ವ್ಯಕ್ತಿ ಅಭಿಮಾನ ಮನೆಯಲ್ಲಿಟ್ಟುಕೊಳ್ಳಿ

ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳಿ•ಬೆಳೆಯಬೇಕು ಎಂಬ ಆಶಯ ಇದ್ದವರು ಕೆಲಸ ಮಾಡಲೇಬೇಕು

Team Udayavani, Sep 19, 2019, 4:08 PM IST

19-Sepctember-19

ಶಿರಸಿ: ಬಿಜೆಪಿ ರಾಜ್ಯ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರನ್ನು ಸಮ್ಮಾನಿಸಲಾಯಿತು.

ಶಿರಸಿ: ಗ್ರಾಪಂ ಸದಸ್ಯನಿಂದ ಸಂಸದನಾಗುವ ತನಕ ಯಾವುದೇ ಜನಪ್ರತಿನಿಧಿಗೆ ಟಿಕೆಟ್, ಪಕ್ಷದಲ್ಲಿನ ಯಾವುದೇ ಹುದ್ದೆ ಬೇಕಿದ್ದರೂ ಪ್ರತಿಯೊಬ್ಬರೂ ಕಾರ್ಯಕರ್ತನ ಮನೆ ಬಾಗಿಲಿಗೆ ತೆರಳಿರಬೇಕು. ಕನಿಷ್ಠ 25 ಸದಸ್ಯರ ಸದಸ್ಯತ್ವ ಪಕ್ಷಕ್ಕಾಗಿ ಮಾಡಿಸಿರಬೇಕು. ಉಳಿದ ಪಕ್ಷಗಳಂತೆ ಟಯರ್‌ ಸುಟ್ಟರೆ, ಬಸ್ಸಿಗೆ ಕಲ್ಲು ಒಗೆದರೆ ಟಿಕೆಟ್ ಕೊಡುವುದಿಲ್ಲ. ಅಂಥ ಅಭಿಮಾನ ಮನೆಯೊಳಗೆ ಇಟ್ಟುಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್ ಸ್ಪಷ್ಟಪಡಿಸಿದರು.

ಅವರು ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಬಿಜೆಪಿ ತತ್ವ ಸಿದ್ಧಾಂತದ ಪಕ್ಷ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್‌ ಷಾ ಅವರೇ ಪಕ್ಷದ ಕಾರ್ಯಕರ್ತನ ಮನೆಗೆ ತೆರಳಿ ಸಂಘಟನೆ ಮಾಡುತ್ತಾರೆ ಎಂದರೆ, ಶಾಸಕರು, ಸಂಸದರು, ಜಿಪಂ, ತಾಪಂ, ಗ್ರಾಪಂ, ನಮ್ಮ ಶಕ್ತಿ ಕೇಂದ್ರದ ಅಧ್ಯಕ್ಷರು ಮನೆ ಮನೆಗೆ ತೆರಳಿ ಅಭಿಯಾನ ಮಾಡಲು ಆಗದುವದಿಲ್ಲವಾ? ಬೆಳೆಯಬೇಕು ಎಂಬ ಆಶಯ ಇದ್ದವರು ಈ ಕೆಲಸ ಮಾಡಲೇಬೇಕು. ನಾನೂ ಇದನ್ನು ಬಿಟ್ಟು ಹೋಗುವುದಿಲ್ಲ. ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲೂ ಹಿಂದೇಟು ಹಾಕುವುದಿಲ್ಲ. ಬಿಜೆಪಿಯಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತವಿದೆ ಎಂದೂ ಹೇಳಿದರು.

