Mahatma Gandhi NREGA ಯೋಜನೆ ಅನುಷ್ಠಾನದಲ್ಲಿ ಮಾದರಿಯಾದ ಜಿಲ್ಲಾ ಪಂಚಾಯತ್‌, ಶಿವಮೊಗ್ಗ


Team Udayavani, Aug 15, 2023, 6:32 PM IST

shivaMahatma Gandhi NREGA ಯೋಜನೆ ಅನುಷ್ಠಾನದಲ್ಲಿ ಮಾದರಿಯಾದ ಜಿಲ್ಲಾ ಪಂಚಾಯತ್‌, ಶಿವಮೊಗ್ಗ

ಜಿಲ್ಲೆಯಲ್ಲಿ 200 ಅಮೃತ ಸರೋವರ ಕಾಮಗಾರಿಗಳ ಅನುಷ್ಠಾನ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಿಷನ್‌ ಅಮೃತ ಸರೋವರದಡಿ ಜಿಲ್ಲೆಯಲ್ಲಿ 200 (ಕೆರೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವುಗಳಿಗೆ) ಅಮೃತ ಸರೋವರ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ. ಇವುಗಳಲ್ಲಿ ಪ್ರಮುಖವಾಗಿ  ಕೆರೆ ಹೂಳೆತ್ತುವುದು, ಕೆರೆ ದಂಡೆ ಬಲಪಡಿಸುವುದು, ಕೆರೆ ಸುತ್ತ ಸಸಿ ನೆಡುವುದು, ಕೆರೆಯ ಒಳಹರಿವು ಹಾಗೂ ಹೊರಹರಿವು ಕಾಲುವೆಗಳ ಹೂಳೆತ್ತುವ ಕೆಲಸವನ್ನು ನಿರ್ವಹಿಸಲಾಗಿದೆ.  ಆಗಸ್ಟ್‌ 15, 2023ರಂದು ಜಿಲ್ಲೆಯ ಎಲ್ಲಾ ಅಮೃತ ಸರೋವರ ಕಾಮಗಾರಿಗಳ ದಂಡೆಯ ಮೇಲೆ ಧ್ವಜಾರೋಹಣ ಮಾಡಲು ಕ್ರಮವಹಿಸಲಾಗುವುದು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 
ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಳ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಕೂಲಿಕಾರರ ಪ್ರಮಾಣ ಶೇ.54.89 ರಷ್ಟಿದ್ದು, ಕಳೆದ ಆರ್ಥಿಕ ವರ್ಷದಲ್ಲಿ 51.30 ರಷ್ಟಿದ್ದು, ಶೇ. 3.59 ರಷ್ಟು ಹೆಚ್ಚಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಸ್ವ ಸಹಾಯ ಸಂಘಗಳ ಮೂಲಕ, ರೋಜಗಾರ್ ದಿವಸ್‌ ಆಚರಣೆಗಳಲ್ಲಿ ಹಾಗೂ ಆಟೋಗಳ ಮೂಲಕ ಪ್ರಚಾರಗಳನ್ನು ಕೈಗೊಳ್ಳಲಾಗಿದ್ದು, ಈ ಹಿನ್ನಲೆಯಲ್ಲಿ ಮಹಿಳೆಯರು ಯೋಜನೆಯಡಿ ಪ್ರಮುಖವಾಗಿ ವೈಯಕ್ತಿಕ ಕಾಮಗಾರಿಗಳಲ್ಲಿ ಹಾಗೂ ಸಮುದಾಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.60 ರಷ್ಟು ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಕ್ರಮವಹಿಸಲಾಗುತ್ತಿದೆ ಹಾಗೂ ಯೋಜನೆಯಡಿ ಸ್ವಸಹಾಯ ಸಂಘದ ಸದಸ್ಯರಿಗೆ ಸಂಜೀವಿನಿ ಶೆಡ್‌ ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಸ್ವಸಹಾಯ ಸಂಘದ ಒಕ್ಕೂಟದ ಸದಸ್ಯರಿಗೆ ಕೆಲಸ ನಿರ್ವಹಿಸಲು ಅನುಕೂಲವಾಗಿದೆ.

ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಅಭಿಯಾನ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗೆ ಅವುಗಳಲ್ಲಿ ಪ್ರಮುಖವಾಗಿ ಮಹಿಳೆಯರಿಗೆ ಮೇ 22, ರಿಂದ ಜೂನ್‌ 22, 2023ರ ವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಆರೋಗ್ಯ ಅಭಿಯಾನವನ್ನು ಕೈಗೊಂಡು ಕೆ.ಹೆಚ್‌.ಪಿ.ಟಿ. ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ 87458 ಕೂಲಿಕಾರರಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ. ಆರೋಗ್ಯ ತಪಾಸಣಾ ಅಭಿಯಾನದ ಬಗ್ಗೆ ಕೂಲಿಕಾರರು ಹರ್ಷ ವ್ಯಕ್ತಪಡಿಸಿರುತ್ತಾರೆ.

