುಂಡಿ ರಸ್ತೆಗಳು, ಅತ್ತ ಟ್ರಾಫಿಕ್‌ ಪೊಲೀಸರಿಂದ ದುಬಾರಿ ತಂಡಕ್ಕೆ ವಾಹನ ಸವಾರರು ಹೈರಾಣಾಗಿದ್ದಾರೆ. ಪಾಲಿಕೆಗೆ ನೂತನ ಆಡಳಿತ ಬಂದು ವರ್ಷ ಕಳೆದರೂ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಸಿಕ್ಕಿಲ್ಲ.

ನಗರದ ಎಲ್ಎಲ್ಆರ್‌ ರಸ್ತೆ, ಕುವೆಂಪು ರಸ್ತೆ, ಲಕ್ಷ್ಮಿ ಟಾಕೀಸ್‌ ಎದುರು ರಸ್ತೆ, ದುರ್ಗಿಗುಡಿ ಬಡಾವಣೆ, ಪಾರ್ಕ್‌ ಬಡಾವಣೆ, ಓ.ಟಿ. ರಸ್ತೆ, ಸವಳಂಗ, ಬೊಮ್ಮನಕಟ್ಟೆ, ಗೋಪಾಳ ಬಡಾವಣೆ, ಆಲ್ಕೋಳ ವೃತ್ತ ರಸ್ತೆ ಸೇರಿದಂತೆ ಬಹಳಷ್ಟು ಒಳ ರಸ್ತೆಗಳು ಗುಂಡಿ ಬಿದಿದ್ದು, ಜನರು ಭಯದಲ್ಲಿ ಸಂಚರಿಸುವಂತಾಗಿದೆ. ದಿನದಿಂದ ದಿನಕ್ಕೆ ನಗರದ ಸಾಕಷ್ಟು ಬೆಳೆಯುತ್ತಿದೆ. ಹೀಗಾಗಿ ನಗರದಲ್ಲಿ ವಾಹನ ದಟ್ಟನೆ ಸಾಮಾನ್ಯವಾಗಿದೆ. ಆದರೆ, ನಗರದ ರಸ್ತೆಯಲ್ಲಿ ಸೃಷ್ಟಿಯಾಗಿರುವ ದೊಡ್ಡ ಗುಂಡಿಗಳಿಂದ ಚಾಲಕರು ಜೀವಭಯದಿಂದ ವಾಹನ ಚಾಲನೆ ಮಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಅನ್‌ಮೋಲ್ ಹೋಟೆಲ್ ಬಳಿಯ ರಸ್ತೆಯ ಗುಂಡಿಯಲ್ಲಿ ಬೈಕ್‌ ಸವಾರನೊಬ್ಬ ಬಿದ್ದು ಆಸ್ಪತ್ರೆ ಸೇರಿರುವುದು ಗುಂಡಿಯ ತೀವ್ರತೆ ತೋರಿಸುತ್ತವೆ.

ನಗರದ ಕೆಲ ಭಾಗಗಳಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಮಧ್ಯೆ ಗುಂಡಿ ತೆಗೆದು ಪೈಪ್‌ ಅಳವಡಿಸಿರುವುದು ರಸ್ತೆ ಹಾಳಾಗಲು ಪ್ರಮುಖ ಕಾರಣ. ಕಾಮಗಾರಿ ಪೂರ್ಣಗೊಂಡ ನಂತರ ಸರಿಯಾಗಿ ಮುಚ್ಚದ ಪರಿಣಾಮ ಮಳೆನೀರು ನಿಂತು ಕೆಸರಿನ ಹೊಂಡಗಳಾಗಿ ಮಾರ್ಪಟ್ಟಿದೆ. ಇನ್ನೂ ಕೆಲವಡೆ ಅಪೂರ್ಣ ಕಾಮಗಾರಿ ಸಂಚಾರಕ್ಕೆ ತೊಂದರೆ ಮಾಡಿದೆ. ಮಳೆ ಬರುವ ಮುನ್ನ ಧೂಳಿನ ಆಗರವಾಗಿದ್ದ ರಸ್ತೆಗಳು ಈಗ ಸಂಚರಿಸುವವರಿಗೆ ಕೆಸರಿನ ಮಜ್ಜನ ಮಾಡಿಸುತ್ತಿದೆ.

ನಗರದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದ ದುರಸ್ತಿಗೆ ಪಾಲಿಕೆ ಅಧಿಕಾರಿಗಳು ಇನ್ನೂ ಮನಸ್ಸು ಮಾಡಿಲ್ಲ. ಹೀಗಾಗಿ ರಸ್ತೆ ಮಧ್ಯೆ ದೊಡ್ಡ ಗುಂಡಿಗಳು ನಿರ್ಮಾಣವಾಗಿ ಸಂಚಾರಕ್ಕೆ ಅಸಾಧ್ಯದ ಪರಿಸ್ಥಿತಿ ತಂದೊಡ್ಡಿವೆ. ನೀರು ಹರಿದು ಹೋಗಲು ಜಾಗವಿಲ್ಲದೆ ರಸ್ತೆಯಲ್ಲಿಯೇ ನೀರು ನಿಲ್ಲುತ್ತಿದೆ.

ಕಳೆದ ಎಂಎಲ್ಎ ಚುನಾವಣೆ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ನಗರದಲ್ಲಿ ಹದಗೆಟ್ಟು ರಸ್ತೆಯಲ್ಲಿ ತರಾತುರಿಯಾಗಿ ಗುಂಡಿ ಮುಚ್ಚುವ ಕೆಲಸ ಮಾಡಿದ್ದರು. ಆದರೆ, ಈ ಕಾಮಗಾರಿ ಕಳಪೆಯಾಗಿದ್ದರಿಂದ ದುರಸ್ತಿ ಮಾಡಿದ ಕೆಲವೇ ಕೆಲವು ದಿನಗಳಲ್ಲಿ ರಸ್ತೆಯ ಮೇಲ್ಪದರಗಳು ಕಿತ್ತು ಮತ್ತೆ ಗುಂಡಿ ಬಿದ್ದಿದ್ದವು. ಇತ್ತೀಚೆಗೆ ಸುರಿದ ಮಳೆಯಿಂದ ಅಲ್ಲಲ್ಲಿ ಗುಂಡಿಗಳಾಗಿದೆ. ಅಧಿಕಾರಿಗಳು ಅವುಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿಲ್ಲ. ನಿತ್ಯ ಈ ರಸ್ತೆಗಳಲ್ಲಿ ಓಡಾಟ ಮಾಡಿದರೂ ದುರಸ್ತಿ ಬಗ್ಗೆ ಪಾಲಿಕೆ ಅಧಿಕಾರಿಗಳು ಇಷ್ಟು ದಿನ ಎಳ್ಳಷ್ಟು ಚಿಂತೆ ಮಾಡಲಿಲ್ಲ. ಈಗ ಗುಂಡಿಗೆ ಇಟ್ಟಿಗೆಪುಡಿ ತಂದು ಹಾಕುತ್ತಿದ್ದಾರೆ. ರಸ್ತೆಯ ದುರಸ್ತಿ ಬಗ್ಗೆ ಜನಪ್ರತಿನಿಧಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪ.

 

•ವಿಶೇಷ ವರದಿ

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.