ಬಿಸಿಲು ನಾಡಾದ ಮಲೆನಾಡು!

ಜಿಲ್ಲೆಯ ಸರಾಸರಿ ಉಷ್ಣಾಂಶ 38.7 ಡಿಗ್ರಿ•ತೇವಾಂಶ ಕೊರತೆ ಧಗೆ ಹೆಚ್ಚಳಕ್ಕೆ ಕಾರಣ

Team Udayavani, Apr 29, 2019, 4:55 PM IST

29-April-27

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಇಲ್ಲಿಯ ಬಿಸಿಲು ಬಯಲು ಸೀಮೆ ಬಳ್ಳಾರಿ ಬಿಸಿಲನ್ನೂ ಮೀರಿಸುವಂತಿದೆ. ಕಳೆದ ಒಂದು ತಿಂಗಳಿಂದ ಬಿಸಿಲಿನ ಝಳಕ್ಕೆ ಜನ ನಲುಗಿ ಹೋಗಿದ್ದಾರೆ. ಬೆಳಗ್ಗೆ 9 ಗಂಟೆ ಹೊತ್ತಿಗೆ ಆರಂಭವಾಗುವ ಬಿಸಿಲ ಝಳ ಸಂಜೆ 5 ಗಂಟೆಯಾದರೂ ಕಡಿಮೆಯಾಗುತ್ತಿಲ್ಲ. ರಾತ್ರಿ ಕೂಡ ಬಿಸಿ ಗಾಳಿಗೆ ಜನ ಹೈರಾಣಾಗಿದ್ದಾರೆ. ಜಿಲ್ಲೆಯ ಸರಾಸರಿ ಉಷ್ಣಾಂಶ 38.7 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದರೆ, ಶಿವಮೊಗ್ಗ ನಗರದಲ್ಲಿ ಶನಿವಾರ ಈ ವರ್ಷದ ಗರಿಷ್ಠ ತಾಪಮಾನ 39.5 ಡಿಗ್ರಿ ದಾಖಲಾಗಿದೆ.

ಏ.23ರಿಂದ ಜಿಲ್ಲೆಯ ಸರಾಸರಿ ಉಷ್ಣಾಂಶ ನಿರಂತರವಾಗಿ 38.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗುತ್ತಿದೆ. ಒಂದು ಕಾಲದಲ್ಲಿ ಮಲೆನಾಡು ಸದಾ ತಂಪಾಗಿರುತ್ತಿತ್ತು. ವರ್ಷದಲ್ಲಿ ಸತತ ಏಳು ತಿಂಗಳ ಮಳೆ, ಸಮೃದ್ಧ ಹಸಿರು ಹೊದ್ದು ಮಲಗಿರುತ್ತಿದ್ದ ದಟ್ಟ ಅರಣ್ಯದಿಂದ ಎಂತಹ ಬೇಸಿಗೆಯಾದರೂ ವಾತಾವರಣ ತಂಪು ತಂಪಾಗಿರುತ್ತಿತ್ತು. ಈಗ ಪರಿಸ್ಥಿತಿ ತಿರುವು ಮುರುವಾಗಿದೆ. ಮಲೆನಾಡು ಬಿಸಿಲ ನಾಡಾಗಿದೆ.

ನಡು ಮಧ್ಯಾಹ್ನದ ಹೊತ್ತಿಗೆ ನೆತ್ತಿ ಮೇಲೆ ಕಾದ ಕಬ್ಬಿಣದಂತೆ ಬರೆ ಹಾಕುತ್ತಿದೆ. ಝಳಕ್ಕೆ ಹೆದರಿ ಜನ ಮಧ್ಯಾಹ್ನ ಹೊರಗೆ ಬರುತ್ತಿಲ್ಲ. ಉಷ್ಣಾಂಶ ಮತ್ತು ಧ‌ಗೆ ಹೆಚ್ಚಳದಿಂದ ದೇಹಕ್ಕೆ ಬೆಂಕಿ ಬಿದ್ದಂತಾಗಿದೆ. ಧಗೆ ಕಡಿಮೆ ಮಾಡಿಕೊಳ್ಳಲು ಫ್ಯಾನ್‌ ಗಾಳಿಗೆ ಮೈಯೊಡ್ಡಿದರೆ ಬಿಸಿ ಗಾಳಿಯೇ ಬರುತ್ತಿದೆ. ಝಳದಿಂದ ಜನರು ಅನಾರೋಗ್ಯಕ್ಕೆ ಒಳಗಾಗುವುದು ಹೆಚ್ಚಾಗುತ್ತಿದೆ.

