ನಮ್ಮೊಲುಮೆಯಲ್ಲಿ ಭಾವಾಭಿನಂದನ ವಿಶೇಷ ರಸಮಂಜರಿ


Team Udayavani, Feb 28, 2021, 4:39 PM IST

Vijaya prakash

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ನಮ್ಮೊಲುಮೆ ಕಾರ್ಯಕ್ರಮದ ನಂತರ ಭಾವಾಭಿನಂದನಾ ರಸಮಂಜರಿ ಕಾರ್ಯಕ್ರಮ ಬಹಳ ಅದ್ಭುತವಾಗಿ ಮೂಡಿಬರಲಿದೆ ಎಂದು ಖ್ಯಾತ ಗಾಯಕ ವಿಜಯಪ್ರಕಾಶ್‌ ಹೇಳಿದರು.

ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿಯೇ ಅತ್ಯಂತ ದೊಡ್ಡ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಕುರಿತಾದ ಒಂದು ವಿಶೇಷ ಹಾಡನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾಗುವುದು. ಈ ಹಾಡನ್ನು ಖ್ಯಾತ ಗೀತರಚನೆಕಾರ ಕೆ. ಕಲ್ಯಾಣ್‌ ರಚಿಸಿದ್ದು ನಾನೇ ಸಂಗೀತ ನೀಡಿದ್ದೇನೆ. ರಾಜೇಶ್‌ ಕೃಷ್ಣನ್‌ ಅವರ ಜೊತೆ ಸೇರಿಕೊಂಡು ನೃತ್ಯ ತಂಡದೊಂದಿಗೆ ಭಾವಾಭಿನಯದ ಮೂಲಕ ಮುಖ್ಯಮಂತ್ರಿಗಳಿಗೆ ಇದನ್ನು ಅರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಸುಮಾರು ಆರು ನಿಮಿಷದ ಹಾಡು ಇದಾಗಿದ್ದು, ಬಿ.ಎಸ್‌.ಯಡಿಯೂರಪ್ಪನವರು ಇದುವರೆಗೂ ಬೆಳೆದು ಬಂದ ರೀತಿ, ಅವರ ಅಭಿವೃದ್ಧಿಗಳು, ಮಾನವೀಯತೆ, ಹೋರಾಟ ಹೀಗೆ ಅವರ ಸಮಗ್ರ ಚಿತ್ರಣ ಈ ಆರು ನಿಮಿಷದಲ್ಲಿ ಹಿಡಿದಿಡುವ ಪ್ರಯತ್ನ ಮಾಡಲಾಗಿದೆ. ಹಾಗಾಗಿ ಇಡೀ ಕಾರ್ಯಕ್ರಮದಲ್ಲಿ ಈ ಹಾಡು ಒಂದು ಹೈಲೈಟ್‌ ಆಗಲಿದೆ ಎಂದರು.

ತುಂಬಾ ನಿರೀಕ್ಷೆಯೊಂದಿಗೆ ರಾಜೇಶ್‌ ಕೃಷ್ಣನ್‌ ಮತ್ತು ನಮ್ಮ ತಂಡದವರು ಶಿವಮೊಗ್ಗದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಸುಮಾರು 75ಕ್ಕೂ ಹೆಚ್ಚು ಕಲಾವಿದರು ಶಿವಮೊಗ್ಗಕ್ಕೆ ಬಂದಿದ್ದು ರಿಹರ್ಸಲ್‌ ಕೂಡ ಮಾಡಲಾಗುತ್ತಿದೆ. ಶಿವಮೊಗ್ಗದ ಪ್ರೇಕ್ಷಕರಿಗೆ ಸಂಗೀತ ರಸದೌತಣವನ್ನು ನೀಡುವ ಉದ್ದೇಶ ನಮ್ಮದು ಎಂದರು. ಖ್ಯಾತ ಗಾಯಕ ರಾಜೇಶ್‌ ಕೃಷ್ಣನ್‌ ಮಾತನಾಡಿ, ಕಲಾವಿದರಿಗೆ ಮುಖ್ಯಮಂತ್ರಿಗಳು ಕೊಡುವ ಗೌರವ ಎಂದೇ ಇದನ್ನು ಭಾವಿಸಿದ್ದೇವೆ. ಸಂಗೀತಕ್ಕೂ ಸೆಳೆತವಿದೆ ಎಂಬುದನ್ನು ನಾವು ಮೊದಲ ಬಾರಿಗೆ ತಿಳಿದುಕೊಂಡಿದ್ದೇವೆ. ಈ ಕಾರ್ಯಕ್ರಮವನ್ನು ಆಯೋಜಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿರುವುದು ನಮಗಂತೂ ತುಂಬಾ ಖುಷಿಯಾಗಿದೆ. ನಮ್ಮ ಜೊತೆಗೆ ಖ್ಯಾತ ನಿರೂಪಕಿ ಅನುಶ್ರೀ ಇರಲಿದ್ದಾರೆ. ಎಲ್ಲರೂ ಸೇರಿ ಬಂದು ಸಂಗೀತದ ಸ್ವರ್ಗವನ್ನು ಜನರಿಗೆ ಉಣಬಡಿಸುತ್ತೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ, ವಿಧಾನಪರಿಷತ್‌ ಸದಸ್ಯ ರುದ್ರೇಗೌಡ, ಬಳ್ಳೇಕೆರೆ ಸಂತೋಷ್‌ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.