ಸಂಸದರಿಂದ ತುಂಗಾ ಏತ ನೀರಾವರಿ ಕಾಮಗಾರಿ ವೀಕ್ಷಣೆ
Team Udayavani, Jun 30, 2020, 1:16 PM IST
ಶಿಕಾರಿಪುರ: ಚಟ್ನಳ್ಳಿ ಜಾಕ್ವೆಲ್ ಬಳಿ ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು.
ಶಿಕಾರಿಪುರ: ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತಿದ್ದ ತುಂಗಾನದಿಯ ನೀರನ್ನು ಸದ್ಬಳಕೆ ಮಾಡಿಕೊಂಡು ಶಿಕಾರಿಪುರ ಮತ್ತು ಹಿರೇಕೇರೂರು ತಾಲೂಕಿನ 7,000 ಹೆಕ್ಟೇರ್ ಭೂಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ, 225 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಈ ಭಾಗದಲ್ಲಿ ಬತ್ತಿಹೋಗುತ್ತಿದ್ದ ಅಂತರ್ಜಲ ಮಟ್ಟ ಹೆಚ್ಚಿಸುವಲ್ಲಿ 661ಕೋಟಿ ರೂ. ವೆಚ್ಚದ ತುಂಗಾ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ರಟ್ಟಿಹಳ್ಳಿ ತಾಲೂಕಿನ ಚಟ್ನಳ್ಳಿಯ ನದಿ ತೀರದ ಜಾಕ್ವೆಲ್ನ ಪಾಯಿಂಟ್ನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಆರಂಭಗೊಂಡ ಈ ಕಾಮಗಾರಿಯು ಯಾವುದೇ ಕಾರಣಕ್ಕೆ ನಿಲ್ಲದಂತೆ ಮುಂದುವರೆಸುವಂತೆ ನೋಡಿಕೊಳ್ಳಲಾಗುವುದು. ಅಲ್ಲದೇ ಅಗತ್ಯವಿರುವ ವಿದ್ಯುತ್ ಅನ್ನು ಸರಬರಾಜು ಮಾಡಲು 110ಕೆ.ವಿ. ವಿದ್ಯುತ್ ಸ್ಟೇಷನ್ ಆರಂಭಿಸಿ, ವಿದ್ಯುತ್ ಒದಗಿಸುವ ಕಾಮಗಾರಿಯೂ ಜೊತೆಯಲ್ಲಿಯೇ ಸಾಗಿದೆ. ಈ ಯೋಜನಾ ವ್ಯಾಪ್ತಿಯ ಒಟ್ಟು ಕೆರೆಗಳಲ್ಲಿ ಈಗಾಗಲೇ 75 ಕೆರೆಗಳ ಹೂಳೆತ್ತುವ, ಏರಿ ದುರಸ್ತಿ, ಕಾಲುವೆ, ಗೇಟು ನಿರ್ಮಾಣ ಮುಂತಾದ ಕಾಮಗಾರಿಗಳಿಗೆ ಯೋಜನಾ ವೆಚ್ಚದ 100ಕೋಟಿ ರೂ. ಬಳಸಿಕೊಳ್ಳಲಾಗುವುದು ಎಂದರು. ಈಗಾಗಲೇ ಈ ಕಾಮಗಾರಿ ಅಧೀಕೃತವಾಗಿ ಆರಂಭಗೊಂಡಿದ್ದು, ಮುಂದಿನ ಒಂದು ವರ್ಷದ ಅವ ಧಿಯೊಳಗಾಗಿ ಪೂರ್ಣಗೊಳಿಸುವ ವಿಶ್ವಾಸವಿದೆ. ರೈತಸ್ನೇಹಿ ಯೋಜನೆ ಪೂರ್ಣಗೊಳಿಸುವಲ್ಲಿ ಅಗತ್ಯವಿರುವ ಅನುದಾನವನ್ನು ಕಾಯ್ದಿರಿಸಲಾಗಿದೆ. ಅಲ್ಲದೇ ನಬಾಡ್ ìನಿಂದ 500ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದರು.
ತುಂಗಾನದಿಯ 250ಮೀ. ಅಗಲ ಎರಡೂ ಬದಿ ಸೇರುವವರೆಗೆ ಮೂರು ಮೀ. ಎತ್ತರದವರೆಗೆ ಬ್ಯಾರೇಜ್ ನಿರ್ಮಾಣ ಮಾಡಲಾಗುವುದು. ಈ ಯೋಜನೆಗಳಲ್ಲದೇ ಶಿವಮೊಗ್ಗ ತಾಲೂಕಿನ ಹೊಸಹಳ್ಳಿ, ಶಿಕಾರಿಪುರ ತಾಲೂಕಿನ ತಾಳಗುಂದ, ಉಡುಗುಣಿ ಮತ್ತು ಹೊಸೂರು, ಸೊರಬ ತಾಲೂಕಿನ ಮೂಗೂರು, ಮೂಡಿ ಮತ್ತು ಕಚವಿ ಏತನೀರಾವರಿ ಯೋಜನೆ, ಅಲ್ಲದೇ ನೆರೆಯ ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳ ಏತ ನೀರಾವರಿ ಯೋಜನೆಗಳಿಗೆ ಸುಮಾರು 2,500ಕೋಟಿ ರೂ. ಅನ್ನು ಸರ್ಕಾರ ಈಗಾಗಲೇ ಮಂಜೂರು ಮಾಡಿದ್ದು, ಕಾಮಗಾರಿ ಆರಂಭಗೊಂಡಿದೆ ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಬೈಂದೂರಿನ ಸೌಕೂರು-ಸಿದ್ದಾಪುರ ಏತ ನೀರಾವರಿ ಯೋಜನೆ, ಬೈಂದೂರು ನಗರಕ್ಕೆ ನೀರು ಒದಗಿಸುವ
ಯೋಜನೆಯೂ ಪ್ರಗತಿಯಲ್ಲಿದೆ. ಶಿಕಾರಿಪುರ ತಾಲೂಕಿನ ಕಸಬಾ ಹೋಬಳಿಯ ಹಾಗೂ ಹಿರೇಕೇರೂರು ತಾಲೂಕಿನ ಸರ್ವಜ್ಞ ಏತ ನೀರಾವರಿ ಯೋಜನೆಗೆ ಶೀಘ್ರದಲ್ಲಿ
ಸರ್ಕಾರದಿಂದ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಅಂತೆಯೇ ಹಾನಗಲ್ ತಾಲೂಕಿನಲ್ಲಿ 350ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೂ ಚಾಲನೆ ದೊರೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