ನೆರೆ ಪರಿಹಾರ ಅರ್ಜಿ ತ್ವರಿತ ವಿಲೇಗೆ ಸೂಚನೆ

•ಆಶ್ರಯ ಮನೆಗಳಿಗೆ ಟೆಂಡರ್‌ ಕರೆಯಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ತಾಕೀತು

Team Udayavani, Sep 18, 2019, 4:36 PM IST

18-Sepctember-13

ಶಿವಮೊಗ್ಗ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು.

ಶಿವಮೊಗ್ಗ: ಭಾರೀ ಮಳೆಯಿಂದ ಸಂತ್ರಸ್ತರಾದ 5060 ಕುಟುಂಬಗಳಿಗೆ 10 ಸಾವಿರ ರೂ. ಕೊಡಲಾಗಿದೆ. ಹೊಸದಾಗಿ ಬಂದಿರುವ 1600 ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ ಅವರಿಗೂ ಪರಹಾರ ಕೊಡಬೇಕೆಂದು ಸಚಿವ ಕೆ.ಎಸ್‌. ಈಶ್ವರಪ್ಪ ಸೂಚಿಸಿದರು.

ಮಂಗಳವಾರ ಜಿಪಂ ಸಭಾಂಗಣದಲ್ಲಿ ನಡೆದ ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಮಗಾರಿಗಳು, ಎಸ್‌ಎಫ್‌ಸಿ, ಲೋಕೋಪಯೋಗಿ, ನೀರಾವರಿ ಇಲಾಖೆ, ಆಶ್ರಮ ಮನೆ ಹಂಚಿಕೆ ಕುರಿತಂತೆ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪೂರ್ಣ, ಭಾಗಶಃ ಮನೆ ಕಳೆದುಕೊಂಡವರ ವಿವರಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು. ಮನೆಗೆ ನೀರು ನುಗ್ಗಿದ, ಮನೆ ಬಿದ್ದಿರುವ ಬಗ್ಗೆ ಹೊಸದಾಗಿ 1600 ಅರ್ಜಿಗಳು ಪಾಲಿಕೆ ಕಡೆಯಿಂದ ಬಂದಿವೆ. ಅವುಗಳಲ್ಲಿ ಬ್ಯಾಂಕ್‌ ಅಕೌಂಟ್ ವಿವರ, ಹೆಸರು, ವಾರ್ಡ್‌ ಬಿಟ್ಟರೆ ಬೇರೆ ಯಾವುದೇ ಮಾಹಿತಿ ಇಲ್ಲ. ನಿಜವಾದ ಫಲಾನುಭವಿಗಳನ್ನು ಹುಡುಕುವುದು ಹೇಗೆ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರು. ತಹಸೀಲ್ದಾರ್‌ ಗಿರೀಶ್‌ ಅಸಹಾಯಕತೆ ವ್ಯಕ್ತಪಡಿಸಿದರು. ಉಪ ಮೇಯರ್‌ ಚನ್ನಬಸಪ್ಪ ಮಧ್ಯ ಪ್ರವೇಶಿಸಿ, ಹಳೇ ವಿಷಯ ಮನಸ್ಸಲ್ಲಿ ಇಟ್ಟುಕೊಂಡು ಬಡವರ ಮೇಲೆ ಸೇಡು ತೀರಿಸಿಕೊಳ್ಳಬೇಡಿ. ಅರ್ಜಿಗಳನ್ನು ಪರಿಶೀಲಿಸಿ ಅವರಿಗೆ ಪರಿಹಾರ ಕೊಡಿ ಎಂದರು. ಸಚಿವ ಕೆ.ಎಸ್‌. ಈಶ್ವರಪ್ಪ ಕೂಡ ಇದಕ್ಕೆ ಧ್ವನಿಗೂಡಿಸಿದರು.

