ಸಾಹಿತ್ಯಕ್ಕಿದೆ ಅಪಾರ ಶಕ್ತಿ: ದತ್ತಾತ್ರಿ ಭಗವಾನ್‌

ಸಂಶೋಧನೆಗೆ ನಿರಂತರ ಪರಿಶ್ರಮ ಅಗತ್ಯ

Team Udayavani, Jul 29, 2019, 1:26 PM IST

29-July-29

ಶಿವಮೊಗ್ಗ: ಜಿ.ಎಸ್‌. ರಾಮಭಟ್ಟರ ಸಂಸ್ಮರಣೆ-ಪುಸ್ತಕ ಅವಲೋಕನವನ್ನು ದತ್ತಾತ್ರಿ ಭಗವಾನ್‌ ಉದ್ಘಾಟಿಸಿದರು.

ಶಿವಮೊಗ್ಗ: ಈ ಹಿಂದೆ ನಡೆದದ್ದು, ಈಗ ನಡೆಯುತ್ತಿರುವುದು ಹಾಗೂ ಮುಂದೆ ನಡೆಯುವುದನ್ನು ಸಮಾಜದೊಂದಿಗೆ ಸನ್ನಡತೆಯಿಂದ ತೆಗೆದುಕೊಂಡು ಹೋಗುವ ಶಕ್ತಿ ಸಾಹಿತ್ಯಕ್ಕಿದೆ ಎಂದು ನಿವೃತ್ತ ಉಪನ್ಯಾಸಕ ದತ್ತಾತ್ರಿ ಭಗವಾನ್‌ ಹೇಳಿದರು.

ನಗರದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಿದ್ದ ಜಿ.ಎಸ್‌. ರಾಮಭಟ್ಟರ ಸಂಸ್ಮರಣೆ ಮತ್ತು ಪುಸ್ತಕ ಅವಲೋಕನ ಕಾಯರರ್ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿ.ಎಸ್‌. ರಾಮಭಟ್ಟ ಅವರೊಂದಿಗೆ ನಿಕಟ ಪರಿಚಯ ಹಾಗೂ ಸಾಹಿತ್ಯಿಕ ಸಂಬಂಧವಿತ್ತು. ನನಗೆ ತಿರುಗುವ ಹುಚ್ಚು ಹಾಗೂ ಬರೆಯುವ ಆಸಕ್ತಿ ಇತ್ತು. ಇದಕ್ಕೆ ಪೂರಕವಾಗಿ ಮಾರ್ಗದರ್ಶನ ನೀಡಿದರು ಎಂದರು.

ಜಿಲ್ಲೆಯ ಕವಲೇದುರ್ಗದ ಕುರಿತು ಸಂಶೋಧನಾ ಕೃತಿ ಬರೆದೆ. ಅದಕ್ಕೆ ಜಿ.ಎಸ್‌. ರಾಮಭಟ್ಟ ಅವರು ಕಾರಣ ಎಂದ ಅವರು, ಬೇರೆಯವರು ಸಂಶೋಧನೆ ಮಾಡಿರುವುದನ್ನೇ ತಮ್ಮ ಸಂಶೋಧನೆ ಎಂದು ಹೇಳುವವರು ಇದ್ದಾರೆ. ಹೆಸರು ಬಯಸದೆ ಕೆಲಸ ಮಾಡಿರುವವರು ಸಹ ಇದ್ದಾರೆ. ಈ ಇಬ್ಬರೊಂದಿಗೂ ಸಂಬಂಧ ಅನಿವಾರ್ಯವಾಗಿದೆ ಎಂದರು.

