ಕಾಲುಸಂಕ ಸಮಸ್ಯೆಗೆ ಸರ್ಕಾರದಿಂದ ಮುಕ್ತಿ


Team Udayavani, Jun 28, 2019, 11:13 AM IST

28-June-9

ಶಿವಮೊಗ್ಗ: ಮಲೆನಾಡಿನ ಕಾಲುಸಂಕಗಳ ಸಮಸ್ಯೆಗೆ ಮುಕ್ತಿ ಹಾಡಲು ಸರಕಾರ ಸಿದ್ಧವಾಗಿದ್ದು, ಕೇಳಿದಷ್ಟು ಅನುದಾನ ನೀಡಲು ಮುಂದಾಗಿದೆ. ಮೊದಲ ಹಂತದಲ್ಲಿ 119 ಕಾಲುಸಂಕ (ಮಿನಿಸೇತುವೆ) ನಿರ್ಮಾಣವಾಗಿದ್ದು ಮಲೆನಾಡಿಗರು ನಿಟ್ಟುಸಿರು ಬಿಡುವಂತಾಗಿದೆ.

2018ರ ಮುಂಗಾರಿನಲ್ಲಿ ವಿಪರೀತ ಮಳೆ ಸುರಿದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದವು. ತೀರ್ಥಹಳ್ಳಿ ತಾಲೂಕು ಹೊನ್ನೆತಾಳು ಗ್ರಾಪಂ ವ್ಯಾಪ್ತಿಯ ದೊಡ್ಲಿಮನೆಯ ಆಶಿಕಾ ಎಂಬ ಯುವತಿ ಶಾಲೆಗೆ ಹೋಗುವಾಗ ಶಿಥಿಲಗೊಂಡ ಕಾಲುಸಂಕದಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಳು. ಈ ಘಟನೆ ನಂತರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ‘ಶಾಲಾ ಸಂಪರ್ಕ ಸೇತು’ ಎಂಬ ಕಾರ್ಯಕ್ರಮದಡಿ ಮಲೆನಾಡು ಭಾಗದಲ್ಲಿ ಕಾಲುಸಂಕ ನಿರ್ಮಾಣಕ್ಕೆ ಸೂಚನೆ ನೀಡಿದ್ದರು. ಅದರಂತೆ ಜಿಲ್ಲೆಯಲ್ಲಿ 119 ಕಾಲುಸಂಕ ನಿರ್ಮಾಣಗೊಂಡಿವೆ.

ನಿರ್ಮಾಣ ಹೇಗೆ?: ಸ್ಥಳೀಯ ಗ್ರಾಮ ಪಂಚಾಯತಿ, ಲೋಕೋಪಯೋಗಿ ಇಲಾಖೆ, ಶಾಲೆಗಳ ಮುಖ್ಯ ಶಿಕ್ಷಕರ ಸಲಹೆ ಮೇರೆಗೆ ಸ್ಥಳವನ್ನು ಗುರುತಿಸಿ, ಸ್ಥಳದ ಬಗ್ಗೆ ಏನಾದರೂ ತಕರಾರುಗಳಿದ್ದರೆ ಮನವೊಲಿಸಿ ಸೇತುವೆ ನಿರ್ಮಾಣ ಮಾಡಲಾಗಿದೆ. ಶಾಲೆಗಳನ್ನು ಸಂಪರ್ಕಿಸುವ ಕಡೆಯೇ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಸ್ಥಳದ ಲಭ್ಯತೆ ಆಧಾರದ ಮೇಲೆ 1ರಿಂದ 3 ಮೀಟರ್‌ ಅಗಲದ ಸೇತುವೆಗಳ ನಿರ್ಮಾಣವಾಗಿವೆ. ಸೈಕಲ್, ಬೈಕ್‌ಗಳನ್ನು ಇಲ್ಲಿ ಚಲಾಯಿಸಿಕೊಂಡು ಹೋಗಬಹುದು. ಕೆಲವು ಸೇತುವೆಗಳಿಗೆ ಮೆಸ್‌ ಅಳವಡಿಸಲಾಗಿದೆ. ಕೆಲವು ಪೂರ್ಣ ಕಾಂಕ್ರೀಟ್ ಬಳಸಲಾಗಿದೆ. ಅವುಗಳನ್ನು ಸ್ಥಳೀಯ ಗ್ರಾಪಂಗಳಿಗೆ ಹಸ್ತಾಂತರಿಸಲಾಗುವುದು ಎನ್ನುತ್ತಾರೆ ಎಂಜಿನಿಯರ್‌ಗಳು.

