ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಬದ್ಧ

ಗೊರುಚ ಸಮಿತಿ ಶ್ರಮ ವಿಫಲವಾಗಲು ಬಿಡುವುದಿಲ್ಲಪ್ರತಿ ವರ್ಷ ಬಜೆಟ್‌ನಲ್ಲಿ 100 ಕೋಟಿ ಬಿಡುಗಡೆ ಮಾಡಿ

Team Udayavani, Nov 24, 2019, 3:02 PM IST

24-November-12

ಬಸವಕಲ್ಯಾಣ: ವಿಶ್ವಗುರು ಬಸವಣ್ಣನವರು ಹಾಗೂ ಶರಣರ ಕಲ್ಪನೆಯಂತೆ ಆಧುನಿಕ ಅನುಭವ ಮಂಟಪ ನಿರ್ಮಿಸಿ ವಿಶ್ವದ ಜನರು ಮತ್ತೆ ಕಲ್ಯಾಣ ನಾಡಿನ ಕಡೆ ಬರುವಂತೆ ಬಿಜೆಪಿ ಸರ್ಕಾರ ಮಾಡಲಿದೆ ಎಂದು ಬೀದರ ಜಿಲ್ಲಾ ಉಸ್ತುವಾರಿ ಹಾಗೂ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.

ನಗರದ ಅನುಭವ ಮಂಟಪ ಪರಿಸರದಲ್ಲಿ ಶನಿವಾರ ವಿಶ್ವ ಬಸವ ಧರ್ಮ ಟ್ರಸ್ಟ್‌ ಹಾಗೂ ಅನುಭವ ಮಂಟಪದಿಂದ ಹಮ್ಮಿಕೊಂಡಿರುವ 40ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಶರಣರ ಹಾಗೂ ಬಸವಾಭಿಮಾನಿಗಳ ಆಶಯದಂತೆ ಈಗಾಗಲೇ ಬಿಜೆಪಿ ಸರ್ಕಾರ ಹೈದ್ರಾಬಾದ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದೆ. ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ 50 ಕೋಟಿ ರೂ. ಮಂಜೂರು ಮಾಡಿ, 20 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಹೆಚ್ಚು ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಅನುಭವ ಮಂಟಪಕ್ಕಾಗಿ ಸಾಹಿತಿ ಗೋ.ರು. ಚನ್ನಬಸವಪ್ಪ ಅಧ್ಯಕ್ಷತೆಯಲ್ಲಿ ರಚಿಸಿದ ಸಮಿತಿಯು ಹಲವು ವರ್ಷಗಳಿಂದ ಅನುಭವ ಮಂಟಪ ನಿರ್ಮಾಣಕ್ಕಾಗಿ ಪಟ್ಟ ಶ್ರಮವನ್ನು ನಾವು ವಿಫಲವಾಗಲು ಬಿಡುವುದಿಲ್ಲ. ಮೂರು ತಿಂಗಳೊಳಗೆ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳನ್ನು ಆಹ್ವಾನಿಸಿ, ನೂತನ ಅನುಭವ ಮಂಟಪಕ್ಕೆ ಅಡಿಗಲ್ಲು ಸಮಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕಲಬುರಗಿಯಿಂದ ಬೆಂಗಳೂರಿಗೆ ಹೋಗಲು ವಿಮಾನ ಹಾರಾಟಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬೀದರ್‌ ನಿಂದ ಬೆಂಗಳೂರಿಗೆ ವಿಮಾನ ಹಾರುವಂತೆ ಮಾಡುವ ಜವಾಬ್ದಾರಿ ಸಂಸದರಾದ ಭಗವಂತ ಖೂಬಾ, ಡಾ| ಉಮೇಶ ಜಾಧವ ಹಾಗೂ ನನ್ನ ಮೇಲಿದೆ. ಅದನ್ನು ಆದಷ್ಟು ಬೇಗ ಮಾಡುತ್ತೇವೆ ಎಂದು ಹೇಳಿದರು.

ಕಲಬುರಗಿಯ ಸಂಸದ ಡಾ| ಉಮೇಶ ಜಾಧವ ಮಾತನಾಡಿ, ನೂತನ ಅನುಭವ ಮಂಟಪ ನಿರ್ಮಾಣಕ್ಕಾಗಿ ಶಾಸಕ ಬಿ.ನಾರಾಯಣರಾವ್‌ ಸಾಕಷ್ಟು ಪ್ರಯತ್ನ ಮಾಡಿದ್ದರು. ವಿಧಾನಸಭೆಯಲ್ಲಿ ಸುಮಾರು 30 ನಿಮಿಷ ಅನುಭವ ಮಂಟಪದ ಮಹತ್ವದ ಕುರಿತು ತಿಳಿಸಿದ್ದರು. ಆದರೂ ಅದಕ್ಕೆ ಸ್ಪಂದಿಸಿಲ್ಲ. ಆದರೆಸಿಎಂ ಯಡಿಯೂರಪ್ಪ ಅಧಿಕಾರಕ್ಕೆ ಬಂದ ಕೆಲವು ದಿನಗಳಲ್ಲಿಯೇ ಅನುದಾನ ಬಿಡುಗಡೆ ಮಾಡಿದರು.

