ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ


Team Udayavani, Oct 16, 2021, 2:57 PM IST

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

ಭದ್ರಾವತಿ: ಶುಕ್ರವಾರ ನಗರಸಭೆ ವತಿಯಿಂದ ನಾಡ ಹಬ್ಬ ದಸರಾ ಪ್ರಯುಕ್ತ ಏರ್ಪಡಿಸಿದ್ದ ವಿಜಯದಶಮಿ ಮೆರವಣಿಗೆಗೆ ಶಾಸಕ ಬಿ.ಕೆ. ಸಂಗಮೇಶ್ವರ್‌ ನಾಡದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಮತ್ತು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ನಗರದ ಗ್ರಾಮ ದೇವತೆ ಸೇರಿದಂತೆ ಮಧ್ಯಾಹ್ನ ಅಪ್ಪರ್‌ ಹುತ್ತಾದ ಬಸ್‌ ನಿಲ್ದಾಣದ ಸಮೀಪವಿರುವ ಶ್ರೀ ತಿರುಮಲ ಶ್ರೀನಿವಾಸ ದೇವರ ದೇವಾಲಯದ ಬಳಿಯಿಂದ ಮೆರವಣಿಗೆ ಆರಂಭಗೊಂಡಿತು.

ವೈವಿಧ್ಯಮಯವಾದ ಅಲಂಕೃತ ವಾಹನಗಳಲ್ಲಿ ನಗರದ ವಿವಿಧ ಬಡಾವಣೆಗಳಿಂದ ಆಗಮಿಸಿದ್ದ ವಿವಿಧ ದೇವಾನುದೇವತೆಗಳನ್ನು ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ನಗರಸಭೆಯ ನಾಡದೇವಿ ಚಾಮುಂಡೇಶ್ವರಿ ಪ್ರತಿಮೆ, ನಂತರ ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಭೂದೇವಿ, ಶ್ರೀದೇವಿ ಸಹಿತನಾದ ಶ್ರೀನಿವಾಸ ದೇವರ ಉತ್ಸವಮೂರ್ತಿ, ಗ್ರಾಮದೇವತೆ ಶ್ರೀ ಹಳದಮ್ಮ, ಕೆರೆಕೋಡಮ್ಮ, ಕೆಂಚಮ್ಮ, ಅಂತರಘಟ್ಟಮ್ಮ, ಕಾಳಿಕಾಂಬ, ಶ್ರೀ ರಾಮೇಶ್ವರ, ಆಂಜನೇಯ ಮಾರಿಯಮ್ಮ, ದುರ್ಗಮ್ಮ, ಶನೈಶ್ವರ, ವಿಶ್ವಸ್ವರೂಪಿಣಿ ಮಾರಿಯಮ್ಮ, ಬಸವಣ್ಣದೇವರು, ಸಂಕಲಮ್ಮ, ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ದೇವಾಲಯದ ದೇವಾನುದೇವತೆಗಳು ಸಾಲಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದು ಕಂಡು ಬಂದಿತು.

ಸಾಂಸ್ಕೃತಿಕ ಮೇಳಗಳ ಪ್ರದರ್ಶನ: ಮೆರವಣಿಗೆಯಲ್ಲಿ ಸಾಂಸ್ಕೃತಿಕ ಮೇಳಗಳಾದ ನಾದಸ್ವರ, ಡೊಳ್ಳು ವೀರಗಾಸೆ, ಕರಡಿ ನೃತ್ಯ, ಬೆದರು ಗೊಂಬೆ, ಗೀಗಿಪದ, ಗಾರುಡಿಗ ಹಾಗು ಸ್ವತ್ಛ ಭಾರತ್‌ ಸ್ತಬ್ಧಚಿತ್ರಗಳು, ವಿವಿಧ ಶಾಲೆಗಳ ನಾಡಿನ ಸಂಸ್ಕೃತಿ ಬಿಂಬಿಸುವ ವೇಷಭೂಷಣಗಳು ಸೇರಿದಂತೆ ಹಲವಾರು ಮನರಂಜನಾ ಸಾಂಸ್ಕೃತಿಕ ಕಲಾಪ್ರಕಾರಗಳು ಭಾಗವಹಿಸಿ ಕಲಾ ಪ್ರದರ್ಶನ ಮಾಡುತ್ತಾ ಸಾಗಿದವು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಸಾಗಿ ಬಂದ ಮೆರವಣಿಗೆ ಅಂಬೇಡ್ಕರ್‌ ವೃತ್ತ, ಹಾಲಪ್ಪ ವೃತ್ತ, ಮಾಧವಾಚಾರ್‌ ವೃತ್ತ, ಡಾ| ರಾಜ್‌ ಕುಮಾರ್‌ ರಸ್ತೆ, ರಂಗಪ್ಪ ವೃತ್ತ, ಕೋರ್ಟ್‌ ರಸ್ತೆ, ತಾಲೂಕು ಕಚೇರಿ ರಸ್ತೆ ಮೂಲಕ ಸಾಗಿ ಬಂದಿತು.