ಕೇವಲ ದೇಶದ ಅಧಿಕಾರ ನಡೆಸಲು ಸೋನಿಯಾಗಾಂಧಿ ಅಥವಾ ಮನಮೋಹನ ಸಿಂಗ್‌ ಅವರಿದ್ದರೆ ಸಾಕು. ಆದರೆ ನಮ್ಮ ದೇಶ ಅಭಿವೃದ್ಧಿ ಕಾಣಲು, ರಾಮರಾಜ್ಯವಾಗಲು, ಪರಿವರ್ತನೆ ಹೊಂದಲು, ಜಗತ್‌ ವಂದ್ಯ ಭಾರತವಾಗಲು ನರೇದ್ರ ಮೋದಿ ಅವರಂಥವರೇ ಬೇಕು. ಸಿದ್ದರಾಯಮ್ಯ ವಿಲನ್‌ ಆದರು. ಕುಮಾರಸ್ವಾಮಿ ಅವರು ಪಾರ್ಟ್‌ ಟೈಮ್‌ ಸಿಎಂ ಆಗಿ ಕಾರ್ಯ ನಿರ್ವಹಿಸಿದರು. ಕಾಂಗ್ರೆಸ್‌ ಹೀನ ಸರಕಾರದಿಂದ ಜನ ಬೇಸತ್ತಿದ್ದು ಈಗ ನನಮ್ಮನ್ನು ಅಭಿವೃದ್ಧಿಗೆ ಪ್ರೇರೇಪಿಸಿದ್ದಾರೆ ಎಂದರು.

ಅತಿವೃಷ್ಠಿಹಾನಿಗೆ ಕೇಂದ್ರ ಸರಕಾರ ಪರಿಹಾರ ಏನನ್ನೂ ಕೊಟ್ಟಿಲ್ಲ ಎನ್ನುವವರು ಅವರ ಅವಧಿಯಲ್ಲಿ ಏನು ಮಾಡಿದ್ದರು ಎಂದು ಬಿಚ್ಚಿ ಇಡಬೇಕಾ? ನಮ್ಮ ಕೇಂದ್ರ ಸರಕಾರ ಕೊಡುವಷ್ಟು ಕೊಟ್ಟೇ ಕೊಡುತ್ತದೆ ಎಂದೂ ಹೇಳಿದ ಅವರು, ಕೇಳಿದ್ದನ್ನು ಕೊಡುವ ಕಾಮಧೇನು ಮುಖ್ಯಮಂತ್ರಿ ಯಡಿಯೂರಪ್ಪನವರು ಇರುವಾಗ ರಾಜ್ಯದ ಜನತೆ ಯಾರೂ ಕೂಡಾ ಕಣ್ಣೀರಿಡುವುದು ಬೇಡ. ನಾವು ಅಭಿವೃದ್ಧಿಯನ್ನೇ ಬಯಸಿದವರು ಅಧಿಕಾರವನ್ನಲ್ಲ. ಆದ್ದರಿಂದ ಯಾರೂ ಹೆದರುವ ಅವಶ್ಯಕತೆಯೂ ಇಲ್ಲ ಎಂದೂ ವಿವರಿಸಿದರು.

ಹುಬಳ್ಳಿ ಮಹೇಶ ಟೆಂಗಿನಕಾಯಿ, ಶಾಸಕರಾದ ಸುನೀಲ್ ನಾಯ್ಕ, ರೂಪಾಲಿ ನಾಯ್ಕ, ದಿನಕರ ಶಟ್ಟಿ, ಮಾಜಿ ಶಾಸಕರಾದ ಶಿವಾನಂದ ನಾಯ್ಕ, ವಿನೋದ ಪ್ರಭು, ವಿವೇಕಾನಂದ ವೈದ್ಯ, ಸುನಿಲ್ ಹೆಗಡೆ, ವಿ.ಎಸ್‌. ಪಾಟೀಲ್, ಗಂಗಾಧರ ಭಟ್, ಎಂ.ಜಿ. ನಾಯ್ಕ, ವಿನೋದ ಪ್ರಭು, ಕೃಷ್ಣ ಎಸಳೆ, ಆರ್‌.ವಿ. ಹೆಗಡೆ, ಗಣಪತಿ ನಾಯ್ಕ ಇದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.