ನಿವೇಶನ ನಿರ್ಮಾಣಕ್ಕೆ ಟೆಂಡರ್‌

ಹೈಕೋರ್ಟ್‌ನಿಂದ ಪ್ರಾಧಿಕಾರ ವಿರುದ್ಧದ ತಡೆಯಾಜ್ಞೆ ತೆರವು

Team Udayavani, Aug 5, 2019, 12:20 PM IST

5-AGUST-17

ಶಿವಮೊಗ್ಗ: ಸೂಡಾ ಸಾಮಾನ್ಯ ಸಭೆಯಲ್ಲಿ ಶಾಸಕ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು.

ಶಿವಮೊಗ್ಗ: ನಗರದ ಹೊರವಲಯದ ಉರಗಡೂರಿನಲ್ಲಿ ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಭೂ ವಿವಾದ ಅಂತ್ಯವಾಗಿದ್ದು ನಿವೇಶನ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ. ಸ್ಮಾರ್ಟ್‌ಸಿಟಿಗೆ ಪೂರಕವಾಗಿ ಬಡಾವಣೆ ನಿರ್ಮಾಣ ಮಾಡಲು ಪ್ರಾಧಿಕಾರ ನಿರ್ಧರಿಸಿದೆ.

ಶನಿವಾರ ಶಿವಮೊಗ್ಗ ಸೂಡಾ (ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಕಾರ) ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಸ್ತಾವನೆಗೆ ಈಗ ಮರುಜೀವ ಬಂದಿದ್ದು ಪ್ರಾಧಿಕಾರದ ವಿರುದ್ಧ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿದೆ ಎಂದು ಸೂಡಾ ಆಯುಕ್ತ ಮೂಕಪ್ಪ ಕರಿಭೀಮಣ್ಣನವರ್‌ ಸಭೆಗೆ ತಿಳಿಸಿದರು.

ಊರಗಡೂರಿನ ಸರ್ವೆ ನಂ.340, 341, 342/ಪಿ, 343/ಪಿ, 344/ಪಿ ಮುಂತಾದ ಭಾಗಗಳ 56 ಎಕರೆ ಪ್ರದೇಶಕ್ಕೆ ಸಂಬಂಧಿಸಿ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ಸರ್ವೆ ನ. 360ರ 4 ಎಕರೆ ಭೂಮಿಗೆ ಇನ್ನೂ ತಡೆಯಾಜ್ಞೆ ಇದೆ ಎಂದು ಮಾಹಿತಿ ನೀಡಿದರು.

