ನನಸಾಗುತ್ತಿಲ್ಲ ಸ್ವಂತ ನಿವೇಶನ ಕನಸು!

ನಿವೇಶನಗಳ ಅಭಿವೃದ್ಧಿಗೆ ಖಾಸಗಿ ಡೆವಲಪರ್‌ಗಳ ಹಿಂದೇಟುಸೂಡಾದಿಂದ ಹಂಚಿಕೆಯಾಗ್ತಿಲ್ಲ ನಿವೇಶನ

Team Udayavani, Dec 16, 2019, 1:44 PM IST

16-December-12

„ಶರತ್‌ ಭದ್ರಾವತಿ
ಶಿವಮೊಗ್ಗ:
ಒಂದು ಕಡೆ ಹೊಸ ಬಡಾವಣೆ ಮಾಡಲು ರಿಯಲ್‌ ಎಸ್ಟೇಟ್‌ ಉದ್ದಿಮೆದಾರರು ಮುಂದಾಗುತ್ತಿಲ್ಲ. ಇನ್ನೊಂದು ಕಡೆ ಬಡವರು, ಮಧ್ಯಮ ವರ್ಗದ ಜನರಿಗೆ ಕೈಗೆಟಕುವ ದರದಲ್ಲಿ ಸೈಟುಗಳು ದೊರೆಯುತ್ತಿಲ್ಲ. ಬಡವರ ಕನಸು ನನಸಾಗಿಸಬೇಕಾದ ಶಿವಮೊಗ್ಗ- ನಗರಾಭಿವೃದ್ಧಿ ಪ್ರಾಧಿಕಾರ 8 ವರ್ಷದಿಂದ ಒಂದೂ ಬಡಾವಣೆಗಳನ್ನು ಅಭಿವೃದ್ಧಿಪಡಿಸುತ್ತಿಲ್ಲ.

ನಗರದ ಯಾವುದೇ ಮೂಲೆಗೆ ಹೋದರೂ ಚದರಡಿಗೆ ಕನಿಷ್ಠ 900-1000 ರೂ.ನಿಂದ ಭೂಮಿ ಬೆಲೆ ಶುರುವಾಗುತ್ತದೆ. ಸೂಡಾದಲ್ಲಿ ಮಧ್ಯಮ ಹಾಗೂ ಬಡ ವರ್ಗಕ್ಕೂ ಕಡಿಮೆ ದರದಲ್ಲಿ ನಿವೇಶನಗಳು ಸಿಗುತ್ತವೆ. ಆದರೆ 2012 ರಿಂದ ಈ ಕನಸು ಸಾಕಾರವಾಗಿಲ್ಲ. ಖಾಸಗಿ ರಿಯಲ್‌ ಎಸ್ಟೇಟ್‌ ಉದ್ದಿಮೆದಾರರ ಇಚ್ಛಾಶಕ್ತಿ, ಹಣಬಲದ ಮುಂದೆ ಸೂಡಾಗೆ ಶಿವಮೊಗ್ಗ ಸುತ್ತಮುತ್ತ ಭೂಮಿಯೇ ದೊರೆಯುತ್ತಿಲ್ಲ. ರೈತರು ಸಹ ದುಬಾರಿ ದರ ಹೇಳುತ್ತಿರುವುದರಿಂದ ಹಿಂದೇಟು ಹಾಕುವಂತಾಗಿದೆ. ಕೆಲ ಕಾನೂನು ತೊಡಕು ಹಾಗೂ ಈ ಹಿಂದೆ ನಡೆದ ನಿವೇಶನ ಹಂಚಿಕೆ ಹಗರಣದಿಂದಲೂ ರೈತರು ತಮ್ಮ ಜಮೀನು ಇತರರ ಪಾಲಾಗುವುದು ಬೇಡ ಎಂದು ಮುಂದೆ ಬರುತ್ತಿಲ್ಲ.

ಖಾಸಗಿ ಪೈಪೋಟಿಯಿಂದಾಗಿ ಸೂಡಾಗೆ ಭೂಮಿಯೇ ಲಭ್ಯವಾಗುತ್ತಿಲ್ಲ. ಈ ಹಿಂದೆ ಮಲವಗೊಪ್ಪದಲ್ಲಿ 170 ಎಕರೆ ಜಾಗದಲ್ಲಿ ವಾಜಪೇಯಿ ಬಡಾವಣೆ ಅಭಿವೃದ್ಧಿ ಪಡಿಸಲಾಗಿತ್ತು. ಆದರೆ, ನಿಯಮಬಾಹಿರ ಹಾಗೂ ಒಂದೇ ಕುಟುಂಬಕ್ಕೆ ಹಲವು ನಿವೇಶನಗಳ ಹಂಚಿಕೆ ಮಾಡಿರುವ ಪ್ರಕರಣ ಲೋಕಾಯುಕ್ತದಲ್ಲಿದೆ. ನಾನಾ ತಕರಾರುಗಳ ಮಧ್ಯೆ ಸೂಡಾದಿಂದ ಬಡಾವಣೆ ಅಭಿವೃದ್ಧಿಪಡಿಸುವ ಕೆಲಸ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. 1985-2011ರ ವರೆಗೆ 16 ಬಡಾವಣೆ 9,093 ನಿವೇಶನಗಳನ್ನು ಸೂಡಾ ಅಭಿವೃದ್ಧಿಪಡಿಸಿದೆ. ಆದರೆ, ಡೆವಲಪರ್ಗಳಿಂದ ಲೇಔಟ್‌ ರಚನೆ, ಬಡಾವಣೆಗಳ ಅಭಿವೃದ್ಧಿ ಕಾರ್ಯ ಅಲ್ಲಲ್ಲಿ ತೊಡಕುಗಳನ್ನು ಎದುರಿಸಿದರೂ ಸರಾಗವಾಗಿ ಸಾಗಿದೆ. ಖಾಸಗಿಯವರಿಂದ 1985ರಿಂದ 2019ರ ವರೆಗೆ ಒಟ್ಟು 19,600 ನಿವೇಶನಗಳನ್ನು ಮಾರಾಟ ಮಾಡಲಾಗಿದೆ. ಸರಕಾರದ ವಿವಿಧ ಯೋಜನೆಗಳಿಂದ ಬಡವರಿಗೆ ಕೊಡ ಮಾಡುವ ವಸತಿ ಯೋಜನೆಗಳೂ ನಿಗದಿತ ಅವ ಧಿಗೆ ಪೂರ್ಣಗೊಳ್ಳುತ್ತಿಲ್ಲ.

ಕೊಳಚೆ ನಿರ್ಮೂಲನಾ ಮಂಡಳಿ, ನಗರಸಭೆ, ಪುರಸಭೆ, ಪಾಲಿಕೆ ಮೂಲಕ ನಿರ್ಮಾಣವಾಗಬೇಕಿರುವ ಮನೆಗಳು ಮರಳು, ಕಾರ್ಮಿಕರ ಕೊರತೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೂ ಪೂರ್ಣಗೊಂಡಿಲ್ಲ. ಬಡವರ ಕನಸು ನನಸಾಗುತ್ತಿಲ್ಲ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.