ಜಿಲ್ಲಾದ್ಯಂತ ಗೋಪೂಜೆ ಸಂಭ್ರಮ

ಲಂಬಾಣಿ ಯುವತಿಯರಿಂದ ಮೇರಾ ಸಂಭ್ರಮ ಜಿಲ್ಲೆಯ ವಿವಿಧೆಡೆ ಸಡಗರದ ಬಲಿಪಾಡ್ಯಮಿ ಹಬ್ಬ

Team Udayavani, Oct 30, 2019, 2:44 PM IST

30-October-9

ಶಿವಮೊಗ್ಗ: ದೀಪಾವಳಿ ಕೊನೆ ದಿನವಾದ ಮಂಗಳವಾರ ಜಿಲ್ಲಾದ್ಯಂತ ದನಕರುಗಳಿಗೆ ಮೈ ತೊಳೆದು ಶೃಂಗಾರ ಮಾಡಿ ಪೂಜೆ ಸಲ್ಲಿಸಲಾಯಿತು. ವರ್ಷಪೂರ್ತಿ ಸೇವೆ ಮಾಡುವ ಎತ್ತುಗಳನ್ನು ವಿಶೇಷವಾಗಿ ಅಲಂಕರಿಸಿ ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಹಾಕಿಸಿ ಮನೆಗೆ ಕರೆದೊಯ್ಯಲಾಯಿತು.

ದನಕರು, ಹಸು, ಎತ್ತುಗಳ ಮೈಮೇಲೆ ವಿಧ- ವಿಧದ ರಂಗೋಲಿ ಬಿಡಿಸಿ, ಅದಕ್ಕೆ ಬಣ್ಣ ತುಂಬಲಾಗಿತ್ತು. ಬಲೂನ್‌, ವಿಶೇಷ ಹೊದಿಕೆ ಹಾಕಿ ಅಲಂಕರಿಸಲಾಗಿತ್ತು. ರೈತಾಪಿಗಳು ಶಕ್ತಿಯನುಸಾರ ಅಲಂಕಾರ ಮಾಡಿದ್ದು ಕಂಡುಬಂತು. ಶಿಕಾರಿಪುರ, ಸೊರಬ ಭಾಗದಲ್ಲಿ ಹೋರಿ ಬೆದರಿಸುವ ಹಬ್ಬ ವಿಶೇಷವಾಗಿದ್ದು ಬೆಳಗ್ಗೆಯಿಂದಲೇ ಅನೇಕ ಹಳ್ಳಿಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಕಳೆದ ಬಾರಿ ಹೋರಿ ಹಬ್ಬಕ್ಕೆ ಅನುಮತಿ ಸಿಕ್ಕಿರಲಿಲ್ಲ. ಕೆಲವು ಕಡೆ ಮೌಖೀಕ ಅನುಮತಿ ಮೇರೆಗೆ ಹಬ್ಬದ ನಡೆಸಲಾಗಿತ್ತು. ಈ ಬಾರಿ ಯಾವುದೇ ಅಡೆತಡೆಗಳು ಇಲ್ಲದ ಕಾರಣ ಹೋರಿ ಬೆದರಿಸುವ ಹಬ್ಬ ಜೋರಾಗಿ ನಡೆದಿದೆ.

ಲಂಬಾಣಿ ತಾಂಡಾದಲ್ಲಿ ರಂಗು: ಬುಡಕಟ್ಟು ಸಾಂಸ್ಕೃತಿಕ ಲಂಬಾಣಿ ತಾಂಡಾಗಳಲ್ಲಿಯೂ ದೀಪಾವಳಿಯನ್ನು ವಿಶೇಷವಾಗಿ ಆಚರಿಸಲಾಯಿತು. ಯುವತಿಯರು ಹೊಸ ಉಡುಗೆ ತೊಟ್ಟು ಗ್ರಾಮದ ಸರ್ದಾರ್‌ ಸೇವಾಲಾಲ್‌ ಮಂದಿರದಲ್ಲಿ ಸೇರಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಸುವಿಗೆ ದೀಪ ಬೆಳಗಿ ಪ್ರಾರ್ಥಿಸಿದರು. ಬಳಿಕ ಮನೆ- ಮನೆಗೂ ತೆರಳಿ (ಮೇರಾ) ದೀಪದ ಬೆಳಕು ಹಂಚಿ ದೀಪಾವಳಿಯ ಶುಭಾಶಯ ಕೋರಿದರು. ಬಳಿಕ ಊರಿನ ಕನ್ಯೆಯರೆಲ್ಲಾ ಒಟ್ಟಾಗಿ ತಂಗಟಿ ಹೂವು ತರಲೆಂದು ಕಾಡಿಗೆ ತೆರಳಲು ಅಣಿಯಾಗುತ್ತಾರೆ.