ಜಲ ಸಂಜೀವಿನಿ ಕಾರ್ಯಕ್ರಮ ಹಾಗೂ ಜಲ ಶಕ್ತಿ
ಅಭಿಯಾನದಡಿ ಪಂಚ ಅಭಿಯಾನಗಳ ಅನುಷ್ಠಾನ:

1. ಜಲ ಸಂಜೀವಿನಿ ಮೇಲುಸ್ಥರ ಕಾಮಗಾರಿಗಳ ಅನುಷ್ಠಾನ, ವಿಪತ್ತು ನಿರ್ವಹಣೆ ಹಾಗೂ ಗೋಮಾಳ ಅಭಿವೃದ್ಧಿ ಅಭಿಯಾನ:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾದರಿಯಡಿ ಕಾಮಗಾರಿಗಳನ್ನುಅನುಷ್ಠಾನ ಮಾಡಲು 2023 24, 2024 25 ಮತ್ತು 2025 26ರ ಆರ್ಥಿಕ ವರ್ಷದಲ್ಲಿ ಅನುಷ್ಠಾನಿಸಲು ಯೋಜನೆ ರೂಪಿಸಲಾಗಿದ್ದು, ಅದರನ್ವಯ 2023 24 ನೇ ಸಾಲಿನಲ್ಲಿ ಮೇಲುಸ್ಥರದ ಕಾಮಗಾರಿಗಳನ್ನು ಹಾಗೂ ವಿಪತ್ತು ನಿರ್ವಹಣೆ ಮತ್ತು ಗೋಮಾಳ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಕ್ರಮವಹಿಸಲಾಗುತ್ತಿದೆ.

2. ಕೋಟಿ ವೃಕ್ಷ ಅಭಿಯಾನ:
ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವನ ಮಹೋತ್ಸವವನ್ನು ಆಚರಿಸಲು ಕೋಟಿ ವೃಕ್ಷ ಅಭಿಯಾನ ಎಂಬ ವಿನೂತನ ಕಾರ್ಯಕ್ರಮವನ್ನು ಯೋಜಿಸಲಾಗಿದ್ದು, ಈ ಅಭಿಯಾನದಡಿ ಪ್ರತಿ ಗ್ರಾಮ ಪಂಚಾಯಿತಿ  ಮಟ್ಟದ ಸಮುದಾಯ ಸ್ಥಳಗಳಲ್ಲಿ ಮತ್ತು ಅಮೃತ ವನವನ್ನು ನಿರ್ಮಾಣ ಮಾಡಲು ಶಾಲಾ ಕಾಲೇಜುಗಳು, ಸ್ವ ಸಹಾಯ ಸಂಘಗಳು, ಸ್ಥಳೀಯ ಸರ್ಕಾರೇತರ ಸಂಸ್ಥೆಗಳಲ್ಲಿ  ಇದುವರೆಗೂ 38475 ಸಸಿಗಳನ್ನು ನೆಡಲಾಗಿದೆ.

3. ಕೊಳವೆ ಬಾವಿ ಪುನಶ್ಚೇತನ:

ರಾಜ್ಯದಲ್ಲಿ ಅಂತರ್ಜಲ ಮಟ್ಟವು ಕುಸಿತವಾಗಿದ್ದು, ಈ ನಿಟ್ಟಿನಲ್ಲಿ ಜಲಶಕ್ತಿ 2023ರ ಅಭಿಯಾನದಡಿ ಈಗಾಗಲೇ ವಿಫಲ ಬೋರ್‌ವೆಲ್‌ಗ‌ಳನ್ನು ಪುನಶ್ಚೇತನಗೊಳಿಸಿ ಅಂತರ್ಜಲ ಮಟ್ಟವನ್ನು ವೃದ್ಧಿಸಲು ಮರುಪೂರಣ ಘಟಕ ಕಾಮಗಾರಿಗಳನ್ನು ಯೋಜನೆಯಡಿ ತೆಗೆದುಕೊಳ್ಳಲು ಈ ಅಭಿಯಾನದಡಿ ಯೋಜಿಸಲಾಗಿದ್ದು, ಇದುವರೆಗೂ 326 ಕೊಳವೆ ಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನಿಸಲು ಯೋಜನೆ ರೂಪಿಸಿ ಕ್ರಮವಹಿಸಲಾಗುತ್ತಿದೆ.

