ಮಳೆ; ಗಗನಕ್ಕೇರಿದ ತರಕಾರಿ ಬೆಲೆ!


Team Udayavani, Nov 10, 2019, 3:22 PM IST

10-November-21

ಶಿವಮೊಗ್ಗ: ತರಕಾರಿ ಬೆಲೆಗಳು ನಿಜಕ್ಕೂ ಗಗನಕ್ಕೆ ಏರಿವೆ. ಅದರಲ್ಲೂ ಸೊಪ್ಪಿನ ಬೆಲೆಯಂತೂ ಮುಗಿಲು ಮುಟ್ಟಿದೆ. ಪ್ರಮುಖವಾಗಿ ಎಲ್ಲ ರೀತಿಯ ಸೊಪ್ಪುಗಳು ಮಾರುಕಟ್ಟೆಗೆ ಬಾರದೇ ಇರುವುದೇ ಇದಕ್ಕೆ ಕಾರಣವಾಗಿದೆ. ಹಾಗಾಗಿ ಗ್ರಾಹಕರು ಸೊಪ್ಪು ತಿನ್ನುವುದಕ್ಕೆ ಯೋಚಿಸುವಂತಾಗಿದೆ. ಒಂದು ಸಣ್ಣ ಮೆಂತೆಕಟ್ಟಿಗೆ 10 ರಿಂದ 15 ರೂ., ಪಾಲಕ್‌ ಕೂಡ ಒಂದು ಕಟ್ಟಿಗೆ 10ರೂ., ಕೊತ್ತಂಬರಿ 10 ರೂ., ಅಲ್ಲದೇ ತುಂಬಾ ಸರಳವಾಗಿ ಸಿಗುತ್ತಿದ್ದ ಎಳೆರ್ಬೆ, ದಂಟಿನಸೊಪ್ಪು, ಸಬ್ಬಸಿಗೆ, ಕಿರುಕ್‌ ಸಾಲೆ, ನುಗ್ಗೆಸೊಪ್ಪಿನ ಬೆಲೆಯೂ ಕೂಡ ತುಂಬಾ ಏರಿದೆ. 50 ರೂ. ಕೊಟ್ಟರೂ ಒಂದು ಹೊತ್ತಿನ ಸಾರಿಗೂ ಸಾಲದಾಗಿದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಸೊಪ್ಪಿನ ಬೆಳೆ ಕೂಡ ನಾಶವಾಗಿದೆ. ಸೊಪ್ಪಿನ ಜೊತೆಗೆ ಇತರೆ ತರಕಾರಿಗಳಾದ ಬೆಂಡೆಕಾಯಿ, ಹಿರೇಕಾಯಿ, ಕ್ಯಾರೆಟ್‌, ಬೀನ್ಸ್‌, ಬದನೆಕಾಯಿ, ಪಡುವಲಕಾಯಿ, ಕುಂಬಳಕಾಯಿ, ಜವಳಿಕಾಯಿ ಸೇರಿದಂತೆ ಇತರೆ ತರಕಾರಿಗಳ ಬೆಲೆ ಕೂಡ ಏರಿಕೆಯಾಗಿದೆ. ಬೆಂಡೆಕಾಯಿ 40 ರೂ., ಹಿರೇಕಾಯಿ 50 ರೂ., ಕ್ಯಾರೆಟ್‌ 60 ರೂ., ಬೀನ್ಸ್‌ 60 ರೂ.,  ಮ್ಯಾಟೋ ಕೆಜಿಗೆ 25 ರೂ., ಇದೆ. ಇದು ಒಂದು ವಾರದಿಂದ ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಸೌತೆಕಾಯಿ ಬೆಲೆ ಕೂಡ ಜಾಸ್ತಿಯಾಗಿದೆ. ಇದರ ಜೊತೆಗೆ ಈರುಳ್ಳಿ ಬೆಲೆ ಕೂಡ ಗಗನಕ್ಕೆ ಏರಿದೆ. ಕೆಲವೇ ದಿನಗಳ ಹಿಂದೆ 20 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇಂದು ಕೆಜಿಗೆ 50 ರೂ. ದಾಟಿದೆ.

ಬೆಳ್ಳುಳ್ಳಿ ಬೆಲೆ ಕೆಜಿಗೆ 200 ರೂ. ಆಗಿದೆ. ಹೀಗೆ ಸಾಲು ಸಾಲು ಹಬ್ಬಗಳ ನಡುವೆ ಬೆಲೆ ಏರಿಕೆಯಾಗುತ್ತಲೇ ಇದೆ. ಬಾಳೆಹಣ್ಣು, ಸೇಬು ಕೂಡ ಏರಿಕೆಯಾಗಿದೆ ಇದೆ. ಪೇರಲೆ ಹಣ್ಣು ಕೆಜಿಗೆ 100 ರೂ.ಎಂದರೆ ಆಶ್ಚರ್ಯವಾಗುತ್ತದೆ. ಇತರೆ ಚಿಕ್ಕ ಚಿಕ್ಕ ವಸ್ತುಗಳಾದ ನಿಂಬೆಹಣ್ಣು, ಶುಂಠಿ, ಪುದೀನ ಮುಂತಾದವುಗಳ ಬೆಲೆ ಕೂಡ ಏರಿಕೆಯಾಗಿದೆ.

ಇದರ ಜೊತೆಗೆ ಮದುವೆ, ಗೃಹ ಪ್ರವೇಶ,ನಾಮಕರಣ ಮುಂತಾದ ಕಾರ್ಯಕ್ರಮಗಳು ಕೂಡ ಹೆಚ್ಚಾಗಿರುವುದರಿಂದ ತರಕಾರಿಗೆ ಬೇಡಿಕೆ ಹೆಚ್ಚಿದೆ. ತರಕಾರಿ ಸರಬರಾಜು ಕಡಿಮೆಯಾಗಿರುವುದರಿಂದ ಕೊಳ್ಳುವವರ ಸಂಖ್ಯೆ ಹೆಚ್ಚಾಗಿ ಬೆಲೆ ವಾರದಿಂದ ವಾರಕ್ಕೆ ಏರುತ್ತಲೇ ಇದೆ.

ಗುಣಮಟ್ಟದ ತರಕಾರಿಗಳು ಕೂಡ ಇಲ್ಲವಾಗಿದೆ. ಸೊಪ್ಪುಗಳೆಲ್ಲ ಹಳದಿ ಬಣ್ಣಕ್ಕೆ ತಿರುಗಿವೆ. ಆದರೂ ಕೂಡ ಕೆಲವು ಸಣ್ಣ ಮತ್ತು ದೊಡ್ಡ ಹೊಟೇಲ್‌ ನವರು ಇಂತಹ ಗುಣಮಟ್ಟವಲ್ಲದ ತರಕಾರಿಗಳನ್ನೇ ಕೊಂಡುಕೊಂಡು ಹೋಗಿ ಬಳಸುತ್ತಾರೆ. ಇದು ಹೊಟೇಲಿನಲ್ಲಿ ಊಟ ಮಾಡುವ ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಒಟ್ಟಾರೆ ಹಬ್ಬಗಳು ಮುಗಿಯುತ್ತಾ ಬಂದರೂ ಕೂಡ ಬೆಲೆ ಏರಿಕೆ ಕಡಿಮೆಯಾಗುತ್ತಲೇ ಇಲ್ಲ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.