ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್‌- ಅಮಿತ್‌ ಶಾ, ಮೈತ್ರಿಕೂಟದಿಂದ ಎ‍ಚ್ಡಿಡಿ- ಎ‍ಚ್ಡಿಕೆ, ಡಿಕೆಶಿ ಪ್ರಚಾರ

Team Udayavani, Apr 22, 2019, 12:48 PM IST

Udayavani Kannada Newspaper

ಶಿವಮೊಗ್ಗ: ರಣತಂತ್ರ, ಸಾಲು ಸಾಲು ಮುಖಂಡರ ಸರಣಿ ಸಭೆ, ಗುಪ್ತ ಸಭೆ, ಉಭಯ ಪಕ್ಷಗಳ ಮುಖಂಡರ ಸರಣಿ ಸಭೆಯೊಂದಿಗೆ ಶಿವಮೊಗ್ಗ ಲೋಕಸಭೆ ಚುನಾವಣೆ ಬಹಿರಂಗ ಪ್ರಚಾರ ಭಾನುವಾರ ಕೊನೆಗೊಂಡಿತು.

ಮಂಡ್ಯದ ನಂತರ ಹೈವೋಲ್ಟೇಜ್‌ ಕ್ಷೇತ್ರವಾಗಿ ಪರಿಗಣನೆಗೊಂಡಿರುವ ಶಿವಮೊಗ್ಗದಲ್ಲಿ ನಾಲ್ಕೈದು ದಿನಗಳಿಂದ ಮುಖಂಡರ ದಂಡು ಹರಿದುಬಂದಿತ್ತು. ಶನಿವಾರ ಸಂಜೆ ಶಿವಮೊಗ್ಗಕ್ಕೆ ಬಂದ ಸಿಎಂ ಕುಮಾರಸ್ವಾಮಿ ಸಾಗರದಲ್ಲಿ ಬಹಿರಂಗ ಪ್ರಚಾರ ನಡೆಸಿ, ರಾತ್ರಿ ಮೂರು ಗಂಟೆವರೆಗೂ ಮುಖಂಡರ ಜತೆ ಸಭೆ ತಂತ್ರಗಾರಿಕೆ ಹೆಣೆದಿದ್ದಾರೆ. ಬೆಳಗ್ಗೆ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಸಭೆ ನಡೆಸುವುದಾಗಿ ಅಂತಿಮ ಕ್ಷಣದಲ್ಲಿ ಕೈ ಬಿಟ್ಟಿದ್ದಾರೆ. ಸಿಎಂ ನಡೆ ಕುತೂಹಲ ಮೂಡಿಸಿದೆ. ಇತ್ತ ಮೂರು ದಿನದಿಂದ ಪುತ್ರನ ಪರ ಪ್ರಚಾರದಲ್ಲಿ ನಿರತರಾಗಿದ್ದ ಬಿ.ಎಸ್‌.ಯಡಿಯೂರಪ್ಪ, ಭಾನುವಾರ ನಾನಾ ಸಮುದಾಯದ ಮುಖಂಡರ ಮನವೊಲಿಕೆಯಲ್ಲಿ ನಿರತರಾಗಿದ್ದರು. ಅವರು ಸಹ ಯಾವುದೇ ಬಹಿರಂಗ ಸಭೆಯಲ್ಲಿ ಕಾಣಿಸಕೊಳ್ಳದಿದ್ದು ವಿಶೇಷ. ಕಾರ್ಯಕರ್ತರನ್ನು ಅಂತಿಮ ಘಟ್ಟಕ್ಕೆ ಅಣಿಗೊಳಿಸುವ ಪ್ರಯತ್ನಕ್ಕೆ ಎರಡೂ ಪಕ್ಷಗಳು ಸಜ್ಜಾಗಿವೆ.

ಮುಖಂಡರ ದಂಡು
ಪ್ರಚಾರದ ವಿಷಯಲ್ಲಿ ಬಿಜೆಪಿ ಈಗಾಗಲೇ ಮುಂದಿದೆ. ಜೆಡಿಎಸ್‌ ಕಾರ್ಯಕರ್ತರಿಗೆ ಸಂಪನ್ಮೂಲ ಒದಗಿಸುವಲ್ಲಿ ವಿಫಲವಾಗಿವೆ. ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿರುವುದರಿಂದ ಸಂಪನ್ಮೂಲ ಕ್ರೊಢೀಕರಣಕ್ಕೆ ಮುಖಂಡರು ಪರದಾಡುತ್ತಿದ್ದಾರೆ. ಮೊದಲ ಹಂತದ ಚುನಾವಣೆ ಮುಗಿದ ಮೇಲೆ 15ಕ್ಕೂ ಹೆಚ್ಚು ಸಚಿವರು, ಶಾಸಕರು, ಸಂಸದರು ಶಿವಮೊಗ್ಗದಲ್ಲಿ ನೆಲೆಯೂರಿದ್ದು, ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ. ಸೊರಬದಲ್ಲಿ ರೋಡ್‌ ಶೋ ನಡೆಸಿದ್ದು ಬಿಟ್ಟರೆ ಉಳಿದಂತೆ ಸಮುದಾಯದ ಮುಖಂಡರನ್ನು ಮನೆ ಮನೆ ಭೇಟಿ ಮತಯಾಚಿಸಿದ್ದಾರೆ. ಬಿಜೆಪಿ ಸಹ ತಾನು ಕಡಿಮೆ ಇಲ್ಲವೆಂಬಂತೆ ಘಟಾನುಘಟಿ ನಾಯಕರನ್ನು ಕರೆಸಿ ಪ್ರಚಾರ ನಡೆಸಿತು. ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ಸಂತೋಷ್‌ ಜೀ ಜತೆ ಜೆಡಿಎಸ್‌ಗೆ ಟಾಂಗ್‌ ಕೊಡಬಲ್ಲ ನಾಯಕರನ್ನು ಕರೆಸಿ ಪ್ರಚಾರ ನಡೆಸಿತ್ತು.