ನೀರಿನ ಮೂಲಗಳ ಕೊರತೆ: ಪರಿಸರದಲ್ಲಿನ ಜೀವ ವೈವಿಧ್ಯತೆ ಕಾಪಾಡಲು ಹಸಿರು ಪ್ರಮುಖವಾಗಿದೆ. ಹಸಿರು ಹೊದಿಕೆ ವಾತಾವರಣದಲ್ಲಿನ ತೇವಾಂಶ ಹಿಡಿದಿಡಲು ಕಾರಣವಾಗಿದೆ. ಆದರೆ ಶಿವಮೊಗ್ಗ ನಗರ ಸುತ್ತಮುತ್ತ ಕಾಂಕ್ರೀಟ್ ರಸ್ತೆ, ಕಟ್ಟಡಗಳು ಹೆಚ್ಚಾಗಿ ವಾತಾವರಣದಲ್ಲಿನ ಮಾಲಿನ್ಯ ಹಸಿರು ಹೊದಿಕೆಯನ್ನು ನಾಶ ಮಾಡಿದೆ. ಹೀಗಾಗಿ ಅತಿ ನೇರಳೆ ಕಿರಣಗಳು ಭೂಮಿಯನ್ನು ತಲುಪುತ್ತಿವೆ. ಮತ್ತೂಂದೆಡೆ ನೀರಿನ ಮೂಲಗಳಾದ ಕೆರೆ-ಕಟ್ಟೆಗಳು ಬರಿದಾಗಿವೆ. ಹೀಗಾಗಿ ಹಸಿರು ಹೊದಿಕೆ, ತೇವಾಂಶ ಎರಡೂ ಇಲ್ಲದೆ ವಾತಾವರಣದಲ್ಲಿ ಧಗೆ ಹೆಚ್ಚಾಗುತ್ತಿದೆ. ಝಳ ನಿಯಂತ್ರಿಸಬೇಕೆಂದರೆ, ಮರಗಳು, ನೀರಿನ ಮೂಲ ಹೆಚ್ಚಳವಾಗಬೇಕೆಂದು ತಜ್ಞರು ಅಭಿಪ್ರಾಯಿಸಿದ್ದಾರೆ.

ತಜ್ಞರು ಹೇಳುವ ಪ್ರಕಾರ ಶಿವಮೊಗ್ಗದ ಉಷ್ಣಾಂಶದಲ್ಲಿ ಅಂತಹ ಗಣನೀಯ ಏರಿಕೆಯೇನೂ ಕಂಡು ಬಂದಿಲ್ಲ. ಆದರೆ, ವಾತಾವರಣದಲ್ಲಿ ತೇವಾಂಶ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದು ಬಿಸಿಲಿನ ಝಳ ಏರಿಕೆಗೆ ಕಾರಣವಾಗಿದೆ. ವಾತಾವರಣದಲ್ಲಿನ ತೇವಾಂಶ ಮತ್ತು ಉಷ್ಣಾಂಶ ಒಂದಕ್ಕೊಂದು ಅವಿನಾಭಾವ ಸಂಬಂಧ ಹೊಂದಿದೆ. ತೇವಾಂಶ ಕಡಿಮೆಯಾದಲ್ಲಿ ಸಹಜವಾಗಿ ಬಿಸಿಲಿನ ಧಗೆ ಹೆಚ್ಚಾಗಿ ಜನರನ್ನು ಸುಸ್ತಾಗಿಸುತ್ತದೆ. ಮರ ಗಿಡಗಳು, ಅರಣ್ಯದಂತಹ ಹಸಿರು ಹೊದಿಕೆ ವಾತಾವರಣದಲ್ಲಿನ ತೇವಾಂಶವನ್ನು ಹಿಡಿದಿಡುತ್ತದೆ. ಹಸಿರು ಹೊದಿಕೆಯೇ ಇಲ್ಲವೆಂದ ಮೇಲೆ ತೇವಾಂಶ ಎಲ್ಲಿರುತ್ತದೆ. ಇತ್ತೀಚಿನ ವರ್ಷಗಳಲ್ಲಿ ಅಭಿವೃದ್ಧಿಯ ಮಂತ್ರಕ್ಕೆ ಶಿವಮೊಗ್ಗದಲ್ಲಿ ರಸ್ತೆ ಬದಿಯ ಲಕ್ಷಾಂತರ ಮರಗಳು ಧರೆಗುರುಳಿವೆ. ಮಾನವನ ಹಸ್ತಕ್ಷೇಪದಿಂದ ಅರಣ್ಯ ನಾಶ ನಿರಂತರವಾಗಿ ಮುಂದುವರಿದಿದೆ.