ಮಳೆ ನೀರು ನುಗ್ಗಿದ್ದ 72 ಜನ ಅಂಗಡಿ ಮಾಲೀಕರಿಗೂ ಪರಿಹಾರ ಕೊಡಬೇಕೆಂದು ಚೇಂಬರ್‌ ಆಫ್‌ ಕಾಮರ್ಸ್‌ನಿಂದ ಮನವಿ ಕೊಟ್ಟಿದ್ದಾರೆ. ಸಿಎಂ ಕೂಡ ವಿಶೇಷ ಪ್ರಕರಣವೆಂದು ಪರಿಗಣಿಸಿ 25 ಸಾವಿರ ರೂ. ಕೊಡಲು ಸೂಚಿಸಿದ್ದಾರೆ. ಅವರನ್ನು ಪಟ್ಟಿಯಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಟೆಂಡರ್‌ ಕರೆಯಿರಿ: ಆಶ್ರಯ ಸಮಿತಿ ಅಡಿ 2242 ಫಲಾನುಭವಿಗಳು 80 ಸಾವಿರ ರೂ. ಹಣ ಕಟ್ಟಿದ್ದಾರೆ. 1313 ಜನ ಹೊಸದಾಗಿ ಅರ್ಜಿ ಹಾಕಿದ್ದಾರೆ. ಅವರಿನ್ನು ಹಣ ಕಟ್ಟಬೇಕಿದೆ ಎಂದು ಅಧಿಕಾರಿ ತಿಳಿಸಿದರು. ಒಟ್ಟು 4836 ಮನೆಗಳಿಗೆ ಟೆಂಡರ್‌ ಕರೆಯಿರಿ ಎಂದು ಸಚಿವರು ಸೂಚಿಸಿದರು. ಹಣ ಕಟ್ಟದೆ ಟೆಂಡರ್‌ ಕರೆಯುವುದು ಕಷ್ಟ ಎಂದು ಅಧಿಕಾರಿ ತಿಳಿಸಿದಾಗ, ಟೆಂಡರ್‌ ಕರೆದು ಕಾಮಗಾರಿ ಆರಂಭಿಸುವಷ್ಟರಲ್ಲಿ ಅವರು ಹಣ ಕಟ್ಟುತ್ತಾರೆ. ನೀವು ಟೆಂಡರ್‌ ಕರೆಯಿರಿ ಎಂದು ಮತ್ತೂಮ್ಮೆ ಸೂಚನೆ ಕೊಟ್ಟರು. ಕೊನೆಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಮಧ್ಯ ಪ್ರವೇಶಿಸಿ ಈಗಾಗಲೇ ಹಣ ಪಾವತಿಸಿರುವವರನ್ನು ಪ್ಯಾಕೇಜ್‌ 1, ಉಳಿದವರನ್ನು ಪ್ಯಾಕೇಜ್‌ 2 ಎಂದು ಪರಿಗಣಿಸಿ ವಾರದೊಳಗೆ ಟೆಂಡರ್‌ ಕರೆಯಿರಿ ಎಂದರು.

ಕಾರ್ಮಿಕರಿಗೂ ಸಹ ಆಶ್ರಯ ಮನೆ ಕಟ್ಟಿಕೊಡಲಾಗುತ್ತಿದ್ದು ಅವರು ಹೆಚ್ಚುವರಿ ಹಣ ಹಾಕಿ ಮನೆ ದೊಡ್ಡ ಮನೆ ಕಟ್ಟಿಕೊಳ್ಳಲು ಸಿದ್ಧರಿದ್ದಾರೆ. ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದರು.

ಪಾರ್ಕ್‌ ಅಭಿವೃದ್ಧಿ: ನಗರದಲ್ಲಿ ಒಟ್ಟು 392 ಪಾರ್ಕ್‌ಗಳಿದ್ದು, ಅದರಲ್ಲಿ 100 ಪಾರ್ಕ್‌ಗಳನ್ನು ಅಭಿವೃದ್ಧಿ ಮಾಡಲು ಕೈಗೆತ್ತಿಕೊಳ್ಳಲಾಗಿದೆ. ಸ್ಮಾರ್ಟ್‌ಸಿಟಿ, ಅಮೃತ್‌ ಯೋಜನೆ ಅಡಿ 24 ಪಾರ್ಕ್‌ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದರು. ಎಲ್ಲ ಪಾರ್ಕ್‌ಗಳನ್ನು ಡಿಸೆಂಬರ್‌ ಒಳಗೆ ಅಭಿವೃದ್ಧಿ ಮಾಡಬೇಕು ಎಂದು ಸಚಿವರು ಆದೇಶಿಸಿದರು. ಪಾಲಿಕೆ ವತಿಯಿಂದ 35 ವಾರ್ಡ್‌ಗಳಲ್ಲೂ ಒಂದೊಂದು ಪಾಕ್‌ ನಿರ್ಮಾಣ ಕೈಗೆತ್ತಿಕೊಂಡು, ಸ್ಥಳೀಯ ವಾರ್ಡ್‌ ಸದಸ್ಯರ ಸಹಕಾರದಿಂದ ಅವುಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಸೂಚಿಸಿದರು.

ನಗರದಲ್ಲಿನ 82 ಶಾಲೆಗಳ ದುರಸ್ತಿಗೆ 8 ಕೋಟಿ ಅಗತ್ಯವಿದೆ. ಪಾಲಿಕೆ, ಎನ್‌ಡಿಆರ್‌ಎಫ್‌ ನಿಧಿ ಹಾಗೂ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಅವುಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದರು. ಶಾಲೆ ದುರಸ್ತಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಿ. ನವೆಂಬರ್‌ ಒಳಗೆ ಕಾಮಗಾರಿ ಮುಗಿಸಿ. ಹಣದ ಸಮಸ್ಯೆ ಈಗಿಲ್ಲ ಎಂದರು.

ಜಿಪಂ ಸಿಇಒ ಎಲ್.ಎಂ. ವೈಶಾಲಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಉಪಮೇಯರ್‌ ಚನ್ನಬಸಪ್ಪ ಇತರೆ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.