ಸ್ವಾತಂತ್ರ್ಯ ಸ್ವೇಚ್ಛಾಚಾರವಲ್ಲ : ಸಚಿವ ಈಶ್ವರಪ್ಪ

ಸಮಾನತೆ- ಸಹೋದರತೆ- ಸಾಮರಸ್ಯ ಎಲ್ಲರ ಬದುಕಿನ ಭಾಗವಾಗಲಿ

Team Udayavani, Aug 16, 2021, 4:44 PM IST

16-13

ಶಿವಮೊಗ್ಗ: ಸ್ವಾತಂತ್ರ್ಯವೆಂದರೆ ಸ್ವೇಚ್ಛಾಚಾರವಲ್ಲ. ಸಮಾನತೆ, ಸಹೋದರತೆ, ಸಾಮರಸ್ಯ ನಮ್ಮ ನಿತ್ಯ ಬದುಕಿನ ಭಾಗವಾಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಜಿಲ್ಲಾ ಪೊಲೀಸ್‌ ಪರೆಡ್‌ ಮೈದಾನದಲ್ಲಿ ಭಾನುವಾರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಾನೂನು ಗೌರವಿಸುವುದು, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಗರ ಪ್ರದೇಶದಲ್ಲಿ ಅಲ್ಲದೆ ಗ್ರಾಮಾಂತರ ಪ್ರದೇಶದಲ್ಲೂ ವೈಜ್ಞಾನಿಕವಾಗಿ ಕಸ ವಿಲೇ ಮಾಡಲು ಜಿಲ್ಲೆಯ 269 ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲಾಗುತ್ತಿದೆ. ಈಗಾಗಲೆ 100 ಪಂಚಾಯಿತಿಗಳಲ್ಲಿ ಸಂಕೀರ್ಣ ನಿರ್ಮಿಸಿ ಕಸ ಸಂಗ್ರಹ ಆರಂಭಿಸಲಾಗಿದೆ. 84 ಪಂಚಾಯಿತಿಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 242 ಸ್ವತ್ಛ ವಾಹಿನಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಒದಗಿಸಲಾಗಿದೆ ಎಂದರು.

ಮುಂದಿನ ಎರಡು ವರ್ಷದಲ್ಲಿ ಎಲ್ಲ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ರೂಪಿಸಲಾಗಿದೆ. ಬೆಳೆ ಸಮೀಕ್ಷೆಗೆ ಮುಂಗಾರು ಬೆಳೆ ವಿವರವನ್ನು ಅಪ್‌ ಲೋಡ್‌ ಮಾಡಲು ಆ.31ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರ ಆರ್ಥಿಕ ಚಿತ್ರಣ ಬದಲಾಯಿಸುವ ನೀರಾವರಿ ಯೋಜನೆಗಳನ್ನು ದಾಖಲೆ ಅವಧಿ ಒಳಗಾಗಿ ಪೂರ್ಣಗೊಳಿಸಿರುವುದು ನಮ್ಮ ಹೆಗ್ಗಳಿಕೆ. ಕೆರೆಗಳನ್ನು ತುಂಬಿಸುವ ಈ ಯೋಜನೆಗಳಿಂದ ರೈತರ ಹೊಲಗಳಿಗೆ ಬೇಸಿಗೆಯಲ್ಲೂ ನೀರು ಸಿಗಲಿದೆ. ಉಡುಗಣಿ ತಾಳಗುಂದ ಏತ ನೀರಾವರಿ ಯೋಜನೆ, ಹೊಸಳ್ಳಿ ಏತ ನೀರಾವರಿ ಯೋಜನೆ, ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆ ಹಾಗೂ ಕಸಬಾ ಏತ ನೀರಾವರಿ ಯೋಜನೆಗಳು ಮುಂದಿನ ದಿನಗಳಲ್ಲಿ ರೈತರ ಬದುಕಲ್ಲಿ ಬೆಳಕು ಹರಿಸಲಿವೆ ಎಂದರು.