ಸಂಶೋಧನೆ ಕಠಿಣವಾದುದು. ಅದನ್ನು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ನಿರಂತರ ಪರಿಶ್ರಮ, ಖುಷಿ ಸದೃಶ ಭಾವನೆ ಇದ್ದವರು ಸಾಹಿತ್ಯಕಾರರಾಗುತ್ತಾರೆ. ಸಾಹಿತ್ಯ ಸಂಶೋಧಕರು ಆಧಾರಗಳನ್ನು ಇಟ್ಟುಕೊಂಡು ಸತ್ಯ ಹೊರತರುವ ಕೆಲಸಗಳನ್ನು ಮಾಡುತ್ತಾರೆ. ಅಂತಹವರು ನಿಜವಾದ ಸಾಹಿತ್ಯಕಾರರು. ಈಗ ಜನರನ್ನು ದಾರಿತಪ್ಪಿಸುವ ಸಂಶೋಧನಾ ಸಾಹಿತಿಗಳಿದ್ದಾರೆ. ಅವರು ಸಮಾಜವನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತಿದ್ದಾರೆ ಎಂದ ಅವರು, ಐತಿಹಾಸಿಕ ಸಂಶೋಧನೆಯನ್ನು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಅದಕ್ಕೆ ಕಠಿಣ ಪರಿಶ್ರಮ ಅಗತ್ಯ ಎಂದರು. ಸಾಹಿತಿಗಳು ಹೊರ ತರುವ ಪುಸ್ತಕಗಳು ಇಂಟರ್‌ನೆಟ್‌ನಲ್ಲಿ ಸಿಗುತ್ತವೆ. ಅವುಗಳನ್ನು ಅನೇಕರು ಹಿಂಬಾಲಿಸುತ್ತಾರೆ. ಮಾರ್ಗದರ್ಶನ ಪಡೆಯುತ್ತಾರೆ. ಅಲ್ಲದೆ ನಾವು ಬರೆದಿರುವುದನ್ನು ಕುರಿತು ಪ್ರಶ್ನಿಸುತ್ತಾರೆ. ಹಾಗಾಗಿ ಆಧಾರ ಸಹಿತವಾದ ಸಂಶೋಧನೆ ಸಾಹಿತ್ಯವನ್ನು ಬರೆಯಬೇಕು ಎಂದು ಸಲಹೆ ನೀಡಿದರು.

ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಜನರು ಉತ್ತಮ ಕೆಲಸವನ್ನು ಮಾಡಿರುತ್ತಾರೆ. ಅಂತವರು ಬೇರೆ ಜನರಿಗೆ ಅಷ್ಟರ ಮಟ್ಟಿಗೆ ಪರಿಚಯವಾಗಿರುವುದಿಲ್ಲ. ಹೊಸ ಹೊಸ ವಿಷಯಗಳು ಬಂದಾಗ ಹಳೆಯದನ್ನು ಮರೆಯುವುದು ಸಹಜ. ಇಂತಹ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಈ ರೀತಿಯ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿರುವವನ್ನು ಗುರುತಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು. ಸಾಹಿತಿ ಹಾಗೂ ಸಂಶೋಧಕ ಅಂಬ್ರಯ್ಯಮಠ ಅವರು, ಜಯದೇವಪ್ಪ ಜೈನಕೇರಿ ಅವರ ಕೆಳದಿ ಅರಸರ ಯಶೋಗಾಥೆ ಪುಸ್ತಕ ಕುರಿತು ಮಾತನಾಡಿ, 215 ಪುಟಗಳ ಕೃತಿಯಲ್ಲಿ ಜಯದೇವಪ್ಪ ಜೈನಕೇರಿ ಅವರು ಸೊಗಸಾಗಿ ನಿರೂಪಣೆ ಮಾಡಿದ್ದಾರೆ. ಕವಿಗಳ ಬಗ್ಗೆ ವಿಸ್ತೃತವಾಗಿ ಬರೆದಿದ್ದಾರೆ. ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಬರೆದಿದ್ದಾರೆ. ಅಲ್ಲದೆ ಸಂಶೋಧನಾ ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಬರೆದಿದ್ದಾರೆ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಬಿ. ಶಂಕರಪ್ಪ ಮಾತನಾಡಿ, ಜಿ.ಎಸ್‌. ರಾಮಭಟ್ಟ ಅವರು ಅನೇಕ ಸಂಶೋಧನೆಗಳನ್ನು ಮಾಡಿದ್ದಾರೆ. ಆದರೆ ಅವರು ಮಾಡಿರುವ ಸಂಶೋಧನೆಗಳನ್ನು ಬೇರೆಯವರು ತಮ್ಮ ಹೆಸರಿನಲ್ಲಿ ಪ್ರಕಟಿಸಿಕೊಂಡಿದ್ದಾರೆ ಅದು ಬೇಸರದ ಸಂಗತಿ ಎಂದರು.

ಇತಿಹಾಸ ಸಂಶೋಧಕ ಮಧು ಗಣಪತಿರಾವ್‌ ಮಡೆನೂರು, ಸಾಹಿತಿಗಳಾದ ಕೆ. ಚೆನ್ನಪ್ಪ, ಎಂ.ಎನ್‌. ಸುಂದರರಾಜ್‌, ಲೇಖಕಿ ಎಸ್‌.ವಿ. ಚಂದ್ರಕಲಾ ಅರಸ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.