ನಾಟಕ ರಂಗಕ್ಕೆ ತಿರುವು ನೀಡಿದ್ದ ಕಾರ್ನಾಡರು

ಕಾರ್ನಾಡರು ನಾಟಕಗಳ ಮೂಲಕ ಸಮಾಜಕ್ಕೆ ಹೊಸ ವಿಚಾರಗಳನ್ನು ಪರಿಚಯಿಸಿದ್ದರು: ಪ್ರೊ| ನಟರಾಜ್‌

Team Udayavani, Jul 14, 2019, 4:58 PM IST

14-JULY-47

ಶಿವಮೊಗ್ಗ: ಕಾರ್ನಾಡರಿಗೆ ರಂಗನಮನ ಕಾರ್ಯಕ್ರಮದಲ್ಲಿ ಪ್ರೊ| ಎಂ.ಬಿ. ನಟರಾಜ್‌ ಮಾತನಾಡಿದರು.

ಶಿವಮೊಗ್ಗ: ಗಿರೀಶ ಕಾರ್ನಾಡ ನಾಟಕ ರಂಗಕ್ಕೆ, ಅಭಿನಯ ಕ್ಷೇತ್ರಕ್ಕೆ ಅಸಾಮಾನ್ಯ ತಿರುವು ನೀಡಿದಂತ ವ್ಯಕ್ತಿ ಎಂದು ಸಾಹಿತಿ ಪ್ರೊ| ಎಂ.ಬಿ.ನಟರಾಜ್‌ ಅಭಿಪ್ರಾಯಪಟ್ಟರು.

ನಗರದ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹೊಂಗಿರಣ ಶಿವಮೊಗ್ಗದ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಗಿರೀಶ ಕಾರ್ನಾಡರಿಗೆ ರಂಗನಮನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ರಂಗಭೂಮಿ ಜಡವಾಗಿದ್ದ ಕಾಲದಲ್ಲಿ ಗಿರೀಶ ಕಾರ್ನಾಡ ಅದಕ್ಕೆ ಹೊಸ ಆಯಾಮ ನೀಡಿದರು. ಇತಿಹಾಸದ ಕಲ್ಪನೆಯಲ್ಲಿ ಇಂದಿನ ಕಾಲದ ವಿಚಾರಗಳನ್ನು ಸಮ್ಮಿಲನ ಮಾಡಿ ನೋಡುವ ಮನಸ್ಥಿತಿಯೇ ಇಲ್ಲದ ಕಾಲದಲ್ಲಿ ಕಾರ್ನಾಡರ ಯಯಾತಿ, ತುಘಲಕ್‌, ಹಯವಧನ ಹೀಗೆ ಹಲವು ನಾಟಕಗಳು ಹೊಸ ವಿಚಾರಗಳನ್ನು ಪರಿಚಯಿಸಿದವು ಎಂದರು.

ಕಾರ್ನಾಡರಿಂದ ಕನ್ನಡ ನಾಟಕ ವಿಮರ್ಶೆಯೂ ಬೆಳೆಯಿತು. ನಾಟಕದ ಬಗ್ಗೆ, ಅಭಿನಯದ ಬಗ್ಗೆ, ನಿರ್ದೇಶಕನ ಪಾತ್ರ ಬಗ್ಗೆ ಹೆಚ್ಚೆಚ್ಚು ವಿಮರ್ಶೆಗಳು ಬರಲು ಪ್ರಾರಂಭಿಸಿದವು ಎಂದು ಹೇಳಿದರು.

ಮನುಷ್ಯನ ಇತಿ, ಮಿತಿ ಏನು ಎಂಬುದನ್ನು ಸಾಮಾಜಿಕ ನೆಲೆಗಟ್ಟಿನಲ್ಲಿ ನೋಡುವ ಪ್ರಯತ್ನವನ್ನು ಕಾರ್ನಾಡರ ನಾಟಕಗಳಲ್ಲಿ ನೋಡಬಹುದು. ಅವರ ನಾಟಕಗಳು ಓದುವುದಕ್ಕೂ ಸವಾಲು ಮತ್ತು ಅಭಿನಯಕ್ಕೂ ಸವಾಲಾಗಿವೆ. ಆದರೆ, ಅವರ ನಾಟಕಗಳು ನಮ್ಮಲ್ಲಿ ಮತ್ತೆ ಮತ್ತೆ ನಾಟಕಗಳನ್ನು ನೋಡುವ ಅಭಿರುಚಿಯನ್ನು ಬೆಳೆಸುತ್ತವೆ. ಅನಗತ್ಯ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಅಪರೂಪ ವ್ಯಕ್ತಿತ್ವದ ಕಾರ್ನಾಡರಿಗೆ ರಂಗನಮನ ಸಲ್ಲಿಸುತ್ತಿರುವುದು ಅತ್ಯಂತ ಅರ್ಥಪೂರ್ಣ ಎಂದರು. ರಂಗ ನಿರ್ದೇಶಕ ಕಾಂತೇಶ್‌ ಕದರಮಂಡಲಗಿ, ‘ಕನ್ನಡ ಸಾಹಿತ್ಯಲೋಕ ಹಾಗೂ ರಂಗಭೂಮಿ ಕ್ಷೇತ್ರವನ್ನು ಅತ್ಯಂತ ಶ್ರೀಮಂತಗೊಳಿಸಿದ ವ್ಯಕ್ತಿ ಕಾರ್ನಾಡರು’ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಬಿ. ಶಂಕರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಾವಿಮನೆ ನಾಗರಾಜ್‌ ಇದ್ದರು. ಹಸನ್‌ ಬೆಳ್ಳಿಗನೂಡು ನಿರೂಪಿಸಿದರು. ಈ ಸಂದರ್ಭದಲ್ಲಿ ಡಾ| ಸಾಸ್ವೆಹಳ್ಳಿ ಸತೀಶ್‌ ನಿರ್ದೇಶನದ ಗಿರೀಶ ಕಾರ್ನಾಡರ ‘ಹೂವು’ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.