- Monday 16 Dec 2019
ಸ್ಥಳೀಯ ಸಂಸ್ಥೆ ಚುನಾವಣೆಗೆ ಅಣಕು ಮತದಾನ ಕಡ್ಡಾಯ
ಕರ್ತವ್ಯ ಲೋಪವಾದರೆ ಶಿಕ್ಷೆ ಖಚಿತ: ಜಿಲ್ಲಾಧಿಕಾರಿ ದಯಾನಂದ್ ಎಚ್ಚರಿಕೆ
Team Udayavani, May 22, 2019, 4:34 PM IST
ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಿಯೋಜಿತ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಡಿಸಿ ದಯಾನಂದ್ ಮಾತನಾಡಿದರು.
ಶಿವಮೊಗ್ಗ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿವಿ ಪ್ಯಾಟ್ ಬಳಸುತ್ತಿಲ್ಲ. ಆದರೆ ಅಣಕು ಮತದಾನ ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಸೂಚನೆ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಿಯೋಜಿತ ಸಿಬ್ಬಂದಿಗಳಿಗೆ ಮಂಗಳವಾರ ನಗರದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಈ ಸೂಚನೆ ನೀಡಿದರು.
ಕಳೆದ ಆರು ತಿಂಗಳಲ್ಲಿ ಇದು ಮೂರನೇ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧಗೊಂಡಿದೆ. ಬಹುತೇಕ ಅದೇ ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸಾಕಷ್ಟು ತರಬೇತಿ ನೀಡಿದ ಬಳಿಕವೂ ಕೆಲವರು ತಪ್ಪುಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿವಿ ಪ್ಯಾಟ್ನಲ್ಲಿ ಮೊದಲು ಅಣಕು ಮತದಾನ ನಡೆದ ಬಳಿಕ ಅವುಗಳನ್ನು ಅಳಿಸಿ ನಂತರ ಮತದಾನ ಪ್ರಕ್ರಿಯೆ ಆರಂಭಿಸಬೇಕು ಎಂದು ತರಬೇತಿ ವೇಳೆ ಸೂಚಿಸಲಾಗಿತ್ತು. ಆದರೂ ಮೂರು ಮತದಾನ ಕೇಂದ್ರಗಳಲ್ಲಿ ವಿವಿ ಪ್ಯಾಟ್ನಲ್ಲಿನ ಅಣಕು ಮತಗಳನ್ನು ಅಳಿಸದೆಯೇ ಮತದಾನ ಪ್ರಕ್ರಿಯೆ ನಡೆಸಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ ಎರಡು ಹಾಗೂ ಶಿಕಾರಿಪುರ ತಾಲೂಕಿನ ಒಂದು ಮತದಾನ ಕೇಂದ್ರದಲ್ಲಿ ಈ ರೀತಿ ಆಗಿದೆ. ಇಂತಹ ಪ್ರಕರಣಗಳು ನಡೆದಾಗ ಚುನಾವಣಾ ಆಯೋಗ ಶಿಕ್ಷೆಗೆ ಗುರಿಪಡಿಸುವುದು ಖಚಿತ. ಹಾಗಾಗಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.
ಹೆಸರು ಬೇರೆ ವಾರ್ಡ್ಗೆ ಹೋಗಿರಬಹುದು: ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗೂ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿನ ಮತದಾರರ ಪಟ್ಟಿಗೂ ಅಲ್ಪ ವ್ಯತ್ಯಾಸ ಆಗುತ್ತದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ವಾರ್ಡ್ವಾರು ಜನಸಂಖ್ಯೆ ಆಧರಿಸಿ ಭೌತಿಕ ವಿಂಗಡಣೆ ಮಾಡಿದಾಗ ಮತದಾರರ ಹೆಸರು ವಾರ್ಡ್ವಾರು ಬದಲಾಗಿರುವ ಸಾಧ್ಯತೆ ಇರುತ್ತದೆ. ಮತದಾರರು ಈ ಬಗ್ಗೆ ಸರಿಯಾದ ಮಾಹಿತಿಯೊಂದಿಗೆ ಮತಗಟ್ಟೆಗೆ ಆಗಮಿಸಲಿ ಎಂದು ಮನವಿ ಮಾಡಿದರು.
