ವಿವಿಸಾಗರಕ್ಕೆ ನೀರು ಹರಿಸಲು ಕ್ರಮ ಕೈಗೊಳ್ಳಿ

ಕೆರೆಗಳಿಗೆ ನೀರು ತುಂಬಿಸುವ ಕೆಲಸ ತ್ವರಿತವಾಗಲಿ •ಕಾಲುವೆ ಕಾಮಗಾರಿಗೆ ಭೂಮಿ ಬಿಡಲು ಸಲಹೆ

Team Udayavani, Jun 14, 2019, 12:14 PM IST

14-June-18

ಶಿವಮೊಗ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಯನ್ನು ಸಂಸದ ಎ. ನಾರಾಯಣ ಸ್ವಾಮಿ ಪರಿಶೀಲಿಸಿದರು.

ಶಿವಮೊಗ್ಗ: ಭದ್ರಾ ಮೇಲ್ದಂಡೆ ಮೂಲಕ ಈ ಬಾರಿ ವಿವಿಸಾಗರಕ್ಕೆ ನೀರು ಹರಿಯಲು ಸೂಕ್ತ ಕ್ರಮ ಕೈಗೊಳ್ಳಿ. ಇದಕ್ಕೆ ಬೇಕಾದ ಸಹಕಾರ ಕೊಡಲು ನಾನು ಸಿದ್ಧ ಎಂದು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಎಂಜಿನಿಯರಿಂಗ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಬಿಆರ್‌ ಪ್ರಾಜೆಕ್ಟ್‌ನಲ್ಲಿರುವ ತುಂಗಾ ಮೇಲ್ದಂಡೆ ಯೋಜನೆ ಕಚೇರಿಯಲ್ಲಿ ಗುರುವಾರ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಚಿತ್ರದುರ್ಗ ಕಾಲುವೆಗೆ ನೀರು ಹರಿಯಲು ಇನ್ನೂ ಎಷ್ಟು ವರ್ಷ ಬೇಕು ಎಂಬ ಪ್ರಶ್ನೆಗೆ ಮಾಹಿತಿ ಪಡೆದ ಅವರು, ಕೊನೆ ಪಕ್ಷ ವಿವಿ ಸಾಗರಕ್ಕಾದರೂ ನೀರು ಹರಿಯಬೇಕು. ಅದಕ್ಕೆ ಬೇಕಾದ ಕ್ರಮ ಕೈಗೊಳ್ಳಿ ಎಂದರು. ಅಜ್ಜಂಪುರ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ ಕೆಲಸವಿದ್ದು ಇದನ್ನು ಪೂರ್ಣಗೊಳಿಸಲು ರೈಲ್ವೆ ಇಲಾಖೆ ಅನುಮತಿ ಬೇಕು. ಮೇ ತಿಂಗಳೊಳಗೆ ಮಾಡುವುದಾಗಿ ತಿಳಿಸಿದ್ದರೂ ಆದರೂ ಇನ್ನೂ ಆಗಿಲ್ಲ. ಇದು ಪೂರ್ಣಗೊಂಡರೆ ನೀರು ಮುಂದೆ ಹರಿಯಲಿದೆ ಎಂದು ಎಂಜಿನಿಯರ್‌ಗಳು ಮಾಹಿತಿ ನೀಡಿದರು. ಪ್ರತಿ 1 ಮೀಟರ್‌ ಡೆಕ್‌ ನಿರ್ಮಾಣ ಮಾಡಿದರೂ ಕನಿಷ್ಠ 20 ದಿನ ಬೇಕು. ಮಳೆ ಶುರುವಾದರೆ ಯಾವ ಕೆಲಸವೂ ಆಗುವುದಿಲ್ಲ. ತಗಡಿನ ಶೆಡ್‌ ಹಾಕಿಕೊಂಡಾದರೂ ಕೆಲಸ ಮಾಡಿ. ಅದಕ್ಕೆ ಬೇಕಾದ ಹಣವನ್ನು ವೈಯಕ್ತಿಕವಾಗಿ ಕೊಡುವೆ ಎಂದರು. ರೈಲ್ವೆ ಇಲಾಖೆ ಅಧಿಕಾರಿಗಳು ಚಿತ್ರದುರ್ಗದಲ್ಲೇ ಇದ್ದಾರೆ. ಅಲ್ಲಿಯೇ ಅವರ ಬಳಿ ಮಾತನಾಡಬಹುದು ಎಂದು ಎಂಜಿನಿಯರ್‌ಗಳು ಸಲಹೆ ನೀಡಿದರು.