ಕಾಲುಸಂಕಗಳಿಗೆ ಪರ್ಯಾಯ: ಮಲೆನಾಡು ಪ್ರದೇಶಗಳಲ್ಲಿ ತೋಡು, ಹಳ್ಳ-ಕೊಳ್ಳಗಳು ಪ್ರವಾಹದಿಂದ ಮಳೆಗಾಲದಲ್ಲಿ ಹಾಗೂ ನವೆಂಬರ್‌, ಡಿಸೆಂಬರ್‌ವರೆಗೂ ತುಂಬಿ ಹರಿಯುತ್ತವೆ. ನೀರಾವರಿ ಯೋಜನೆ ಹಾಗೂ ಅಣೆಕಟ್ಟುಗಳ ನಿರ್ಮಾಣದಿಂದ ಉಂಟಾಗಿರುವ ಹಿನ್ನೀರಿನಿಂದ ಆವೃತವಾದ ಪ್ರದೇಶದಲ್ಲಿ ಈ ಕಾಲುಸಂಕಗಳೇ ಸಂಪರ್ಕ ಸೇತುವೆಗಳಾಗಿವೆ. ಆದರೆ ಇವು ಅಷ್ಟೊಂದು ಸುರಕ್ಷಿತವಾಗಿಲ್ಲ. ಬಹುತೇಕ ಕಡೆ ಸ್ಥಳೀಯವಾಗಿ ಅಡಕೆ ಮರ, ಬಿದಿರು, ಹಗ್ಗದಿಂದ ಹೆಣೆದ ಸೇತುವೆ, ಮರದ ದಿಮ್ಮಿಗಳನ್ನು ಬಳಸಿ ನಿರ್ಮಾಣ ಮಾಡಿರುತ್ತಾರೆ. ಈ ಹರಕು, ಮುರುಕು ಸೇತುವೆಗಳು ಜನರ ಪ್ರಾಣ ಹಿಂಡುತ್ತವೆ.

ಅನುದಾನಕ್ಕಿಲ್ಲ ಬರ: ಮೊದಲ ಹಂತದಲ್ಲಿ ತೀರ್ಥಹಳ್ಳಿ ಹೊಸನಗರ ಭಾಗದಲ್ಲಿ 119 ಕಾಲುಸಂಕಗಳನ್ನು 26.41 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ 300ಕ್ಕೂ ಕಾಲುಸಂಕಗಳು ಜೀರ್ಣೋದ್ಧಾರಕ್ಕೆ ಕಾದಿವೆ. ಇವುಗಳನ್ನು ಎರಡನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕೋಪಯೋಗಿ ಎಂಜಿನಿಯರ್‌ಗಳು ತಿಳಿಸಿದ್ದಾರೆ. ಅನುದಾನಕ್ಕೂ ಕೊರತೆ ಇಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.

ತೀರ್ಥಹಳ್ಳಿಯ ಘಟನೆ ನಂತರ ಸಿಎಂ ಕುಮಾರಸ್ವಾಮಿ ಹಾಗೂ ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ ಅವರು ವಿಶೇಷ ಆಸಕ್ತಿ ವಹಿಸಿ ಕಾಲುಸಂಕ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 119 ಮಿನಿಸೇತುವೆ ಮಾಡಲಾಗಿದೆ. ಎರಡನೇ ಹಂತದಲ್ಲಿ ಇನ್ನಷ್ಟು ಸೇತುವೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದ್ಯಾವುದಕ್ಕೂ ಹಣದ ಕೊರತೆ ಇಲ್ಲ.
•ರಮೇಶ್‌, ಇಇ,
ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.