ಗ್ರಾಪಂಗಳಲ್ಲೇ ಆಯುಷ್ಮಾನ ಕಾರ್ಡ್‌

ಬಾಪೂಜಿ ಸೇವಾ ಕೇಂದ್ರದಲ್ಲಿ ಕಾರ್ಡ್‌ ವಿತರಣೆಗೆ ವ್ಯವಸ್ಥೆ

Team Udayavani, Dec 14, 2019, 12:53 PM IST

14-December-10

„ಶರತ್‌ ಭದ್ರಾವತಿ
ಶಿವಮೊಗ್ಗ:
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ ಭಾರತ್‌ ಯೋಜನೆ ಕಾರ್ಡ್‌ಗಳು ಎರಡು ವರ್ಷ ಕಳೆದರೂ ಜನರ ಕೈ ಸೇರಿಲ್ಲ. ಇದಕ್ಕೆ ಪರಿಹಾರ ಕಂಡುಕೊಂಡಿರುವ ಸರ್ಕಾರ ಇನ್ಮುಂದೆ ಗ್ರಾಪಂಗಳಲ್ಲೇ ಕಾರ್ಡ್‌ ವಿತರಣೆ ಮಾಡಲು ವ್ಯವಸ್ಥೆ ಮಾಡಿದೆ. ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈ ಹೊಸ ಸೇವೆ ಸೇರ್ಪಡೆಗೊಳ್ಳಲಿದೆ.

ಪ್ರತಿ ಕುಟುಂಬಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡುವ ಈ ಯೋಜನೆಗೆ ಸಾಕಷ್ಟು ಬೇಡಿಕೆ ಇದೆ. ಅದಕ್ಕಾಗಿ ಪ್ರತಿ ದಿನ ಕ್ಯೂನಲ್ಲಿ ನಿಂತು ಅರ್ಜಿ ಹಾಕುವವರ ಸಂಖ್ಯೆ ಕೂಡ ಅಷ್ಟೇ ಇದೆ. ಒಂದೂವರೆ ವರ್ಷದಿಂದ ಶಿವಮೊಗ್ಗದಲ್ಲಿ 3 ಲಕ್ಷ ಜನರಿಗೆ ಮಾತ್ರ ಕಾರ್ಡ್‌ ವಿತರಿಸಲಾಗಿದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ 13,04,120 ಮಂದಿ ಜಿಲ್ಲೆಯಲ್ಲಿದ್ದು ಇನ್ನೂ 10 ಲಕ್ಷ ಜನಕ್ಕೆ ಕಾರ್ಡ್‌ ಅಗತ್ಯವಿದೆ. ರಾಜ್ಯದ ಎಲ್ಲ ಜಿಲ್ಲೆಯಲ್ಲೂ ಸ್ಥಿತಿ ಹೀಗೆಯೇ ಇದೆ.

ಕಾರ್ಡ್‌ಗಳನ್ನು ಮೊದಲು ಜಿಲ್ಲಾಸ್ಪತ್ರೆ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ 13 ಕೇಂದ್ರಗಳಲ್ಲಿ ಮಾತ್ರ ವಿತರಿಸಲಾಗುತಿತ್ತು. ಅದು ಕೂಡ ಆಸ್ಪತ್ರೆಗೆ ದಾಖಲಾದವರಿಗೆ ಮಾತ್ರ ನೀಡಲಾಗುತ್ತಿತ್ತು. ನಂತರ 311 ಸಾಮಾನ್ಯ ಸೇವಾ ಕೇಂದ್ರಗಳಿಗೆ ಕಾರ್ಡ್‌ ವಿತರಿಸುವ ಜವಾಬ್ದಾರಿ ನೀಡಲಾಗಿತ್ತು. ಜನರಿಂದ ಹಣ ವಸೂಲಿ ಆರೋಪ ಕೇಳಿ ಬಂದ ಮೇಲೆ ಪ್ರಸ್ತುತ 106 ಸೇವಾ ಕೇಂದ್ರಗಳು ಕಾರ್ಡ್‌ ವಿತರಿಸುವ ಕೆಲಸ ಮಾಡುತ್ತಿವೆ. ಈಗ ಸೇವೆಯನ್ನು ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಿಗೆ ವಿಸ್ತರಿಸಲಾಗಿದೆ.

270 ಗ್ರಾಪಂ: ಜಿಲ್ಲೆಯಲ್ಲಿ 270 ಗ್ರಾಪಂಗಳಿದ್ದು ಎಲ್ಲ ಕಡೆಯೂ ವಿವಿಧ ಸೇವೆಗಳನ್ನು ಒದಗಿಸುವ ಬಾಪೂಜಿ ಸೇವಾ ಕೇಂದ್ರವಿದೆ. 100 ಸೇವೆಗಳನ್ನು ಒದಗಿಸುವ ಜತೆಗೆ ಆಯುಷ್ಮಾನ್‌ ಭಾರತ್‌ ಕಾರ್ಡ್‌ಗಳನ್ನು ಸಹ ವಿತರಣೆ ಮಾಡಲಿವೆ. ಈ ಬಗ್ಗೆ ಸರ್ಕಾರ ನಿರ್ದೇಶನ ನೀಡಿದ್ದು 10 ರೂ. ಪಡೆದು ಎ-4 ಹಾಳೆಯಲ್ಲಿ ಕಾರ್ಡ್‌ ವಿವರ ಮುದ್ರಿಸಿಕೊಡಲು ಸೂಚಿಸಿದೆ. ಈ ಹಣವನ್ನು ಬಾಪೂಜಿ ಸೇವಾ ಕೇಂದ್ರದ ಪ್ರತ್ಯೇಕ ಖಾತೆಗೆ ಜಮಾ ಮಾಡಿ ಆ ಹಣವನ್ನು ನಿಯಮಾನುಸಾರ ಬಳಕೆ ಮಾಡುವಂತೆ ಸೂಚಿಸಲಾಗಿದೆ.