ಕೆಎಸ್‌ಡಬ್ಲ್ಯುಎಸ್‌ ಶಿವಮೊಗ್ಗ ವಿಭಾಗದ ಕಾರ್ಯಪಾಲಕ ಅಭಿಯಂತರರ ಸೂಚನೆಯಂತೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿರುವ ವಿನ್ಯಾಸ ನಕ್ಷೆಯನ್ನು ಅನುಸರಿಸಿ ಕಚ್ಚಾ ರಸ್ತೆ, ಮೋರಿ ಹಾಗೂ ಚರಂಡಿ ಮಾಡಲು ಲೋಕೋಪಯೋಗಿ ಇಲಾಖೆ ದರಪಟ್ಟಿಯಂತೆ 25 ಲಕ್ಷ ರೂ. ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಬೇಕಿದೆ ಎಂದು ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಸೂಡಾಗೆ ನಾಮನಿರ್ದೇಶನಗೊಂಡಿರುವ ಪಾಲಿಕೆ ಸದಸ್ಯೆ ಸುನಿತಾ ಅಣ್ಣಪ್ಪ ಮಾತನಾಡಿ, ಈಗಾಗಲೇ ಶಿವಮೊಗ್ಗದ ಹಲವು ವಾರ್ಡ್‌ಗಳು ಸ್ಮಾಟ್ಸಿಟಿ ಯೋಜನೆಗೆ ಆಯ್ಕೆಯಾಗಿವೆ. ಕೆಲಸವೂ ಆರಂಭವಾಗಿದೆ. ಹೀಗಾಗಿ ಹೊಸ ಬಡಾವಣೆಯನ್ನು ಸ್ಮಾರ್ಟ್‌ ಸಿಟಿ ಮಾದರಿಯಲ್ಲೇ ನಿರ್ಮಿಸುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಸಂಪರ್ಕ ರಸ್ತೆ ಕಡ್ಡಾಯ: ಹೊಸದಾಗಿ ಬಡಾವಣೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪಕ್ಕದ ಭೂಮಿಗೆ ತೆರಳಲು ಸಂಪರ್ಕ ರಸ್ತೆಯನ್ನು ಬಿಡಬೇಕಾದ್ದು ಕಡ್ಡಾಯ. ಹಲವು ಕಡೆ ಬಡಾವಣೆ ನಿರ್ಮಿಸುವವರು ಪಕ್ಕದ ಜಮೀನಿಗೆ ತೆರಳುವ ಮಾರ್ಗವನ್ನು ಬಂದ್‌ ಮಾಡಿರುವುದು ಕಂಡುಬಂದಿದೆ. ಇದರಿಂದ ಸಮಸ್ಯೆಯಾಗಿದೆ. ಇನ್ನು ಇಂತಹ ಅಚಾತುರ್ಯ ಆಗಬಾರದು. ಅದೇ ರೀತಿ ಏಕ ನಿವೇಶನ ಹರಾಜು ಸಂದರ್ಭದಲ್ಲೂ ಅಲ್ಲಿ ವಿದ್ಯುತ್‌, ನೀರು ಸೇರಿದಂತೆ ಮೂಲ ಸೌಕರ್ಯವಿದೆಯೇ ಎಂದು ಗಮನಿಸಬೇಕೆಂದು ಶಾಸಕ ಕೆ.ಎಸ್‌. ಈಶ್ವರಪ್ಪ ಸೂಚಿಸಿದರು.

ಬಡಾವಣೆಗಳನ್ನು ಪರಿಶೀಲಿಸಿ: ಹೊಸದಾಗಿ ನಿರ್ಮಾಣವಾಗಿರುವ ಬಡಾವಣೆಗಳ ನಿವೇಶನಗಳು ಜನ ಸಾಮಾನ್ಯರಿಗೆ ಹಸ್ತಾಂತರವಾಗುವ ಮುನ್ನ ಅದನ್ನು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್‌ಗಳು ಪರಿಶೀಲನೆ ಮಾಡಬೇಕು. ಅಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗಿದೆಯೇ ಎಂಬುದನ್ನು ಗಮನಿಸಬೇಕು. ಪ್ಲ್ಯಾನ್‌ನಲ್ಲಿ ಇರುವಂತೆಯೇ ಬಡಾವಣೆ ನಿರ್ಮಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಒಳಿಕವಷ್ಟೇ ವಿತರಣೆಗೆ ಅನುಮತಿ ನೀಡಬೇಕು. ಒಂದು ವೇಳೆ ಸೂಡಾ ಸದಸ್ಯರ ಪರಿಶೀಲನೆ ವೇಳೆ ಬಡಾವಣೆ ಸಮಪರ್ಕವಾಗಿಲ್ಲ ಎಂಬುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಎಚ್ಚರಿಸಿದರು. ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಡಿಸಿ ಕೆ.ಎ. ದಯಾನಂದ್‌, ಶಾಸಕರಾದ ಕೆ.ಎಸ್‌. ಈಶ್ವರಪ್ಪ. ಆರಗ ಜ್ಞಾನೇಂದ್ರ, ಕೆ.ಬಿ. ಅಶೋಕ ನಾಯ್ಕ, ವಿಧಾನಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್‌, ಎಸ್‌. ರುದ್ರೇಗೌಡ, ಆರ್‌. ಪ್ರಸನ್ನಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.