ಈ ವಿಭಾಗದಿಂದ ಇನ್ನಷ್ಟು
-
ನಾಗರಾಜ ತೇಲ್ಕರ್ ದೇವದುರ್ಗ: ಪಟ್ಟಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರದ ಕಟ್ಟಡಕ್ಕಾಗಿ 20 ಎಕರೆ ಭೂಮಿ ಕಾಯ್ದಿರಿಸಿದ್ದರೂ, ಕಟ್ಟಡಕ್ಕೆ...
-
ಹೈದರಾಬಾದ್ ಮತ್ತು ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ದೇಶವನ್ನು ತಲ್ಲಣಗೊಳಿಸಿವೆ. ಮಹಾನಗರಗಳಲ್ಲಿ...
-
ಬಾಗಲಕೋಟೆ: ದೇಶದ ಅತ್ಯುನ್ನತ ಭದ್ರತಾ ಪಡೆ, ಗಣ್ಯಾತಿಗಣ್ಯರಿಗೆ ಭದ್ರತೆ ಒದಗಿಸುವ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ಗೆ (ರಾಷ್ಟ್ರೀಯ ಭದ್ರತಾ ಪಡೆ) ಮುಧೋಳ ನಾಯಿ...
-
ಶಿವಯ್ಯ ಮಠಪತಿ ಚಡಚಣ: ಕರ್ನಾಟಕ-ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಟ್ಟಕಡೆಯ ಶಿರನಾಳ ಗ್ರಾಮದ ಬಡ ಜನರು ಸ್ವಂತ ಜಾಗವಿಲ್ಲದೇ ಸರಕಾರಿ ಗೋಮಾಳಿನ ಕತ್ತಲಿನಲ್ಲೇ...
-
ಬೀದರ: ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ರವಿವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ, ಸಿಬ್ಬಂದಿ...
ಹೊಸ ಸೇರ್ಪಡೆ
-
ನಾಗರಾಜ ತೇಲ್ಕರ್ ದೇವದುರ್ಗ: ಪಟ್ಟಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರದ ಕಟ್ಟಡಕ್ಕಾಗಿ 20 ಎಕರೆ ಭೂಮಿ ಕಾಯ್ದಿರಿಸಿದ್ದರೂ, ಕಟ್ಟಡಕ್ಕೆ...
-
ಹೈದರಾಬಾದ್ ಮತ್ತು ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ದೇಶವನ್ನು ತಲ್ಲಣಗೊಳಿಸಿವೆ. ಮಹಾನಗರಗಳಲ್ಲಿ...
-
ಬಾಗಲಕೋಟೆ: ದೇಶದ ಅತ್ಯುನ್ನತ ಭದ್ರತಾ ಪಡೆ, ಗಣ್ಯಾತಿಗಣ್ಯರಿಗೆ ಭದ್ರತೆ ಒದಗಿಸುವ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ಗೆ (ರಾಷ್ಟ್ರೀಯ ಭದ್ರತಾ ಪಡೆ) ಮುಧೋಳ ನಾಯಿ...
-
ಶಿವಯ್ಯ ಮಠಪತಿ ಚಡಚಣ: ಕರ್ನಾಟಕ-ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಟ್ಟಕಡೆಯ ಶಿರನಾಳ ಗ್ರಾಮದ ಬಡ ಜನರು ಸ್ವಂತ ಜಾಗವಿಲ್ಲದೇ ಸರಕಾರಿ ಗೋಮಾಳಿನ ಕತ್ತಲಿನಲ್ಲೇ...
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳು ಮತ್ತು ಪೊಲೀಸರ...