ಕೊನೆಗೂ ಬಂತು ಆರಿದ್ರಾ ಮಳೆ

•1995ರ ನಂತರ ಅತಿ ಕಡಿಮೆ ಮಳೆ ದಾಖಲು•ಮಳೆನಾಡಲ್ಲಿ 24 ವರ್ಷದ ಬಳಿಕ ಭೀಕರ ಬರ

Team Udayavani, Jul 1, 2019, 12:00 PM IST

Udayavani Kannada Newspaper

ಶಿವಮೊಗ್ಗ: ಜೂನ್‌ ಅಂತ್ಯಕ್ಕೆ ಮಲೆನಾಡಿನಲ್ಲಿ ಮುಂಗಾರು ತನ್ನ ಪ್ರಭಾವ ತೋರಿಸುತ್ತಿದ್ದು, ರೈತರು ನಿಟ್ಟುಸಿರು ಬಿಡುವಂತಾಗಿದೆ. ಜೂನ್‌ನಲ್ಲಿ ರಚ್ಚೆ ಹಿಡಿಯಬೇಕಿದ್ದ ಮಳೆ ನಿರಾಸೆ ಮೂಡಿಸಿದ್ದು ಇಂತಹದೇ ಪರಿಸ್ಥಿತಿ 24 ವರ್ಷದ ಹಿಂದೆ ಬಂದಿತ್ತು.

2001ರಿಂದ 2003ರ ನಡುವೆ ಕಾಣಿಸಿಕೊಂಡ ಮೂರು ವರ್ಷದ ಬರವನ್ನು ಮೀರಿಸುವಂತಹ ಭೀಕರತೆ ಈ ವರ್ಷ ಎದುರಾಗಿದೆ. 1995ರಲ್ಲಿ ಜೂನ್‌ ಅಂತ್ಯಕ್ಕೆ ಶೇ.63ರಷ್ಟು ಮಳೆ ಕೊರತೆ ಕಂಡಿದ್ದ ಜಿಲ್ಲೆಯು 24 ವರ್ಷದ ಬಳಿಕ ತೀವ್ರ ಮಳೆ ಕೊರತೆ ಅನುಭವಿಸಿದೆ. ಜೂನ್‌ನಲ್ಲಿ ವಾಡಿಕೆಯಂತೆ 375.90 ಮಿ.ಮೀ. ಮಳೆಯಾಗಬೇಕಿತ್ತು. ಜೂ.27ರವರೆಗೆ ಕೇವಲ 168.70 ಮಿ.ಮೀ. ಮಳೆಯಾಗಿದ್ದು ಶೇ.55ರಷ್ಟು ಕೊರತೆಯಾಗಿದೆ.

ಹಿಂಗಾರು ಶೇ.55ರಷ್ಟು ವಿಫಲವಾಗಿದ್ದು, ಬೇಸಿಗೆಯಲ್ಲಿ ನಿರೀಕ್ಷಿತ ಮಳೆ ಬಾರದಿರುವುದು, ಮುಂಗಾರು ಹಂಗಾಮಿನ ಅಶ್ವಿ‌ನಿ, ಭರಣಿ, ಕೃತಿಕಾ, ರೋಹಿಣಿ, ಮೃಗಶಿರಾ ಮಳೆಗಳೂ ಕೈ ಕೊಟ್ಟವು. ಜನವರಿಯಿಂದ ಜೂನ್‌ ಅಂತ್ಯವರೆಗೆ ವಾಡಿಕೆಯಂತೆ 543 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ಅವಧಿಯಲ್ಲಿ ಕೇವಲ 220 ಮಿ.ಮೀ. (ಶೇ.59ಕೊರತೆ) ಮಳೆಯಾಗಿದೆ.

ಜೂನ್‌ ಮೊದಲ ವಾರದಲ್ಲಿ ನೈಋತ್ಯ ಮಾನ್ಸೂನ್‌ ಮಲೆನಾಡಿಗೆ ಕಾಲಿಟ್ಟಿದ್ದಲ್ಲಿ ಈ ಹೊತ್ತಿಗಾಗಲೆ ಹಳ್ಳ, ನದಿಗಳು ತುಂಬಿ ಹರಿದು ಕೆರೆ, ಕಟ್ಟೆ, ಜಲಾಶಯಗಳು ಶೇ.25ರಷ್ಟು ಭರ್ತಿಯಾಗಬೇಕಿತ್ತು. ಆದರೆ, ಕೆರೆ ಕಟ್ಟೆಗಳಿರಲಿ, ಜಲಾಶಯಗಳಿಗೂ ಹೊಸ ನೀರು ಬಂದಿಲ್ಲ. ಗಾಜನೂರು ಜಲಾಶಯ ಮತ್ತು ತುಂಗಾನದಿ ದಂಡೆ ಮೇಲಿರುವ ಶಿವಮೊಗ್ಗ ನಗರಕ್ಕೆ ಮಳೆಗಾಲದಲ್ಲೂ ದಿನಬಿಟ್ಟು ದಿನ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇನ್ನೊಂದು ತಿಂಗಳಲ್ಲಿ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ.

ಕೇವಲ 3 ಟಿಎಂಸಿ ಸಾಮರ್ಥ್ಯದ ತುಂಗಾ ಜಲಾಶಯವು ಭರ್ತಿಯಾಗಿ ಗ್ರಾಮೀಣರು ಹೇಳುವಂತೆ ತುಂಗಾ ಹೊಳೆ ಕಟ್ಟಬೇಕಿತ್ತು. ನದಿಯಲ್ಲಿ ಕನಿಷ್ಠ 25ಸಾವಿರ ಕ್ಯೂಸೆಕ್‌ ನೀರು ಹರಿಯುತ್ತಿತ್ತು. ಆದರೆ, ಈ ಬಾರಿ ಜಲಾಶಯಕ್ಕೆ ಹೊಸ ನೀರು ಬರದೆ ನೀರಿನ ಮಟ್ಟ ಡೆಡ್‌ ಸ್ಟೋರೇಜ್‌(1 ಟಿಎಂಸಿ) ತಲುಪಿದೆ. ರಾಜ್ಯಕ್ಕೆ ಶೇ.33ರಷ್ಟು ವಿದ್ಯುತ್‌ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1743.70 ಅಡಿಗೆ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1770.15 ಅಡಿ, (27 ಅಡಿ ಅಧಿಕ) ನೀರಿತ್ತು. ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ಜಲಾಶಯದಲ್ಲಿ 121.7 ಅಡಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 143 ಅಡಿ (22 ಅಡಿ ಅಧಿಕ) ನೀರಿತ್ತು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.