ಭದ್ರಾ ನಾಲೆಯಿಂದ ನೀರು ಬಿಡಲು ಒತ್ತಾಯ

ನೀರು ಬಿಡದಿದ್ದರೆ ರೈತರ ಬದುಕು ಮೂರಾಬಟ್ಟೆ: ರೈತಸಂಘ ಆತಂಕ

Team Udayavani, May 5, 2019, 1:25 PM IST

5-MAY-24

ಶಿವಮೊಗ್ಗ: ಮೇ ತಿಂಗಳ ಅಂತ್ಯದವರೆಗೆ ನೀರು ಬಿಡಲು ಒತ್ತಾಯಿಸಿ ರೈತ ಸಂಘದ ಮುಖಂಡರು ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗ: ಭದ್ರಾ ಅಣೆಕಟ್ಟಿನಿಂದ ಬಲ ಮತ್ತು ಎಡದಂಡೆ ನಾಲೆಗಳಿಗೆ ಮೇ ತಿಂಗಳ ಅಂತ್ಯದವರೆಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಮಲವಗೊಪ್ಪದ ಕಾಡಾ ಕಚೇರಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಬೇಸಿಗೆ ಹಂಗಾಮಿನಲ್ಲಿ ರೈತರು ಭತ್ತ ಬೆಳೆಯುವ ಸಲುವಾಗಿ ಭದ್ರಾ ಅಣೆಕಟ್ಟೆನಿಂದ ನೀರು ಹರಿಸಲಾಗಿದೆ. ಇದೇ ನೀರು ನೆಚ್ಚಿ ಕೊಂಡ ಅಚ್ಚುಕಟ್ಟ ಪ್ರದೇಶದ ರೈತರು ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆದಿದ್ದಾರೆ. ರೈತರು ಬೆಳೆದ ಭತ್ತದ ಬೆಳೆ ತೆನೆಯೊಡೆದು ಹೂ ಕಟ್ಟುವ ಸಮಯವಾಗಿದೆ. ಆದರೆ ಈ ಹಿಂದೆಯೇ ಸರ್ಕಾರ ತೀರ್ಮಾನಿಸಿದಂತೆ ಮೇ ತಿಂಗಳ 8 ರಂದು ನಾಲೆಗಳಿಗೆ ನೀರು ಹರಿಸುವುದನ್ನು ನಿಲ್ಲಿಸುವುದಾಗಿ ಪ್ರಕಟಿಸಲಾಗಿದೆ ಎಂದರು.

ರೈತರು ಬೆಳೆದಿರುವ ಭತ್ತದ ಬೆಳೆ ಇನ್ನು ಕೂಡ ಕಟಾವಿನ ಹಂತಕ್ಕೆ ಬಂದಿಲ್ಲ. ಕನಿಷ್ಠ ಇನ್ನು 20 ದಿನಗಳ ಕಾಲ ಭತ್ತದ ಬೆಳೆಗಳಿಗೆ ನೀರುಣಿಸಲೇಬೇಕಾಗಿದೆ. ಈಗಾಗಲೇ ಪ್ರಕಟಿಸಿರುವಂತೆ ಮೇ 8 ರಂದು ನೀರು ನಿಲುಗಡೆ ಮಾಡಿದಲ್ಲಿ ರೈತರು ಬೆಳೆದ ಭತ್ತದ ಬೆಳೆ ಸಂಪೂರ್ಣ ನಾಶವಾಗುತ್ತದೆ. ಇದನ್ನೇ ನಂಬಿಕೊಂಡ ರೈತರ ಬದುಕು ಮೂರಾಬಟ್ಟೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಅಚ್ಚುಕಟ್ಟು ವ್ಯಾಪ್ತಿಯ ರೈತರು ಈಗಾಗಲೇ ಸಾಲ ಮಾಡಿ ಪ್ರತಿ ಎಕರೆ ಭತ್ತ ಬೆಳೆಯಲು ಸುಮಾರು 25 ಸಾವಿರ ರೂ. ಬಂಡವಾಳ ಹಾಕಿದ್ದಾರೆ. ಈ ಬಂಡವಾಳ ಕೂಡ ಸಾಲದ ರೂಪದಲ್ಲಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಭತ್ತದ ಬೆಳೆ ನಾಶವಾಗುವುದಲ್ಲದೆ ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗಲಿದೆ. ರೈತರು ಬಹು ದೊಡ್ಡ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಲಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ಕೂಡಲೇ ಗಮನ ಹರಿಸಿ ಮೇ ತಿಂಗಳ ಅಂತ್ಯದವರೆಗೆ ಭದ್ರಾ ಎಡದಂಡೆ ನಾಲೆಗಳಲ್ಲಿ ನೀರು ಹರಿಸುವ ಮೂಲಕ ರೈತರು ಬೆಳೆದ ಬೆಳೆ ನಷ್ಟವಾಗದಂತೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೇ ತಿಂಗಳ ಅಂತ್ಯದವರೆಗೆ ಭದ್ರಾ ಅಣೆಕಟ್ಟಿನಿಂದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ವರಿಷ್ಠ ಕೆ.ಟಿ. ಗಂಗಾಧರ್‌, ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್‌ ಘೋರ್ಪಡೆ, ಡಿ.ವಿ. ವೀರೇಶ್‌, ರಂಗೋಜಿರಾವ್‌, ಪಾಂಡುರಂಗಪ್ಪ, ರಾಮಚಂದ್ರರಾವ್‌, ಕೆ.ಸಿ. ಗಂಗಾಧರ್‌, ಹಿರಿಯಣ್ಣಯ್ಯ ಮತ್ತಿತರರು ಇದ್ದರು.

ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಈಗಾಗಲೇ 12ರವರೆಗೂ ನೀರು ಬಿಡಲು ತೀರ್ಮಾನಿಸಲಾಗಿತ್ತು. ಅದನ್ನು 15ರವರೆಗೂ ವಿಸ್ತರಿಸಲಾಗುವುದು. ರೈತರು 25ರವರೆಗೂ ನೀರು ಬಿಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಅದನ್ನು ಸರಕಾರದ ಗಮನಕ್ಕೆ ತರಲಾಗುವುದು. ಸರಕಾರದ ತೀರ್ಮಾನದಂತೆ ಮುಂದುವರಿಯಲಾಗುವುದು.
ರವಿಚಂದ್ರ, ಎಇ, ಭದ್ರಾ ಅಣೆಕಟ್ಟು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.