ಬಿಜೆಪಿ ಮುಖಂಡರು ಶಿವಮೊಗ್ಗ ನಗರದಲ್ಲಿ ಅದ್ಧೂರಿ ರೋಡ್‌ ಶೋ ನಡೆಸಿ ಮತಯಾಚಿಸಿದರು. ಪ್ರತಿ ಚುನಾವಣೆಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಕೈ ಹಿಡಿಯುತ್ತಿದ್ದು ಹೆಚ್ಚಿನ ಆದ್ಯತೆ ನೀಡಿದೆ. ಪೇಜ್‌ ಪ್ರಮುಖರು ಎರಡೆರರು ಬಾರಿ ಮನೆಮನೆ ತಲುಪಿದ್ದಾರೆ.

ಸ್ನೇಹಮಿಲನ: ಈ ಬಾರಿಯ ಚುನಾವಣೆಯಲ್ಲಿ ಅತಿ ಹೆಚ್ಚು ಚರ್ಚೆಯಾಗಿದ್ದು ಸ್ನೇಹಮಿಲನ ಕಾರ್ಯಕ್ರಮಗಳು. ಎರಡೂ ಪಕ್ಷಗಳು ಪ್ರತಿ ಸಮುದಾಯದ ಮುಖಂಡರನ್ನು ಕರೆಸಿಕೊಂಡು ಬೆಂಬಲ ಯಾಚಿಸಿದರು. ದೊಡ್ಡ ಸಮುದಾಯಗಳನ್ನು ದೊಡ್ಡ ಕಾರ್ಯಕ್ರಮಗಳಲ್ಲಿ ಸಣ್ಣ ಸಮುದಾಯಗಳನ್ನು ಮನೆಗೆ ಕರೆಸಿಕೊಂಡು ಬೆಂಬಲ ಯಾಚಿಸಿದವು. ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿ ಈ ಪ್ರಯೋಗದ ಮೂಲಕ ಯಶಸ್ಸು ಕಂಡಿತ್ತು. ಈ ಬಾರಿಯೂ ಅದನ್ನೇ ಮುಂದುವರಿಸಿತ್ತು. ಅವರಿಗಿಂತ ನಾವೇನು ಕಡಿಮೆ ಇಲ್ಲ ಎಂಬಂತೆ ಜೆಡಿಎಸ್‌- ಕಾಂಗ್ರೆಸ್‌ ಸಭೆ ಆಯೋಜಿಸಿತ್ತು. ಸ್ನೇಹಮಿಲನ ಕಾರ್ಯಕ್ರಮದಲ್ಲೂ ಬಿಜೆಪಿ ಮುಂದಿತ್ತು.

ಜಿಲ್ಲೆಯಿಂದ ಹೊರಟ ಮುಖಂಡರು: ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಿಂದ 30ಕ್ಕೂ ಹೆಚ್ಚು ಮುಖಂಡರು ಶಿವಮೊಗ್ಗಕ್ಕೆ ಬಂದಿದ್ದದರು ಇವರೆಲ್ಲ ಭಾನುವಾರ ಸಂಜೆ ಆರು ಗಂಟೆಗೆ ತಮ್ಮ ಊರಿನ ಕಡೆ ಪ್ರಯಾಣ ಬೆಳೆಸಿದರು. ಬಿಜೆಪಿಗೆ ಏಳು ಮಂದಿ ಶಾಸಕರಿದ್ದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ರಣತಂತ್ರ ರೂಪಿಸುತ್ತಿದ್ದಾರೆ.

ಕೊನೆ ಆಟ
ಮನೆ ಮನೆ ಪ್ರಚಾರಕ್ಕೆ ಸೋಮವಾರ ಒಂದು ದಿನ ಬಾಕಿ ಇದ್ದು, ಮತದಾರರ ಮನವೊಲಿಸಲು ಅಂತಿಮ ಕಸರತ್ತು ನಡೆಸಿವೆ. ಕಾಂಚಾಣದ ಸದ್ದು ಕೇಳುತ್ತಿರುವ ಬಗ್ಗೆ ಹಲವೆಡೆ ವರದಿಯಾಗಿದೆ. ಹಣ ಹಂಚಿಕೆ ಕುರಿತಂತೆ ಕಾರ್ಯಕರ್ತರ ನಡುವೆ ಅಸಮಾಧಾನಕ್ಕೂ ಕಾರಣವಾಗಿದೆ.

ಅಭ್ಯರ್ಥಿಗಳಿಗೆ ಆತಂಕ
ಇಷ್ಟು ದಿನ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗುತ್ತಿದ್ದ ಅಭ್ಯರ್ಥಿಗಳು ಈಗ ಕುಳಿತಲ್ಲೇ ಲೆಕ್ಕ ಹಾಕುತ್ತಿದ್ದಾರೆ. ಯಾವ ತಾಲೂಕಿನಲ್ಲಿ ಎಷ್ಟು ಮತ ಬೀಳಬಹುದು, ಇನ್ನೂ ಎಲ್ಲೆಲ್ಲಿ ಪ್ರಚಾರ ಮಾಡಬೇಕಿತ್ತು ಎಂಬ ಬಗ್ಗೆ ಲೆಕ್ಕ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.