ಮೆರವಣಿಗೆ ಮಾರ್ಗದುದ್ದಕ್ಕೂ ರಸ್ತೆಯ ಉಭಯ ಪಾರ್ಶ್ವಗಳಲ್ಲಿ ಸಾವಿರಾರು ಜನರು ನಿಂತು ದೇವತಾ ಮೆರಣಿಗೆಯನ್ನು ವೀಕ್ಷಿಸಿ ದೇವರುಗಳಿಗೆ ನಮಸ್ಕರಿಸಿದರು. ಅಂತಿಮವಾಗಿ ಹಳೇನಗರದ ಕನಕ ಮಂಟಪ ಮೈದಾನದಕ್ಕೆ ಸಂಜೆ ಮೆರವಣಿಗೆ ಬಂದು ತಲುಪಿದ ನಂತರ ರಾಜಮರ್ಯಾದೆಯೊಂದಿಗೆ ಕಂಕಣಧಾರಿಗಳಾಗಿದ್ದ ತಹಶೀಲ್ದಾರ್‌ ಪ್ರದೀಪ್‌ ಅವರಿಗೆ ಮೈಸೂರು ಪೇಟ ತೊಡಿಸಿ, ಕುದುರೆ ಮೇಲೆ ಕೂರಿಸಿ, ಮಂಗಳವಾದ್ಯ ವಾದನದೊಂದಿಗೆ ಸಾಂಪ್ರದಾಯಿಕವಾಗಿ ಕನಕ ಮಟಪದ ಬನ್ನಿಮಟಪಕ್ಕೆ ಕರೆತರಲಾಯಿತು.

ಬನ್ನಿಪೂಜೆ: ಬನ್ನಮಂಟಪದಲ್ಲಿ ತಹಶೀಲ್ದಾರ್‌ ಅವರು ಕ್ಷೇತ್ರಪಾಲಕ ಶ್ರೀ ಲಕ್ಷೀ ನರಸಿಂಹಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಶ್ರೀ ಕಾಳಿಂಕಾಂಬಾ ದೇವತೆಯ ಖಡ್ಗವನ್ನು ಹಿಡಿದು ಮೈದಾನದ ಮಧ್ಯಭಾಗದಲ್ಲಿ ನಿರ್ಮಿಸಲಾಗಿದ್ದ ಬನ್ನಿಮಂಟಪಕ್ಕೆ ಆಗಮಿಸಿದರು. ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ವೇ|ಬ್ರ| ಶ್ರೀರಂಗನಾಥಶರ್ಮ ಅವರ ಪೌರೋಹಿತ್ಯದಲ್ಲಿ ಬನ್ನಿ ಪತ್ರೆಯ ಟೊಂಗೆಯನ್ನುಒಳಗೊಂಡ ಕದಳಿ ಗಿಡಕ್ಕೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ, ತಹಶೀಲ್ದಾರ್‌ ರಿಂದ ಪೂಜೆ ಮಾಡಿಸಿದ ನಂತರ ಹಶೀಲ್ದಾರ್‌ ಪ್ರದೀಪ್‌ ಅವರು ಬನ್ನಿ ವೃಕ್ಷಕ್ಕೆ ಮೂರು ಪ್ರದಕ್ಷಿಣೆ ಬಂದು ನಮಸ್ಕರಿಸಿ ಖಡ್ಗದಿಂದ ಕದಳಿ ವೃಕ್ಷವನ್ನು ಕಡಿಯುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರು ದೇವರಿಗೆ ಜಯಕಾರ ಹಾಕುತ್ತಾ, ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ನಮಸ್ಕರಿಸುತ್ತಾ ವಿಜಯದಶಮಿ ಹಬ್ಬದ ಆಚರಣೆ ಮಾಡಿದರು.

ಬಾಣ- ಬಿರುಸುಗಳ ಪಟಾಕಿ ಸಿಡಿತ ಹಾಗೂ ರಾವಣ ಸಂಹಾರ ಮುಕ್ತಾಯವಾಯಿತು. ಬನ್ನಿ ಮುಡಿದ ನಂತರ ದೇವತಾ ಮೂರ್ತಿಗಳು ಆಯಾ ಬಡಾವಣೆಗಳಿಗೆ ಉತ್ಸವದ ಮೂಲಕ ತೆರಳಿದವು. ಜನರು ದೇವರಿಗೆ ಹಣ್ಣುಕಾಯಿ,ಫಲ ಸಮರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಶಾಸಕ ಬಿ.ಕೆ. ಸಂಗಮೆಶ್ವರ್‌, ತಹಶೀಲ್ದಾರ್‌ ಪ್ರದೀಪ್‌, ನಗರಸಭೆ ಆಯುಕ್ತ ಪರಮೇಶ್ವರ್‌, ಕಂದಾಯಾಧಿ ಕಾರಿ ರಾಜ್‌ಕುಮಾರ್‌, ನಗರಸಭಾ ಸದಸ್ಯರು, ಸಮಾಜ ಸೇವಕರಾದ ನರಸಿಂಹಾಚಾರ್‌, ರಮಾಕಂತ್‌ ಇತರರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.