ಕೇಂದ್ರದಿಂದ ರೈತರಿಗೆ ಅನ್ಯಾಯ: ತೀನ


Team Udayavani, Jan 15, 2021, 3:52 PM IST

Unfair to the farmers from the center

ಶಿವಮೊಗ್ಗ: ಅಡಕೆ ಬೆಳೆಗಾರರ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ತೀ.ನ. ಶ್ರೀನಿವಾಸ್‌ ಹೇಳಿದರು.

ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು 2018 ರಲ್ಲಿ ತೀರ್ಥಹಳ್ಳಿಗೆ ಬಂದಿದ್ದಾಗ ಅಡಕೆ ಬೆಳೆಗಾರರ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ, ಈಗ ಅವರು ಕೊಟ್ಟ ಮಾತನ್ನೇ ಮರೆತಿದ್ದಾರೆ ಎಂದರು.

ಕಳೆದ 6 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಅಡಕೆ ಬೆಳೆಗಾರರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಕರ್ನಾಟಕದಲ್ಲಿ ಸುಮಾರು 15 ಸಂಸದರು, 100 ಶಾಸಕರು ಅಡಕೆ ಬೆಳೆಗಾರರಿದ್ದಾರೆ. ಇವರ್ಯಾರು ಕೂಡ ಅಡಕೆ ಬೆಳೆಗಾರರ ಹಿತ ಕಾಯುವಲ್ಲಿ ಮುಂದೆ ಬಂದಿಲ್ಲ ಎಂದು ದೂರಿದರು. ಈಗ ಅಮಿತ್‌ ಶಾ ಅವರು ಶಿವಮೊಗ್ಗ ಜಿಲ್ಲೆಗೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಬಿಜೆಪಿ ನಾಯಕರು ಅವರು ತೀರ್ಥಹಳ್ಳಿಗೆ ಬಂದಿದ್ದಾಗ ಅಡಕೆ ಬೆಳೆಗಾರರ ರಕ್ಷಣೆ ಮಾಡುವುದಾಗಿ ಮಾತು ಕೊಟ್ಟಿದ್ದನ್ನು ನೆನಪಿಸಿ ತಕ್ಷಣವೇ ಸುಪ್ರೀಂ ಕೋರ್ಟ್‌ ಗೆ ಮನವಿ ಮಾಡಿ ಸಂಶೋಧನೆಗೆ ಸಮಿತಿ ರಚಿಸುವಂತೆ ಅಡಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ಕೋರ್ಟ್‌ ಗೆ ಮನದಟ್ಟು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಸಂಭ್ರಮ-ಸಡಗರದ ಸಂಕ್ರಾಂತಿ

ಕರ್ನಾಟಕದಲ್ಲಿ ಅಡಕೆ ಸಂಶೋಧನೆಗಾಗಿ ಎಂ.ಎಸ್‌. ರಾಮಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವಹಿಸಲಾಗಿದೆ. ಆದರೆ, ಈ ಸಂಶೋಧನೆಯನ್ನು ಸುಪ್ರೀಂ ಕೋರ್ಟ್‌ ಒಪ್ಪುವುದಿಲ್ಲ. ಸುಪ್ರೀಂಕೋರ್ಟ್‌ ನಿಂದಲೇ ನೇರವಾಗಿ ಸಮಿತಿ ರಚಿಸಬೇಕು, ಈ ಹಿನ್ನಲೆಯಲ್ಲಿ ಸಂಸದ ರಾಘವೇಂದ್ರ ಮತ್ತು ಇತರ ಸಂಸದರು ಒತ್ತಡ ತರಬೇಕು. ಅಮಿತ್‌ ಶಾ ಅವರಿಗೆ ಇದನ್ನು ವಿವರಿಸಿ ತಿಳಿಸಬೇಕು ಎಂದು ಆಗ್ರಹಿಸಿದರು. ಕಸ್ತೂರಿ ರಂಗನ್‌ ವರದಿ ಜಾರಿಯಾಗಬಾರದು. ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಬಗೆಹರಿಸಬೇಕು. ವಿಐಎಸ್‌ ಎಲ್‌, ಎಂಪಿಎಂ ಉಳಿಯಬೇಕು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕು ಎಂದು ಹೇಳಿದರು.

ಬಿ.ವೈ. ರಾಘವೇಂದ್ರ ಅವರು ಇತ್ತೀಚೆಗೆ ಬುರುಡೆ ಬಿಡುವುದನ್ನು ಕಲಿತಿದ್ದಾರೆ. ರೈತರ ಪರ ಅವರ ಮಾತುಗಳು ಕೇವಲ ಬೂಟಾಟಿಕೆ. ಅವರ ಡೋಂಗಿ ಮಾತುಗಳಿಗೆ ಅಡಕೆ ಬೆಳೆಗಾರರು, ಸಾಗುವಳಿದಾರರು ಮರುಳಾಗುತ್ತಿದ್ದಾರೆ ಅಷ್ಟೆ. ಸಾಗುವಳಿದಾರರ ಪರವಾಗಿ ಹೋರಾಟನಡೆಸಿದ್ದ ಇವರು ಇಂದು ಬಾಯಿಗೆ ಬೀಗ  ಹಾಕಿಕೊಂಡಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ರವಿ ಜಂಬಗಾರು, ಸುಭಾಷ್‌ ಇದ್ದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.