ತಲೆ ಮೇಲೆ ತಾಯಂದಿರು ಕಟ್ಟಿಕೊಟ್ಟ ಬುತ್ತಿ, ಬುತ್ತಿಗೆ ಸಹೋದರರು ಪ್ರೀತಿಯಿಂದ ಹಾರೈಸಿ ನೀಡಿದ ದಕ್ಷಿಣೆ ರೂಪದ ಹಣದ ಮೂಲಕ ಸಿಂಗರಿಸಲಾಗಿರುತ್ತದೆ. ಬುತ್ತಿಹೊತ್ತು ಸಾಗುವ ಯುವತಿಯರ ಸಾಲು ನೋಡುವುದೇ ಕಣ್ಣಿಗೆ ಹಬ್ಬ.

ಊರಿನ ಮಂದಿಯೆಲ್ಲಾ ಸೇರಿ ಭಾಜಾ ಭಜಂತ್ರಿಯೊಂದಿಗೆ ಗ್ರಾಮದ ಗಡಿವರೆಗೆ ಯುವತಿಯರೊಂದಿಗೆ ಮೆರವಣಿಗೆ ಹೊರಡುತ್ತಾರೆ. ಮಹಿಳೆಯರೂ ಸಹ ಯುವತಿಯರೊಂದಿಗೆ ಹಾಡಿ ಕುಣಿಯುತ್ತಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಹೆಜ್ಜೆ ಹಾಕುತ್ತಾರೆ. ಗ್ರಾಮದ ಗಡಿ ಬರುತ್ತಿದ್ದಂತೆ ಯುವತಿಯರು ಮಾತ್ರ ಕಾಡಿಗೆ ಕಳುಹಿಸಿ ಉಳಿದವರು ಗ್ರಾಮಕ್ಕೆ ಹಿಂದಿರುಗುತ್ತಾರೆ. ಎಲ್ಲ ಕಡೆ ಕಾಡು ಇಲ್ಲದ ಕಾರಣ ಊರಿನ ಹೊರಗೆ ಕಳುಹಿಸುತ್ತಾರೆ. ಕಾಡಿಗೆ ತೆರಳಿದ ಯುವತಿಯರು ದೇವರಿಗೆ ಪ್ರಿಯವಾದ ತಂಗಟಿ ಹೂವನ್ನು ಕೀಳುತ್ತಾರೆ.

ಪೋಷಕರು ನೀಡಿದ ಬುತ್ತಿ, ಸಹೋದರರು ನೀಡಿದ ಹಣದಲ್ಲಿ ಪಡೆದ ಸಿಹಿ ತಿನಿಸುಗಳನ್ನು ಹಂಚಿಕೊಂಡು ತಿನ್ನುತ್ತಾರೆ. ಯುವತಿಯರು ತಂಗಟಿ ಹೂವು ತಂದ ನಂತರವೇ ಮನೆಯಲ್ಲಿ ಪೂಜೆ, ಪುನಸ್ಕಾರ ಶುರುವಾಗುತ್ತದೆ. ಪಾಂಡವರು ಮುಡಿಗೇರಿಸಿಕೊಂಡಿದ್ದ ತಂಗಟಿ ಹೂವು ಮನೆಯಲ್ಲಿದ್ದರೆ ಶಾಂತಿ, ಸಂಪತ್ತು, ಸಮೃದ್ಧಿ ಮತ್ತು ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆ ಬುಡಕಟ್ಟು ಸಮುದಾಯದ ಜನರಲ್ಲಿದೆ.

ಮನೆಗಳಲ್ಲಿ ಎರಡು ಮಣ್ಣಿನ ಹಣತೆಗಳಲ್ಲಿ ದೀಪವನ್ನು ಹಚ್ಚಿಡಲಾಗುತ್ತದೆ. ಹಬ್ಬ ಮುಗಿಯುವವರೆಗೂ ಆ ಹಣತೆ ಆರದಂತೆ ನೋಡಿಕೊಳ್ಳುವುದು ಮಹಿಳೆಯರ ಜವಬ್ದಾರಿ ಆಗಿರುತ್ತದೆ. ಇಂತಹ ವಿಶಿಷ್ಟ ಆಚರಣೆಯನ್ನು ಜಿಲ್ಲೆಯ ಅನೇಕ ಕಡೆ ಆಚರಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.