ತೀರ್ಥಹಳ್ಳಿ: ಕುರುವಳ್ಳಿ ಬಳಿ ಆನೆ ಹಾವಳಿ
Team Udayavani, Dec 31, 2022, 9:59 AM IST
ತೀರ್ಥಹಳ್ಳಿ: ಪಟ್ಟಣದ ವಾರ್ಡ್ 14ರ ಕುರುವಳ್ಳಿಯಲ್ಲಿ ಡಿ.31 ರಂದು ಬೆಳಗ್ಗಿನ ಸಮಯ ಸುಮಾರು 3.30 ಗಂಟೆಗೆ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ.
ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ.
ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ ಕುರುವಳ್ಳಿ ಮುಖ್ಯ ರಸ್ತೆಯಲ್ಲಿ ಓಡಾಡಿ ಅಂಗಡಿ ಒಂದರ ನೇಮ್ ಬೋರ್ಡ್ ಪುಡಿ ಪುಡಿ ಮಾಡಿ ಬುಕ್ಲಾಪುರ ಸಮೀಪ ತುಂಗಾ ನದಿ ದಡಕ್ಕೆ ತಲುಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಸ್ಥಳೀಯರು ಸೇರಿ ಅರಣ್ಯ ಇಲಾಖೆ ಅಧಿಕಾರಿಗಳು ಆನೆಯ ಹುಡುಕಾಟ ನಡೆಸುತಿದ್ದಾರೆ.
ಕಾಡಿನಲ್ಲಿ ಇರಬೇಕಾದ ಕಾಡಿನ ರಾಜ ಊರಿಗೆ ಬಂದಿರುವುದು ಜನರಲ್ಲಿ, ಸ್ಥಳೀಯ ನಿವಾಸಿಗಳಲ್ಲಿ ಆತಂಕ ವ್ಯಕ್ತವಾಗುತ್ತಿದ್ದರೆ ಇತ್ತ ಹೊಸ ವರ್ಷ ಆಚರಣೆ ಮಾಡಲು ಬಂದಿರಬಹುದು ಎಂದು ಸ್ಥಳೀಯರು ತಮಾಷೆಯಾಗಿಯೂ ಮಾತನಾಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