ಲಸಿಕೆ ಅಡ್ಡ ಪರಿಣಾಮ: ಇಬ್ಬರು ಬಾಲಕರು ಅಸ್ವಸ್ಥ
ಎಣ್ಣೆಕೊಪ್ಪದ ಬಾಲಕರ ನಿವಾಸಕ್ಕೆ ಪ್ರಸನ್ನಕುಮಾರ್ ಸಮನವಳ್ಳಿ ಭೇಟಿ
Team Udayavani, May 25, 2022, 5:26 PM IST
ಸೊರಬ: ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಕೊರೊನಾ ಲಸಿಕೆಯ ಅಡ್ಡ ಪರಿಣಾಮದಿಂದ ಅಸ್ವಸ್ಥಗೊಂಡಿರುವ ಬಾಲಕರ ನಿವಾಸಕ್ಕೆ ಸಮಾಜ ಸೇವಕ ಪ್ರಸನ್ನಕುಮಾರ್ ಎಂ. ಸಮನವಳ್ಳಿ ಮಂಗಳವಾರ ಭೇಟಿ, ಬಾಲಕರ ಯೋಗಕ್ಷೇಮ ವಿಚಾರಿಸಿದರು.
ಆನವಟ್ಟಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಧು ಚಂದ್ರ ಹಾಗೂ ಸಾಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮನುಚಂದ್ರನಿಗೆ ಕಳೆದ ಜನವರಿ ತಿಂಗಳಿನಲ್ಲಿ ಕೊರೊನಾ ಲಸಿಕೆ ನೀಡಲಾಗಿತ್ತು. ಲಸಿಕೆ ಪಡೆದ ಬಳಿಕ ಅಡ್ಡ ಪರಿಣಾಮದಿಂದ ಬಾಲಕರ ಅಂಗಾಗಗಳು ಸ್ವಾಧೀನ ಕಳೆದುಕೊಂಡಿವೆ. ಬೆಂಗಳೂರು ಸೇರಿದಂತೆ ಹಲವಡೆ ಚಿಕಿತ್ಸೆ ಸಹ ಕೊಡಿಸಲಾಗಿದೆ. ಈ ಬಗ್ಗೆ ಹಲವಾರು ಸಚಿವರು, ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮಕ್ಕಳು ಹಾಸಿಗೆಯಲ್ಲಿಯೇ ಜೀವನ ಸಾಗಿಸುವಂತಾಗಿದೆ ಎಂದು ಬಾಲಕರ ತಂದೆ ಚಂದ್ರಾನಾಯ್ಕ ತಮ್ಮ ಅಳಲನ್ನು ತೋಡಿಕೊಂಡರು.
ಸಮಾಜ ಸೇವಕ ಪ್ರಸನ್ನಕುಮಾರ್ ಎಂ. ಸಮನವಳ್ಳಿ ಸುದ್ದಿಗಾರರೊಂದಿಗೆ ಮಾತನಾಡಿ, ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಬಾಲಕರ ಬದುಕಿನಲ್ಲಿ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮವಾಗಿದೆ ಎನ್ನಲಾಗುತ್ತಿದೆ. ಕೂಲಿ ಮಾಡಿ ಬದುಕುವ ಕುಟುಂಬ ಇದೀಗ ಸಂಕಷ್ಟದಲ್ಲಿರುವುದನ್ನು ಅರಿತು ಕೈಲಾದ ಸಹಾಯ ಮಾಡುತ್ತಿದ್ದೇನೆ.
ಶ್ರೀ ರೇಣುಕಾಂಬಾ ವೆಂಚರ್ ಪ್ರೈ. ಲಿಮಿಟೆಡ್ ವತಿಯಿಂದ ಮಾಸಿಕವಾಗಿ ಕುಟುಂಬಕ್ಕೆ ಐದು ಸಾವಿರ ರೂ., ಸಹಾಯಧನ ನೀಡಲು ಸಂಸ್ಥೆಯ ಮಾಲಿಕರಾದ ರತ್ನಾ ಪ್ರಸನ್ನಕುಮಾರ್ ಅವರು ಸಮ್ಮತಿ ನೀಡಿದ್ದಾರೆ.
ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಕೈಲಾದ ಸಹಕಾರವನ್ನು ನೀಡಲಾಗುವುದು. ಕೊರೊನಾ ಲಸಿಕೆಯು ದೇಹದಲ್ಲಿ ಶಕ್ತಿ ಕಳೆದುಕೊಂಡ ತರುವಾಯ ಮಕ್ಕಳು ಸಹಜ ಸ್ಥಿತಿಗೆ ಮರಳುವರು ಎಂದು ಕೇಳಿದ್ದೇನೆ. ಶೀಘ್ರದಲ್ಲೇ ಮಕ್ಕಳು ಗುಣಮುಖರಾಗಲಿ ಎಂದು ಆಶಿಸಿದರು.
ಮುಖಂಡರಾದ ಖಲಂದರ್ ಸಾಬ್ ಆನವಟ್ಟಿ, ಚಂದ್ರಪ್ಪ ಸಮನವಳ್ಳಿ, ಮಧು, ಆರ್. ಭೀಮೇಶ್, ಶ್ರೀನಿವಾಸ್ ಎಣ್ಣೆಕೊಪ್ಪ, ಕುಮಾರ ನಾಯ್ಕ, ಮಂಜಪ್ಪ, ಆಂಜನೇಯ, ಕುಮಾರ ನಾಯ್ಕ, ಪುಟ್ಟಾನಾಯ್ಕ, ಲಕ್ಷಣ ನಾಯ್ಕ, ಮೈಲಾರ ನಾಯ್ಕ, ಸುರೇಶ್ ನಾಯ್ಕ, ಮಂಜಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