Lok Sabha ಚುನಾವಣೆಯಲ್ಲಿ ಗೆದ್ದು ಬಿಜೆಪಿಗೆ ಸೇರ್ಪಡೆ: ಈಶ್ವರಪ್ಪ ವಿಶ್ವಾಸ


Team Udayavani, Mar 24, 2024, 4:27 PM IST

Lok Sabha ಚುನಾವಣೆಯಲ್ಲಿ ಗೆದ್ದು ಬಿಜೆಪಿಗೆ ಸೇರ್ಪಡೆ: ಈಶ್ವರಪ್ಪ ವಿಶ್ವಾಸ

ಸಾಗರ: ನಿರಂತರವಾಗಿ ಬಿಜೆಪಿಯ ಮೂಲ ಕಾರ್ಯಕರ್ತನಾಗಿದ್ದೂ ಲೋಕಸಭಾ ಚುನಾವಣೆ ಸಂದರ್ಭದ ಈ ಎರಡು ತಿಂಗಳು ಮಾತ್ರ ನಾನು ಬಿಜೆಪಿಯಲ್ಲಿ ಇಲ್ಲ ಎನ್ನುವ ನೋವು ನನ್ನನ್ನು ಕಾಡುತ್ತದೆ. ಆದರೆ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಭಾವ್ಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಮಲೆನಾಡುಸಿರಿ ಸಭಾಂಗಣದಲ್ಲಿ ಭಾನುವಾರ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ನಲವತ್ತು ವರ್ಷಗಳಿಂದ ಬಿಜೆಪಿಯಲ್ಲಿ ನಾನು ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ನಲ್ಲಿದ್ದ ಜಗದೀಶ್ ಶೆಟ್ಟರ್ ಅವರ ಮನೆಗೆ ಹೋಗಿ ಬಿಜೆಪಿಗೆ ಕರೆತಂದು ಟಿಕೆಟ್ ಕೊಡುತ್ತಾರೆ. ನಾವು ಟಿಕೆಟ್ ಕೇಳಿದರೆ ನಿರಾಕರಿಸುತ್ತಾರೆ. ಯಡಿಯೂರಪ್ಪ ಕೇಂದ್ರದ ವರಿಷ್ಠರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೆಟ್ ಹಂಚಿಕೆ ಮಾಡಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭಾ ಚುನಾವಣೆ ನಂತರ ಗೊತ್ತಾಗಲಿದೆ ತಿಳಿಸಿದರು.

ದೇಶ ಮತ್ತು ರಾಜ್ಯದಲ್ಲಿ ಈಶ್ವರಪ್ಪ ಸ್ಪರ್ಧೆ ಮಾಡಿರುವ ಬಗ್ಗೆ ದೊಡ್ಡಮಟ್ಟದ ಚರ್ಚೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಕುಟುಂಬ ರಾಜಕಾರಣ ವಿರೋಧಿಸಿಕೊಂಡು ಬಂದಿದ್ದಾರೆ. ಈ ಲೋಕಸಭಾ ಚುನಾವಣೆ ನಂತರ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೊನೆಯಾಗಲಿದೆ. ನನ್ನ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ. ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ತೊಲಗಬೇಕು ಎಂದು ಪುನರುಚ್ಚರಿಸಿದರು.

ಸಾಮಾಜಿಕ ಕಾರ್ಯಕರ್ತ ಅಬಸೆ ದಿನೇಶಕುಮಾರ್ ಜೋಷಿ ಮಾತನಾಡಿ, ಭಾರತೀಯ ಸಂಸ್ಕೃತಿ, ಹಿಂದುತ್ವ, ಸನಾತನ ಧರ್ಮ ಮತ್ತು ಸೈದ್ಧಾಂತಿಕ ನೆಲಗಟ್ಟಿನ ಮೇಲೆ ರಾಜಕಾರಣ ಮಾಡಿಕೊಂಡು ಬಂದಿರುವುದು ಜನಸಂಘ ಮತ್ತು ಬಿಜೆಪಿ ಅದನ್ನು ಕಾಲಕಾಲಕ್ಕೆ ಮುಂದುವರೆಸಿಕೊಂಡು ಬರಲಾಗುತ್ತಿದೆ. ಹಿಂದಿನಿಂದಲೂ ನಾನು ಈಶ್ವರಪ್ಪ ಅವರ ಕುಟುಂಬದ ಹಿತೈಷಿ. ವೈಯಕ್ತಿಕ ಹಿತಚಿಂತನೆ ಬದಿಗಿಟ್ಟು ದೇಶದ ಬಗ್ಗೆ ಚಿಂತನೆ ಮಾಡುವವರು ಈಶ್ವರಪ್ಪ. ಹಿಂದಿನಿಂದಲೂ ಅದನ್ನು ನಡೆಸಿಕೊಂಡು ಬಂದಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೇ ಈಶ್ವರಪ್ಪ ಅವರು ಧ್ವನಿ ಎತ್ತಿದ್ದರೆ ಪರಿಸ್ಥಿತಿ ಬದಲಾಗುವ ಸಾಧ್ಯತೆ ಇತ್ತು. ಅದೇನೆ ಇದ್ದರೂ ಪ್ರಸ್ತುತ ಈಶ್ವರಪ್ಪ ಅವರ ತೆಗೆದುಕೊಂಡ ತೀರ್ಮಾನಕ್ಕೆ ಜನಾಭಿಪ್ರಾಯ ಸಂಗ್ರಹವಾಗುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ ಎಂದರು.

ವೇದಿಕೆಯಲ್ಲಿ ಎಸ್.ವಿ.ಕೃಷ್ಣಮೂರ್ತಿ, ಪ್ರಕಾಶ್ ಕುಂಠೆ, ಎಸ್.ಎಲ್.ಮಂಜುನಾಥ್, ಕಸ್ತೂರಿ ಸಾಗರ್, ಸತೀಶ್ ಹಕ್ರೆ, ನಾಗರಾಜ್ ಮೊಗವೀರ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.