ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ


Team Udayavani, Mar 31, 2023, 10:22 AM IST

elephant

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ದೇವಂಗಿಯ ಮಳಲೂರು ಕಾಡಿನಲ್ಲಿ ಆನೆ ಸೆರೆ ಹಿಡಿಯಲಾಯಿತು.

ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಮತ್ತು ಬರುವ ಇಂಜೆಕ್ಷನ್ ಡಾರ್ಟ್ ಮಾಡಿ ಸೆರೆ ಹಿಡಿದಿದ್ದಾರೆ.

ಡಿಸೆಂಬರ್ ತಿಂಗಳಲ್ಲಿ ಈ ಕಾಡಾನೆ ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿತ್ತು. ವಿವಿಧೆಡೆ ಸಂಚರಿಸಿ ಜನರಲ್ಲಿ ಆತಂಕ ಮೂಡಿಸಿತ್ತು. ಕಾಡಾನೆ ಸೆರೆ ಹಿಡಿಯಬೇಕೆಂಬ ಒತ್ತಡವಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆನೆ ಸೆರೆ ಹಿಡಿದಿದ್ದಾರೆ.

ಕಾಡಾನೆ ಸೆರೆಗೆ ಸಕ್ರೆಬೈಲು ಬಿಡಾರದ ಹೆಣ್ಣಾನೆಯನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಸಕ್ರೆಬೈಲಿನ ಭಾನುಮತಿ ಆನೆಯನ್ನು ಕಾಡಿನಲ್ಲಿ ಕಟ್ಟಿ ಹಾಕಿ, ಕಾಡಾನೆಯನ್ನು ಸೆಳೆಯುವ ಹನಿಟ್ರ್ಯಾಪ್ ತಂತ್ರವನ್ನು ಬಳಕೆ ಮಾಡಲಾಗಿತ್ತು. ಎರಡು ದಿನದ ಹಿಂದೆ ಭಾನುಮತಿಯನ್ನು ಗಮನಿಸಿ ಕಾಡಾನೆ ಹತ್ತಿರಕ್ಕೆ ಬಂದಿತ್ತು. ಅಷ್ಟು ಹೊತ್ತಿಗೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು ಕಾಡಿನೊಳಗ್ಗೆ ಪರಾರಿಯಾಗಿತ್ತು. ಕಳೆದ ರಾತ್ರಿ ಪುನಃ ಭಾನುಮತಿಯನ್ನು ಅರಸಿ ಬಂದ ಕಾಡಾನೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡಾರ್ಟ್ ಮಾಡಿದ್ದಾರೆ.

ಸೆರೆ ಸಿಕ್ಕಿರುವ ಕಾಡಾನೆ ತಪ್ಪಿಸಿಕೊಳ್ಳದಂತೆ ಕ್ರಮ ವಹಿಸಲಾಗಿದೆ. ಆನೆಯ ಕಾಲುಗಳನ್ನು ಕಟ್ಟಿಹಾಕಲಾಗಿದೆ. ಮಳಲೂರು ಕಾಡಿನಲ್ಲಿಯೇ ಆನೆ ಇದೆ. ಜನರ ಸಂಪರ್ಕಕ್ಕೆ ಬಂದಿರುವುದರಿಂದ ಅನೆಯ ಸ್ವಭಾವದ ಮೇಲೆ ನಿಗಾ ವಹಿಸಲಾಗುತ್ತಿದೆ. ಮುಂದೆ ಅದನ್ನು ಅಭಯಾರಣ್ಯಕ್ಕೆ ಬಿಡಬೇಕೋ, ಸಕ್ರೆಬೈಲು ಬಿಡಾರಕ್ಕೆ ಕರೆದೊಯ್ದು ಪಳಗಿಸಬೇಕೋ ಅನ್ನುವ ಕುರಿತು ಚರ್ಚೆ ನಡೆಯುತ್ತಿದೆ. ಸದ್ಯ ಕಾಡಾನೆ ಸೆರೆಯಾಗಿರುವುದರಿಂದ ತೀರ್ಥಹಳ್ಳಿಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.