ಫ್ಯಾಷನ್‌ ಪರಿಣಾಮ: ಮತ್ತೂಂದು ಕಡೆ ಯುರೋಪ್‌ ಕಟ್ಟಡಗಳ ಶೈಲಿಗೆ ಮಾರು ಹೋಗಿ ಕಟ್ಟಡಗಳಿಗೆ ಗಾಜುಗಳನ್ನು ಅಳವಡಿಸುತ್ತಿರುವುದು ಮನೆಯೊಳಗಿನ ಉಷ್ಣಾಂಶ ಏರಿಕೆ ಹಾಗೂ ವಾತಾವರಣದಲ್ಲಿನ ತೇವಾಂಶ ನಾಶಕ್ಕೆ ಕಾರಣವಾಗಿದೆ. ಹೆಚ್ಚು ಥಂಡಿ ವಾತಾವರಣವಿರುವ ಯುರೋಪ್‌ ದೇಶಗಳಲ್ಲಿ ಮನೆಯೊಳಗೆ ಚಳಿ ಕಡಿಮೆ ಮಾಡಿಕೊಳ್ಳುವ ಸಲುವಾಗಿ ಕಟ್ಟಡಗಳಿಗೆ ಗಾಜು ಅಳವಡಿಸುತ್ತಾರೆ. ಆದರೆ, ನಮ್ಮ ದೇಶದಲ್ಲಿ ಫ್ಯಾಷನ್‌ ಎಂಬಂತೆ ಗಾಜುಗಳನ್ನು ಅಳವಡಿಸಿ ತಾವೇ ತಾವಾಗಿ ಉಷ್ಣಾಂಶ ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂಬುದು ತಜ್ಞರ ಅಭಿಪ್ರಾಯ.

ವಾಯುಭಾರ ಕುಸಿತದಿಂದ ದಕ್ಷಿಣ ರಾಜ್ಯಗಳಲ್ಲಿ ಬಿಸಿಗಾಳಿ
ವಾಯುಭಾರ ಕುಸಿತವು ವಾತಾವರಣದಲ್ಲಿನ ತೇವಾಂಶ ಸೆಳೆದುಕೊಂಡಿರುವುದರಿಂದ ದಕ್ಷಿಣದ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುತ್ತಿದೆ. ಹೀಗಾಗಿ ಮೂರ್‍ನಾಲ್ಕು ದಿನಗಳಿಂದ ಉಷ್ಣಾಂಶ 2ರಿಂದ 4 ಡಿಗ್ರಿಯಷ್ಟು ಏರಿಕೆ ಕಂಡು ಗರಿಷ್ಠ ಮಟ್ಟ ದಾಖಲಿಸಿದೆ. ಹೀಗಾಗಿ ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಾಗಿ ಜನತೆ ನಲುಗುವಂತಾಗಿದೆ. ಚಂಡಮಾರುತ ಪರಿಣಾಮ ಮಲೆನಾಡು ಪ್ರದೇಶದಲ್ಲಿ ಮೇ. 1 ಮತ್ತು 2ರಂದು ಮಳೆಯಾಗುವ ನಿರೀಕ್ಷೆ ಇದೆ ಎನ್ನುತ್ತಾರೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.