ವರದಪುರದಲ್ಲಿ ಪಾದುಕೆ ಪೂಜೆಗೆ ಅವಕಾಶ
Team Udayavani, Feb 5, 2022, 7:50 PM IST
ಸಾಗರ: ಫೆ. ಏಳರ ಸೋಮವಾರದಿಂದ ತಾಲೂಕಿನ ವರದಪುರದ ಶ್ರೀಧರಾಶ್ರಮದಲ್ಲಿ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಗಳವರ ದಿವ್ಯ ಪಾದುಕೆಗಳ ಪಾದಪೂಜೆಯನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಭಕ್ತಾದಿಗಳ ಹೆಸರು, ಗೋತ್ರ, ರಾಶಿ, ನಕ್ಷತ್ರ ಮುಂತಾದವುಗಳೊಡನೆ ಸಂಕಲ್ಪ ಮಾಡಿ ಭಕ್ತರ ಉಪಸ್ಥಿತಿಯಲ್ಲಿ ಅರ್ಚಕರ ಹಸ್ತದಿಂದ ಮಾಡಲು ಸಂಕಲ್ಪಿಸಲಾಗುತ್ತದೆ ಎಂದು ಶ್ರೀಕ್ಷೇತ್ರ ವರದಪುರದ ಶ್ರೀಧರ ಸೇವಾ ಮಹಾಮಂಡಲ ಪ್ರಕಟಣೆ ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ವಿವರ ಪ್ರಕಟಿಸಿರುವ ಮಹಾಮಂಡಲ, ಅರ್ಚಕರು ಭಕ್ತರ ಎದುರು ಸಂಕಲ್ಪವನ್ನು ಮಾಡಿ ಪಾದ ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ನೀಡುತ್ತಾರೆ. ಭಕ್ತರಿಗೆ ಪಾದುಕೆಯನ್ನು ಸ್ಪರ್ಶ ಮಾಡಲು ಮತ್ತು ಹೂವು, ತುಳಸಿ, ಅಕ್ಷತೆಯನ್ನು ಹಾಕಲು ಅವಕಾಶವಿರುವುದಿಲ್ಲ. ಈ ನಿಯಮಕ್ಕೆ ಒಪ್ಪಿಗೆ ಇದ್ದವರು ಮಾತ್ರ ಈ ಸೇವೆಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ತಿಳಿಸಿದರು.
ಪಾದುಕಾ ಪೂಜೆಯ ಸಮಯ ಬೆಳಗ್ಗೆ 8-30 ರಿಂದ 9-30 ವರೆಗೆ ಹಾಗೂ 10-30ರಿಂದ 11-30ವರೆಗೆ ಮಾತ್ರ. ಒಂದು ಬಾರಿಗೆ ಇಪ್ಪತ್ತೈದು ಪೂಜೆಗೆ ಮಾತ್ರ ಅವಕಾಶ. ಮೊದಲು ಬಂದವರಿಗೆ ಆದ್ಯತೆ ಎಂದು ಶ್ರೀಧರಾಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