ವೀರಭದ್ರ ಎಲ್ಲ ಸಮುದಾಯದ ಆರಾಧ್ಯದೇವ;, ಸಂಸದ ಬಿ.ವೈ. ರಾಘವೇಂದ್ರ

ವೀರಭದ್ರರ ಅವತಾರ ಭಾರತದ ಅಖಂಡತೆಯನ್ನು ಸಾರುತ್ತದೆ

Team Udayavani, Sep 6, 2022, 6:34 PM IST

ವೀರಭದ್ರ ಎಲ್ಲ ಸಮುದಾಯದ ಆರಾಧ್ಯದೇವ;, ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ವೀರಭದ್ರ ವೀರನೂ ಹೌದು, ಭದ್ರನೂ ಹೌದು. ದುಷ್ಟರ ಪಾಲಿಗೆ ಶಿಕ್ಷಕನಾಗಿದ್ದಾನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಸೋಮವಾರ ಆಯೋಜಿಸಿದ್ದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದ ಮುಂದಿನ ಪೀಳಿಗೆಗೆ ಮೇಲ್ಪಂಕ್ತಿ ಹಾಕುವ ಸಲುವಾಗಿ ಯಡಿಯೂರಪ್ಪನವರು ಹಿರಿಯರೊಂದಿಗೆ ಚರ್ಚಿಸಿ ವೀರಭದ್ರ ಜಯಂತಿಗೆ ಕ್ರಮ ಕೈಗೊಂಡಿದ್ದಾರೆ. ಈ ಜಯಂತಿ ಮಾಡಲು ಸರ್ಕಾರ ಘೋಷಣೆ ಮಾಡುವಲ್ಲಿ ಪ್ರದೀಪ್‌ ಕಂಕನವಾಡಿಯವರ ಶ್ರಮ ಇದೆ. ಎಲ್ಲಾ ಸಮುದಾಯದವರು ವೀರಭದ್ರನ ಆರಾಧನೆ ಮಾಡುತ್ತಾರೆಂಬ ಕಾರಣಕ್ಕೆ ಆಚರಿಸಲಾಗುತ್ತದೆ. ಮಂಗಳವಾರ ವೀರಭದ್ರ ಹುಟ್ಟಿದ ದಿನವಾಗಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮಾತನಾಡಿ, ವೀರಶೈವ ಸಮಾಜ ವೀರಭದ್ರನ ತರವೇ ಇರಬೇಕು. ಶಿವನ ಕೋಪದಿಂದ ಉದ್ಭವಿಸಿದ ವೀರಭದ್ರ ಅಪಮಾನಕಾರಿ ಸಂಗತಿಗಳಾದಾಗ ದಂಡಿಸುವ ಕೆಲಸ ಮಾಡಿದ್ದಾನೆ. ವೀರಶೈವ ಲಿಂಗಾಯತ ಎಂದು ಒಡೆಯುವ ಕೆಲಸವೂ ನಡೆದಿತ್ತು. ನಾವ್ಯಾರು ಎಂಬ ಅನುಮಾನವೂ ಆರಂಭವಾಗಿತ್ತು. ನಮ್ಮ ಸಂಪ್ರದಾಯ, ಆಚರಣೆ, ಸಂಸ್ಕೃತಿಯನ್ನು ಹೇಳಿಕೊಡಬೇಕಿದೆ. ಹುಟ್ಟಿನಿಂದ ವೀರಶೈವರಾಗುತ್ತಿದ್ದೇವೆಯೇ ಹೊರತೂ ಆಚರಣೆಯನ್ನು ಬಿಡುತ್ತಿದ್ದೇವೆ. ಇದು ಆಗಬಾರದು ಎಂದರು.

ಕುವೆಂಪು ವಿವಿ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಮಾತನಾಡಿ, ಯಾವ ಆಚರಣೆಗಳು ಸಮಾಜಕ್ಕೆ ಬೇಕಾಗಿದೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯಿತರು ಬೆಳೆಯಬೇಕು. ಅಭಿವೃದ್ಧಿ ಪಥವನ್ನು ಕಾಣಬೇಕು. ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ವೀರಭದ್ರೇಶ್ವರ ಅಮರ ಎಂದು ತಿಳಿದು ನಮ್ಮ ಸಮಾಜ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಬೇಕಾಗಿದೆ.

ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಶೇ. 100 ರಷ್ಟು ಜನ ಉನ್ನತ ಶಿಕ್ಷಣ ಪಡೆಯುತ್ತಾರೆ. ಹಾಗಾಗಿ ಅಲ್ಲಿ ಬಡತನ, ದಾರಿದ್ರ್ಯವಿಲ್ಲ. ನಮ್ಮ ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಶೇ. 26 ರಷ್ಟು ಮಾತ್ರ. ಹಾಗಾಗಿ ನಾವು ಬಡತನ ಅನುಭವಿಸುತ್ತಿದ್ದೇವೆ. ನಮ್ಮ ಸಮಾಜದ ಆಚರಣೆಗಳನ್ನು ಬಿಡದೇ ಸಮಾಜದ ಎಲ್ಲಾ ಬಂಧುಗಳು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು ಎಂದರು.

ವೀರೇಶ್‌ ಬಾಬು ವಿಶೇಷ ಉಪನ್ಯಾಸ ನೀಡಿ, ವೀರಭದ್ರನಲ್ಲಿಯೂ ಶಿವ ಶಕ್ತಿ ಇದೆ. ಭದ್ರಕಾಳಿ ಸ್ವರೂಪನಾಗಿ ಉದ್ಭವಾದವನು ವೀರಭದ್ರ. ವೀರಶೈವ ಧರ್ಮದ ಸಾರವನ್ನು ಜಗತ್ತಿಗೆ ಸಾರಿದವನು ವೀರಭದ್ರ. ವೀರಭದ್ರರ ಅವತಾರ ಭಾರತದ ಅಖಂಡತೆಯನ್ನು ಸಾರುತ್ತದೆ. ಬೇರೆ ಬೇರೆ ರೂಪದಲ್ಲಿ ಜನ್ಮ ತಾಳಿ ಲೋಕ ಕಲ್ಯಾಣ ಮಾಡಿದ್ದಾರೆ ಎಂದರು.

ರಂಭಾಪುರಿ ಪೀಠದ ಶ್ರೀ ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ಮಳಲಿ ಮಠದ ಶ್ರೀ ಡಾ|ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರಯ ಅಧ್ಯಕ್ಷ ಪ್ರದೀಪ್‌ ಕಂಕಣವಾಡಿ, ಜಿಲ್ಲಾಧ್ಯಕ್ಷ ಸಿ.ಪಿ. ಈರೇಶ್‌ ಗೌಡ್ರು, ಎಸ್‌.ಎಸ್‌. ಜ್ಯೋತಿ ಪ್ರಕಾಶ್‌, ಎನ್‌.ಜೆ. ರಾಜಶೇಖರ್‌, ಎಸ್‌.ಪಿ. ದಿನೇಶ್‌, ಅನಿತಾ ರವಿಶಂಕರ್‌, ಡಾ| ಧನಂಜಯ ಸರ್ಜಿ, ಇ.ವಿಶ್ವಾಸ್‌, ರುದ್ರಮುನಿ ಸಜ್ಜನ್‌, ಈರೇಶ್‌ ಗೌಡ್ರು, ಟಿ.ವಿ. ವೀರಯ್ಯ, ಬಳ್ಳೆಕೆರೆ ಸಂತೋಷ್‌, ಎಸ್‌.ಎನ್‌. ಚನ್ನಬಸಪ್ಪ, ಧನರಾಜ್‌ ಬಿ.ಜಿ., ಡಿ.ಎಚ್‌. ಡಾ| ರಾಜೇಶ್‌ ಸುರಗಿಹಳ್ಳಿ, ಎಚ್‌.ವಿ. ಮಹೇಶ್ವರಪ್ಪ, ಬಿಂದುಕುಮಾರ್‌, ಎನ್‌.ಜೆ. ನಾಗರಾಜ್‌, ರೇಖಾ, ಎಚ್‌.ಸಿ. ಯೋಗೀಶ್‌ ಮತ್ತಿತರರು ಇದ್ದರು. ಚೌಕಿಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗ್ಗೆ ರಂಭಾಪುರಿ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.