ಈವರೆಗೆ ಸುಮಾರು 3 ಲಕ್ಷ ಜನರಿಗೆ ಆಯುಷ್ಮಾನ್‌ ಕಾರ್ಡ್‌ ವಿತರಿಸಲಾಗಿದೆ. 106 ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡ್‌
ವಿತರಿಸಲಾಗುತ್ತಿದೆ. ಕಾಗದದ ಪ್ರಿಂಟ್‌ಗೆ 10 ರೂ., ಕಾರ್ಡ್‌ಗೆ 35 ರೂ. ನಿಗದಿಪಡಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಈಗಾಗಲೇ ಪರಿಣತಿ ಹೊಂದಿರುವುದರಿಂದ ಕಾರ್ಡ್‌ ವಿತರಣೆಗೆ ತೊಂದರೆ ಇಲ್ಲ. ಇನ್ನೆರಡು ತಿಂಗಳಲ್ಲಿ ಬಾಕಿ 10 ಲಕ್ಷ ಜನರಿಗೆ ಕಾರ್ಡ್‌ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು.
ಡಾ| ರಾಜೇಶ್‌ ಸುರಗಿಹಳ್ಳಿ,
ಡಿಎಚ್‌ಒ

ಆಸ್ಪತ್ರೆ ಅಭಿವೃದ್ಧಿಗೆ ಅನುಕೂಲ
ಆಯುಷ್ಮಾನ್‌ನಿಂದ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ವೈದ್ಯಕೀಯ ವೆಚ್ಚದ ಶೇ.70ರಷ್ಟನ್ನು ಆಸ್ಪತ್ರೆ ಅಭಿವೃದ್ಧಿಗೆ ಬಳಸಲು ಅವಕಾಶವಿದೆ. ಆಸ್ಪತ್ರೆಗಳಿಗೆ ಅಗತ್ಯವಿರುವ ಉಪಕರಣಗಳನ್ನು ಈ ಹಣದಲ್ಲಿ ಕೊಂಡುಕೊಂಡರೆ ಸೇವೆ ಗುಣಮಟ್ಟ ಇನ್ನಷ್ಟು ಹೆಚ್ಚಲಿದೆ. ವೈದ್ಯರು ತಮ್ಮ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೋ ಇಲ್ಲವೋ ಎಂಬುದರ ಮಾನಿಟರಿಂಗ್‌ ಮಾಡಲು ಸಹ ಇದರಿಂದ ಅನುಕೂಲವಾಗುತ್ತದೆ. ಒಂದು ಆಪರೇಷನ್‌ನ ಶೇ.30ರಷ್ಟು ವೆಚ್ಚವು ವೈದ್ಯರಿಗೆ ಸಿಗುವುದರಿಂದ ಪ್ರೈವೇಟ್‌ ಪ್ರಾಕ್ಟಿಸ್‌ ಅವಶ್ಯಕತೆಯೂ ಇರುವುದಿಲ್ಲ ಎನ್ನುತ್ತಾರೆ ಶಿವಮೊಗ್ಗ ಡಿಎಚ್‌ಒ ರಾಜೇಶ್‌ ಸುರಗಿಹಳ್ಳಿ.

20 ಕೋಟಿ ರೂ. ಸದ್ಬಳಕೆ
ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಯಾದಾಗಿನಿಂದ ಶಿವಮೊಗ್ಗ ಜಿಲ್ಲೆಯಲ್ಲಿ 7300ಕ್ಕೂ ಹೆಚ್ಚು ಫಲಾನುಭವಿಗಳು 20 ಕೋಟಿ ರೂ. ಅಧಿಕ ಪ್ರಯೋಜನ ಪಡೆದಿದ್ದಾರೆ. ಇನ್ನೂ 1700
ಅರ್ಜಿಗಳು ಬಾಕಿ ಇದ್ದು ಮೂರ್‍ನಾಲ್ಕು ಕೋಟಿ ಹಣ ಬರುವ ನಿರೀಕ್ಷೆ ಇದೆ. 20 ಕೋಟಿಯಲ್ಲಿ ಖಾಸಗಿ ಆಸ್ಪತ್ರೆಗಳು 17 ಕೋಟಿ ಹಾಗೂ ಸರ್ಕಾರಿ ಆಸ್ಪತ್ರೆ 3 ಕೋಟಿ ವೆಚ್ಚದ ವೈದ್ಯಕೀಯ ಸೇವೆ ನೀಡಿವೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.