ಕೊರೊನಾ 3ನೇ ಅಲೆ ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಕ್ಷೇತ್ರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ತಾಲೂಕು ಆಸ್ಪತ್ರೆಗಳು, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲು ನಮಗೆ ಸಾಧ್ಯವಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ಗಳು ಮಾತ್ರವಲ್ಲದೆ, ಆಕ್ಸಿಜನ್‌ ಉತ್ಪಾದನಾ ಘಟಕಗಳನ್ನು ಸಹ ಸ್ಥಾಪಿಸುವ ಸಿದ್ಧತೆ ಕೈಗೊಳ್ಳಲಾಗಿದೆ. ಶಿವಮೊಗ್ಗದಲ್ಲಿ 30 ಸಾವಿರ ಲೀಟರ್‌, ಸಾಗರ ಮತ್ತು ಶಿಕಾರಿಪುರದಲ್ಲಿ ತಲಾ 6ಸಾವಿರ ಲೀಟರ್‌, ಹೊಸನಗರದಲ್ಲಿ 2ಸಾವಿರ ಸಾಮರ್ಥ್ಯದ ಆಕ್ಸಿಜನ್‌ ಉತ್ಪಾದನಾ ಘಟಕಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಮೆಗ್ಗಾನ್‌ ಆವರಣದಲ್ಲಿ 50 ಹಾಸಿಗೆ ಸಾಮರ್ಥ್ಯದ ಕ್ಯಾಥ್‌ಲ್ಯಾಬ್‌ ಲೋಕಾರ್ಪಣೆ ಮಾಡಲಾಗಿದ್ದು, ಬಡವರಿಗೆ ಹೃದಯ ಕಾಯಿಲೆಗಳಿಗೆ ಅತ್ಯಾಧುನಿಕ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಲು ಸಾಧ್ಯವಾಗಿದೆ. ಸ್ಮಾರ್ಟ್‌ ಸಿಟಿ ಕಾಮಗಾರಿಗಳು ನಗರದ ಚಿತ್ರಣವನ್ನೇ ಬದಲಾಯಿಸಲಿದೆ.

ಒಳಚರಂಡಿ, ಭೂಗತ ವಿದ್ಯುತ್‌ ಕೇಬಲ್‌ ಅಳವಡಿಕೆ, ಮಾದರಿ ರಸ್ತೆಗಳ ನಿರ್ಮಾಣ, ವಿಶಾಲವಾದ ಪಾದಚಾರಿ ಮಾರ್ಗಗಳು, ಕಣ್ಮನ ಸೆಳೆಯುವ ಉದ್ಯಾನವನಗಳು, ಪಾರಂಪರಿಕ ತಾಣಗಳ ಅಭಿವೃದ್ಧಿ ಸೇರಿದಂತೆ 53 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿವೆ. 943 ಕೋಟಿ ರೂ. ಮೊತ್ತದ 38 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ, ರುದ್ರೇಗೌಡ, ಮೇಯರ್‌ ಸುನೀತಾ ಅಣ್ಣಪ್ಪ, ಉಪ ಮೇಯರ್‌ ಶಂಕರ್‌ ಗನ್ನಿ, ಪ್ರತಿಪಕ್ಷದ ನಾಯಕ ಎಚ್‌.ಸಿ.ಯೋಗೇಶ್‌, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ಎಸ್‌.ಎಸ್‌.ಜ್ಯೋತಿಪ್ರಕಾಶ್‌, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ, ಡಿಸಿ ಕೆ.ಬಿ. ಶಿವಕುಮಾರ್‌, ಸಿಇಒ ಎಂ.ಎಲ್‌. ವೈಶಾಲಿ, ಎಸ್ಪಿ ಲಕ್ಷ್ಮೀ ಪ್ರಸಾದ್‌, ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಮತ್ತಿತರರು ಇದ್ದರು. ಇದೇ ಸಂದರ್ಭ ಕೊರೊನಾ ವಾರಿಯರ್ಸ್‌ ಗಳಾದ ಆರೋಗ್ಯ ಇಲಾಖೆ, ಪಾಲಿಕೆ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.