ಈ ಬಾರಿಯೂ ಡೌಟ್
ಸಭೆ ಆರಂಭದಿಂದಲೂ ಮುಖ್ಯ ವಿಷಯಕ್ಕೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ವಿವಿ ಸಾಗರಕ್ಕೆ ನೀರು ಹರಿಯಲು ಏನೇನು ತೊಡಕುಗಳಿವೆ ತಿಳಿಸಿ ಎಂದರು. ಅಬ್ಬಿನಹೊಳೆ ಬಳಿ ಕಾಲುವೆ ಕಾಮಗಾರಿ ಬಾಕಿ ಇದ್ದು ಇಲ್ಲಿ ಭೂಮಿ ಬಿಟ್ಟುಕೊಡಲು ಅಲ್ಲಿನ ರೈತರು ಒಪ್ಪುತ್ತಿಲ್ಲ. 22 ಜನರಿಂದ 44 ಎಕರೆ ಬೇಕಾಗಿದೆ. ನಾವು ಎಕರೆಗೆ 20 ಲಕ್ಷ ಕೊಡಲು ಸಿದ್ಧರಿದ್ದೇವೆ. ಆದರೆ ಅವರು 80 ಲಕ್ಷ ಕೇಳುತ್ತಿದ್ದಾರೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಿದರೆ ವಿವಿ ಸಾಗರಕ್ಕೆ ನೀರು ಹರಿಯುವ ಕಾಲುವೆ ಪೂರ್ಣಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ನಾರಾಯಣಸ್ವಾಮಿ, ಮುಂದಿನ ಶನಿವಾರ ಸಭೆ ಫಿಕ್ಸ್‌ ಮಾಡುವಂತೆ ತಿಳಿಸಿದರು. ರೈತರು ಪೂರ್ಣ ಭೂಮಿ ಬಿಟ್ಟುಕೊಡದಿದ್ದರೂ 100 ಮೀಟರ್‌ ಕಾಲುವೆ ಮಾಡಿದರೆ ಸಾಕು. ಹಳ್ಳದ ಮೂಲಕ ವಿವಿ ಸಾಗರಕ್ಕೆ ನೀರು ಹರಿಸಬಹುದು. ಈ 100 ಮೀಟರ್‌ ವ್ಯಾಪ್ತಿಯಲ್ಲಿರುವ ಭೂಮಿ ಮಾಲೀಕನೇ ಹೋರಾಟದ ಮುಂದಾಳತ್ವ ವಹಿಸಿಕೊಂಡಿದ್ದಾನೆ ಎಂದು ಸಭೆಯ ಗಮನಕ್ಕೆ ತಂದರು. ಸರಕಾರವೇ ಅಲ್ಲಿ ಕೆಲಸ ಮಾಡುತ್ತಿದೆ. ಆದರೂ ಸಮಸ್ಯೆ ಬಗೆಹರಿಯಲಿಲ್ಲ ಎಂದರೆ ಹೇಗೆ? ಜೂ. 18ರಂದು ಜಿಲ್ಲಾಧಿಕಾರಿ, ಎಸ್‌ಪಿ, ಇತರೆ ಅಧಿಕಾರಿಗಳ ಸಭೆ ಕರೆಯಿರಿ. ಚರ್ಚೆ ಮಾಡೋಣ ಎಂದರು.

ಚಿತ್ರದುರ್ಗಕ್ಕೆ 134 ಕಿಮೀ ಕಾಲುವೆ ಹಾಗೂ ಹನಿ ನೀರಾವರಿಗೆ 1592 ಕೋಟಿ ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಒಟ್ಟು 12 ಪ್ಯಾಕೇಜ್‌ ಮಾಡಲಾಗಿದೆ. 367 ಕೆರೆ ಭರ್ತಿ ಮಾಡುವ ಜತೆಗೆ ಹನಿ ನೀರಾವರಿ ಕೈಗೊಳ್ಳಲಾಗುವುದು. ಇವೆಲ್ಲ ಯೋಜನೆಗಳು ಇನ್ನಷ್ಟೇ ಚಾಲನೆಗೊಳ್ಳಬೇಕಿದೆ ಎಂದರು.

ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಎಂಜಿನಿಯರ್‌ ಶಿವಕುಮಾರ್‌, ಶಿವಮೊಗ್ಗ ವೃತ್ತದ ಅಧಿಧೀಕ್ಷಕ ಎಂಜಿನಿಯರ್‌ ವೇಣುಗೋಪಾಲ್, ಚಿತ್ರದುರ್ಗ ವೃತ್ತದ ಅಧಿಧೀಕ್ಷಕ ಎಂಜಿನಿಯರ್‌ ಎಸ್‌.ಎಸ್‌. ಪಾಳೇಗಾರ್‌ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.