4.ಜೈವಿಕ ಅನಿಲ ಅಭಿಯಾನ:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಟ 02 ಜೈವಿಕ ಅನಿಲ ಘಟಕಗಳನ್ನು ಅನುಷ್ಠಾನ ಮಾಡಲು ಗುರಿಯನ್ನು ನೀಡಲಾಗಿದ್ದು, ಅದರನ್ವಯ ಈಗಾಗಲೇ ಜಾನುವಾರು ಕೊಟ್ಟಿಗೆ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಪ್ರಥಮ ಆಧ್ಯತೆಯಲ್ಲಿ ಜೈವಿಕ ಅನಿಲ ಘಟಕ ಸ್ಥಾಪಿಸಲು ಯೋಜನೆ ರೂಪಿಸಲಾಗಿದ್ದು, ಅನುಷ್ಠಾನ ಮಾಡಲು ಕ್ರಮವಹಿಸಲಾಗುವುದು.5. ಹಸಿರು ಸರೋವರ ಅಭಿಯಾನ:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದವರ ನಿರ್ದೇಶನದಂತೆ ಈಗಾಗಲೇ ಅಮೃತ ಸರೋವರದ ಕಾರ್ಯಕ್ರಮದಡಿ ಕೆರೆಗಳನ್ನು ಅಭಿವೃದ್ಧಿಪಡಸಲಾಗುತ್ತಿದ್ದು, ಪ್ರಾಯೋಗಿವಾಗಿ ಜಿಲ್ಲೆಯಲ್ಲಿ 03 ಹಸಿರು ಸರೋವರಗಳನ್ನು ಅನುಷ್ಠಾನ ಗೊಳಿಸಲು  ಕ್ರಮವಹಿಸಲಾಗುತ್ತಿದೆ.

6. ಶಿಶು ಪಾಲನಾ ಕೇಂದ್ರ ಸ್ಥಾಪನೆ:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ನರೇಗಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ  140 ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 89 ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದೆ.

ಪ್ರಮುಖಾಂಶಗಳು:
– ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸ ನಿರ್ವಹಿಸಲು ಇಚ್ಛಿಸುವ ಪ್ರತಿ ಕುಟುಂಬಕ್ಕೆ  ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗ ಒದಗಿಸುವುದು.
-ವೈಯಕ್ತಿಕ ಆಸ್ತಿಗಳ ಸೃಜನೆ ಮಾಡುವ ಮೂಲಕ ಗ್ರಾಮೀಣ ಜನರ ಜೀವನೋಪಾಯ ಚಟುವಟಿಕೆಗಳನ್ನು ಬಲಪಡಿಸುವುದು.
-ಗ್ರಾಮೀಣ ಪ್ರದೇಶದಲ್ಲಿ ಶಾಶ್ವತ ಆಸ್ತಿಗಳ ಸೃಜನೆ.
-ವಿಕಲ ಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50 ರಷ್ಟು ವಿನಾಯಿತಿ.
-ಶೇ. 60ಕ್ಕಿಂತ ಹೆಚ್ಚು ಮಹಿಳಾ ಕೂಲಿಕಾರರು ಕೆಲಸ ನಿರ್ವಹಿಸುವ ಕಾಮಗಾರಿಗಳಲ್ಲಿನ ಕೆಲಸದ ಪ್ರಮಾಣದಲ್ಲಿ ಮಹಿಳೆಯರಿಗೆ ಶೇ.10 ವಿನಾಯಿತಿ.
-ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳು ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಸೌಲಭ್ಯ ಒದಗಿಸಲಾಗುವುದು.
-ಪ್ರತಿ ದಿನಕ್ಕೆ ಕೂಲಿ ಮೊತ್ತ: 316/ರೂ.ಗಳು

ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನಷ್ಠಾನ  ಮಾಡಲಾಗುತ್ತಿದ್ದು, ಸಮುದಾಯ ಆಸ್ತಿಗಳ ಸೃಜನೆ ಹಾಗೂ ವೈಯಕ್ತಿಕ ಕಾಮಗಾರಿಗಳ ಅನುಷ್ಠಾನದಿಂದ ಫಲಾನುಭವಿಗಳ ಜೀವನೋಪಾಯಕ್ಕೆ ಆಧ್ಯತೆ ನೀಡಲಾಗುತ್ತಿದೆ. ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಳದಿಂದ ಆರ್ಥಿಕವಾಗಿ ಸಬಲರಾಗುತ್ತಿರುವುದನ್ನು ಕಾಣಬಹುದಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಹಲವಾರು ತಾಂತ್ರಿಕ ಅಂಶಗಳನ್ನು ಅಳವಡಿಸಲಾಗಿದ್ದು, ಇವುಗಳಿಂದ ಯೋಜನೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಸಾಧ್ಯವಾಗಿದೆ.
 -ಸ್ನೇಹಲ್‌ ಸುಧಾಕರ್‌ ಲೋಕಂಡೆ 
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು
ಜಿಲ್ಲಾ ಪಂಚಾಯತ್‌, ಶಿವಮೊಗ್ಗ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.