ಹೀಗಾಗಿ ಬರುವ ಬಸವ ಜಯಂತಿ ಒಳಗೆ ಅಡಿಗಲ್ಲು ಸಮಾರಂಭ ನೆರವೇರಿಸುತ್ತೇನೆ ಎಂದು ಆಶ್ವಾಸನೆ ನೀಡಿದರು. ಬೀದರ ಸಂಸದ ಭಗವಂತ ಖೂಬಾ ಮಾತನಾಡಿ, ದೇಶದಲ್ಲಿ ಸಮಸ್ಯೆಗಳು ಉದ್ಭವವಾದಾಗ ಸರ್ಕಾರ ಅದನ್ನು ಬಗೆಹರಿಸುತ್ತಾ ಬರುತ್ತಿದೆ. ಆದರೆ ಸಮಸ್ಯೆಗಳು ಉದ್ಭವಿಸುವುದು ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ಮನುಷ್ಯನಲ್ಲಿ ವ್ಯಕ್ತಿತ್ವ ವಿಕಸನವಾಗುವುದು ಅವಶ್ಯಕವಾಗಿದೆ. ಇದು ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದರು.

ಅನುಭವ ಮಂಟಪ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಸಮಾನತೆ ಹಾಗೂ ಪ್ರಜಾಭುತ್ವಕ್ಕಾಗಿ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣನವರ ಪ್ರಚಾರವನ್ನು ನಾವು ಕರ್ನಾಟಕದ ಗಡಿಭಾಗದಿಂದ ಬೇರೆ ಕಡೆ ತಲುಪಿಸುವಲ್ಲಿ ನಾವು ವಿಫಲರಾಗಿದ್ದೇವೆ. ಮುದೊಂದು ದಿನ ದೇಶದಲ್ಲಿ ಬಸವತತ್ವಗಳು ಆಚರಣೆಗೆ ಬರುತ್ತವೆ ಎಂದರು.

ವಿಶ್ವಗುರು ಬಸವಣ್ಣನವರ ತತ್ವಗಳಲ್ಲಿ ಬಹಳಷ್ಟು ಶಕ್ತಿಯಿದೆ. ಇದನ್ನು ನಾವು ವಿಶ್ವಕ್ಕೆ ಪರಿಚಯಿಸಬೇಕಾಗಿದೆ. ಮೊಟ್ಟ ಮೊದಲು ವಯಸ್ಕರ ಶಿಕ್ಷಣ ಆರಂಭಿಸಿರುವುದು ಸರ್ಕಾರವಲ್ಲ ಬಸವಣ್ಣನವರು. ಹೀಗಾಗಿ ಅವರ ತತ್ವಾರ್ಶಗಳನ್ನು ಬೆಳೆಕಿಗೆ ತರುವ ಕೆಲಸವನ್ನು ನಾವು ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಬಿ.ನಾರಾಯಣರಾವ್‌ ಮಾತನಾಡಿ, ಡಾ| ಚೆನ್ನಬಸಲಿಂಗ ಪಟ್ಟದ್ದೇವರ ಆಶಯದಂತೆ ನೂತನ ಅನುಭವ ಮಂಟಪ ನಿರ್ಮಿಸಿ ವಿಶ್ವದ ಜನರು ಇಲ್ಲಿಗೆ ಬರುವಂತೆ ಮಾಡುವುದೇ ನಮ್ಮ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಒಂದೊಂದು ಸಿದ್ಧತೆ ಮಾಡಿಕೊಂಡು ಬರಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರು ಶ್ರೀ ಬೇಲಿಮಠ ಮಹಾ ಸಂಸ್ಥಾನದ ಶ್ರೀ ಶಿವರುದ್ರ ಮಹಾ ಸ್ವಾಮೀಜಿ ಸಾನ್ನಿಧ್ಯ ಹಾಗೂ ಸುಕ್ಷೇತ್ರ ಹಾರಕೂಡದ ಹಿರೇಮಠ ಸಂಸ್ಥಾನದ ಡಾ| ಚೆನ್ನವೀರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು.

ಸೇಡಂ ಶಾಸಕ ರಾಜಕುಮಾರ ತೇಲ್ಕೂರ, ಧಾರವಾಡದ ಸ್ವರ ಸಾಮ್ರಾಟ್‌ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ, ಮಾಜಿ ಶಾಸಕರಾದ ಮಲ್ಲಿಕಾರ್ಜುನ ಖೂಬಾ, ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ, ಬಿಜೆಪಿ ಯುವ ಮುಖಂಡ ಶರಣು ಸಲಗರ, ಬಾಬು ವಾಲಿ, ಪ್ರಥಮ ದರ್ಜೆ ಗುತ್ತಿಗೆದಾರ ಗುರುನಾಥ ಕೊಳ್ಳೂರ, ಶಾಲಿನಿ ಸಂಜಯ ವಾಡೇಕರ್‌, ಬಸವೇಶ್ವರ ದೇವಸ್ಥಾನದ ಅಧ್ಯಕ್ಷ ಅನೀಲ ರಗಟೆ, ಬಸವರಾಜ ಬಾಲಕಿಲೆ, ಡಾ| ಎಸ್‌.ಬಿ. ದುರ್ಗೆ, ಅನೀಲ ಭೂಸಾರೆ, ಪ್ರದೀಪ ವಾತಡೆ, ನೀಲಕಂಠ ರಾಠೊಡ, ಶಿವರಾಜ ನರಶೆಟ್ಟಿ, ಬಸವರಾಜ ಧನ್ನೂರ ಮತ್ತಿತರರು ಇದ್ದರು.

ಆಕಾಶವಾಣಿ ಕಲಾವಿದ ನವಲಿಂಗ ಪಾಟೀಲ ನಿರೂಪಿಸಿದರು, ಅನುಭವ ಮಂಟಪ ಉತ್ಸವ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಧನರಾಜ ತಾಳಂಪಳ್ಳಿ ಸ್ವಾಗತಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.