ವೀರಶೈವ-ಲಿಂಗಾಯಿತ ಧರ್ಮ ಒಂದೇ: ಮಹೇಶರ ಸ್ವಾಮೀಜಿ


Team Udayavani, Jul 25, 2017, 2:02 PM IST

25-SHIV-1.jpg

ಸಾಗರ: ವಿಶ್ವಕ್ಕೆ ಮಾನವ ಧರ್ಮವನ್ನು ಸಾರಿರುವ ವೀರಶೈವ ಧರ್ಮದಲ್ಲಿ ಒಡಕು ಉಂಟು ಮಾಡುವ ಹೇಳಿಕೆಗಳು ಸರಿಯಲ್ಲ. ಇತ್ತೀಚಿನ ದಿನಗಳಲ್ಲಿ ವೀರಶೈವ ಹಾಗೂ ಲಿಂಗಾಯಿತ ಧರ್ಮದ ಬಗ್ಗೆ ಎದ್ದಿರುವ ಚರ್ಚೆ ಹುರುಳಿಲ್ಲದ್ದು, ಇವೆರಡೂ ಬೇರೆ ಬೇರೆಯಲ್ಲ. ಸಮಾಜ ಬಾಂಧವರು ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಕೆಳದಿ ರಾಜಗುರು ಹಿರೇಮಠದ ಡಾ| ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೋಮವಾರ ತಾಲೂಕು ವೀರಶೈವ ಯುವ ವೇದಿಕೆ ಆಶ್ರಯದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಧರ್ಮಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಯಾವುದೇ ಕೆಚ್ಚಲಿನಿಂದ ಬಂದಿದ್ದರೂ ಅದು ಬಿಳಿ ಬಣ್ಣದಿಂದ ಕೂಡಿರುತ್ತದೆ. ಹಾಗೆಯೇ ಗುರುಗಳು ಹಲವರಿದ್ದರೂ ಅವರು ಬೋಧಿಸುವ ತತ್ವಾದರ್ಶಗಳು ಒಂದೇ ಆಗಿರುತ್ತದೆ ಎಂದರು. ಪ್ರತಿಯೊಂದು ಹಂತದಲ್ಲಿಯೂ ಸಮಾಜವನ್ನು ಜೋಡಿಸುವ ಕೆಲಸ ಪರಿಣಾಮಕಾರಿಯಾಗಿ ನಡೆಯಬೇಕು. ಪರಸ್ಪರ ವಿಭಿನ್ನವಾದ ಆಲೋಚನೆ, ದೃಷ್ಟಿಕೋನದಿಂದಾಗಿ ಸಮಾಜವನ್ನು ಸದೃಢಗೊಳಿಸಲು ಸಾಧ್ಯವಿಲ್ಲ ಎಂದರು. 

ಹೊಸನಗರ ತಾಲೂಕು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಚನ್ನಬಸವ ಸ್ವಾಮೀಜಿ ಮಾತನಾಡಿ, ಯುವ ಸಮುದಾಯ ಬೇರೆಬೇರೆ ಆಕರ್ಷಣೆಗೆ ಒಳಗಾಗಿ ದಾರಿ ತಪ್ಪುತ್ತಿದ್ದಾರೆ. ಸಮಾಜ ನಮಗೆ ಏನನ್ನು ಕೊಟ್ಟಿದೆ ಎಂದು ಹಲಬುವುದಕ್ಕಿಂತ ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎನ್ನುವುದರ ಬಗ್ಗೆ ಚಿಂತನೆ ನಡೆಸಬೇಕು ಎಂದರು.

 ಸಮಾಜ, ಧರ್ಮವನ್ನು ನಾವು ರಕ್ಷಿಸಿದರೆ ಅವುಗಳು ನಮ್ಮನ್ನು ರಕ್ಷಿಸುತ್ತವೆ. ಸಮಾಜವನ್ನು ಒಡೆಯುವ ಹೇಳಿಕೆ ಯಾರಿಂದಲೂ ಬರಬಾರದು. ಇದರಿಂದ ಅಭಿವೃದ್ಧಿಪಥದತ್ತ ಸಾಗುತ್ತಿರುವ ಸಮಾಜ ಹಿನ್ನಡೆ ಅನುಭವಿಸುತ್ತದೆ ಎಂದು ಹೇಳಿದರು.

ಶಿಕ್ಷಕ ಪಾಲಾಕ್ಷಪ್ಪ ಎಸ್‌.ಎನ್‌. ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಶಿವಮೊಗ್ಗ ಪದವೀಧರರ ಸಹಕಾರಿ ಸಂಘದ ಅಧ್ಯಕ್ಷ ಎಸ್‌ .ಪಿ. ದಿನೇಶ್‌, ಮಲ್ಲವ ಸಮಾಜದ ರಾಜ್ಯಾಧ್ಯಕ್ಷ ಕೆ.ಜಿ. ಜಗದೀಶ್‌ ಒಡೆಯರ್‌, ಶಿರಸ್ತೇದಾರ್‌ ಕಲ್ಲಪ್ಪ ಮೆಣಸಿನಾಳ್‌, ವೀರಶೈವ ಸಮಾಜದ ಅಧ್ಯಕ್ಷ ಯು.ಸಿ. ಸಿದ್ದಲಿಂಗೇಶ್‌, ಜಂಗಮ ಸಮಾಜದ ಅಧ್ಯಕ್ಷ ಜಿ.ಎಸ್‌. ಹಿರೇಮಠ, ಎ. ಭೋಜಕುಮಾರ್‌ ಇದ್ದರು. ಕೊಟ್ರೇಶಯ್ಯ
ಕಲ್ಯಾಣಮಠ ಮತ್ತು ಸಂಗಡಿಗರು ವೇದಘೋಷ ಪಠಿಸಿದರು. ನವೀನ್‌ ಜೇಡಿಸರ ಸ್ವಾಗತಿಸಿದರು.  ಸುಭಾಷ್‌ ಕೌತಳ್ಳಿ ಪ್ರಾಸ್ತಾವಿಕ ಮಾತನಾಡಿದರು.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.