ಕೃಷಿ ಉತ್ಪಾದನಾ ವೆಚ್ಚ ಕಡಿತಗೊಳಿಸಿ: ಡಾ| ಮಂಜುನಾಥ್
ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವುದು ರೈತರಿಗೆ ಸಹಾಯಕ
Team Udayavani, Jun 12, 2019, 3:59 PM IST
ಶಿವಮೊಗ್ಗ: ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಡಾ| ಮಂಜುನಾಥ್ ನಾಯ್ಕ ಬಿಡುಗಡೆಗೊಳಿಸಿದರು.
ಶಿವಮೊಗ್ಗ: ಸ್ಥಳೀಯ, ನೈಸರ್ಗಿಕವಾಗಿ ದೊರಕುವ ವಸ್ತುಗಳನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಕೃಷಿ ಮಾಡುವುದರಿಂದ ರೈತರಿಗೆ ಉತ್ಪಾದನಾ ವೆಚ್ಚವನ್ನು ಕಡಿತಗೊಳಿಸಿ, ಹವಾಮಾನ ವೈಪರೀತ್ಯದಿಂದ ಎದುರಾಗುವ ಅಪಾಯವನ್ನು ತಗ್ಗಿಸಬಹದಾಗಿದೆ ಹಾಗೂ ಮಣ್ಣಿನಲ್ಲಿನ ಸೂಕ್ಷ್ಮಜೀವಿಗಳ ಸಂಖ್ಯೆಯನ್ನು ವೃದ್ಧಿಸಬಹುದಾಗಿದೆ ಎಂದು ಕುಲಪತಿ ಡಾ| ಮಂಜುನಾಥ್ ಕೆ. ನಾಯ್ಕ ಅಭಿಪ್ರಾಯಪಟ್ಟರು.
ಕೃಷಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆ ದಕ್ಷಿಣ ಅರೆಮಲೆನಾಡು ವಲಯ- 7ರ ಕಾರ್ಯವಾಹಿ ಸಂಶೋಧನಾ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ, ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಯೋಜನಾ ಸಭೆಯ ಮುಖ್ಯಸ್ಥ ಡಾ| ಎಚ್. ಕೆ. ವೀರಣ್ಣ ಅವರು ಈ ಯೋಜನೆಯಡಿ ಐದು ಜಿಲ್ಲೆಗಳ 14 ತಾಲೂಕುಗಳಲ್ಲಿ 37 ಕ್ಲಸ್ಟರ್ಗಳನ್ನು ಆಯ್ಕೆ ಮಾಡಲಾಗಿದ್ದು, 97 ಹಳ್ಳಿಗಳ 2000 ಹೆಕ್ಟೇರ್ ರೈತರ ಹೊಲದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ವಲಯದ ಮುಖ್ಯ ಬೆಳೆಗಳಾದ ಅಡಕೆ, ತೆಂಗು, ಮೆಕ್ಕೆಜೋಳ, ಭತ್ತ, ತಂಬಾಕು, ಆಲೂಗಡ್ಡೆ, ಬಾಳೆ, ಕಾಳುಮೆಣಸು, ಶುಂಠಿ, ಟೊಮ್ಯಾಟೊ, ಮೆಣಸಿನಕಾಯಿ ಮುಂತಾದ ಬೆಳೆಗಳನ್ನು ನೈಸರ್ಗಿಕ ಕೃಷಿ ಪದ್ಧತಿಯಡಿ ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ ಎಂದು ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು.
ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯ ವಲಯ-7 ಕ್ಕೆ ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಿಂದ ರೈತ ಪ್ರತಿನಿಧಿಗಳು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯವಾಹಿ ಸಂಶೋಧನಾ ಯೋಜನಾ ತಂಡದ ವಿಜ್ಞಾನಿಗಳು ಭಾಗವಹಿಸಿದ್ದರು. ಅತಿಥಿಗಳಾದ ಡಾ| ಬಿ. ಆರ್. ಗುರುಮೂರ್ತಿ ಸಂಶೋಧನಾ ನಿರ್ದೇಶಕರು ಮತ್ತು ಡಾ| ಎಚ್.ಎಂ. ಚಿದಾನಂದಪ್ಪ ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಇವರು ನೈಸರ್ಗಿಕ ಕೃಷಿ ಯೋಜನೆಯ ಹಸ್ತ ಪತ್ರಿಕೆಗಳನ್ನು ಬಿಡುಗಡೆ ಮಾಡಿದರು. ಯೋಜನೆ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳು ಮತ್ತು ಪೂರಕವಾದ ವಿಷಯಗಳ ಕುರಿತು ಕೃಷಿ ಅಧಿಕಾರಿಗಳು, ರೈತ ಪ್ರತಿನಿಧಿಗಳು ಹಾಗೂ ಕಾರ್ಯವಾಹಿ ಸಂಶೋಧನಾ ಯೋಜನಾ ತಂಡದ ವಿಜ್ಞಾನಿಗಳು ಚರ್ಚೆ ನಡೆಸಿದರು. ಡಾ| ಬಿ. ಸಿ. ಧನಂಜಯ (ಮಣ್ಣುವಿಜ್ಞಾನಿ) ವಂದಿಸಿದರು. ಡಾ|ಶರಣಬಸಪ್ಪ ಅವರು (ಕೀಟಶಾಸ್ತ್ರಜ್ಞರು) ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ
ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