ಸಮಬಲದ ಕಣದಲ್ಲಿ ಸಮೀಕ್ಷೆ ಲೆಕ್ಕ!

ಮೂರು ಪಕ್ಷಗಳಿಂದ ಬೂತ್‌ವಾರು ಸಮೀಕ್ಷೆ •ಸೋಲುವವರು ಯಾರು ಎಂಬುದೇ ಯಕ್ಷಪ್ರಶ್ನೆ

Team Udayavani, May 6, 2019, 1:09 PM IST

Udayavani Kannada Newspaper

ಶಿವಮೊಗ್ಗ: ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಎಂಬಂತೆ ಚುನಾವಣೆ ಮುಗಿದರೂ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಎಲ್ಲರೂ ಗೆಲ್ಲೋದಾದರೆ ಸೋಲು ಯಾರಿಗೆ ಎಂಬ ಪ್ರಶ್ನೆಯನ್ನು ಮೂರು ಪಕ್ಷಗಳ ಸಮೀಕ್ಷೆ ಹುಟ್ಟುಹಾಕಿದೆ.

6 ಏಳು ತಿಂಗಳ ಹಿಂದೆ ನಡೆದ ಲೋಕಸಭೆ ಉಪ ಚುನಾವಣೆಯ ಫಲಿತಾಂಶಕ್ಕೂ ಸಾರ್ವತ್ರಿಕ ಚುನಾವಣೆಯ ಫಲಿತಾಂಶಕ್ಕೂ ಹೆಚ್ಚಿನ ಅಂತರವೇನು ಇಲ್ಲ ಎನ್ನುತ್ತಿವೆ ಎಲ್ಲ ಸಮೀಕ್ಷೆಗಳು. ಉಪ ಚುನಾವಣೆಗೂ ಇಲ್ಲಿಗೂ ಶೇ.11ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದೆ. ಗೆಲುವಿನ ಲೆಕ್ಕಾಚಾರವನ್ನೇ ಬದಲಿಸಬಲ್ಲ ಕ್ಷೇತ್ರಗಳಲ್ಲಿಯೂ ಉತ್ತಮ ಮತದಾನವಾಗಿದೆ. ಇದರ ಲಾಭ ಯಾರಿಗೆ ಎಂಬ ಪ್ರಶ್ನೆಗಳು ಈಗ ಉದ್ಭವಿಸಿವೆ.

ಕುಸಿಯುತ್ತಿದೆ ಅಂತರ: 2014ರ ಚುನಾವಣೆಯಲ್ಲಿ ಬಿಜೆಪಿಗಳಿಸಿದ್ದ ಮತಕ್ಕೂ 2018ರ ಉಪ ಚುನಾವಣೆಯಲ್ಲಿ ಗಳಿಸಿದ್ದ ಮತಕ್ಕೂ ದೊಡ್ಡ ಅಂತರವಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ಗೆ ಸಿಕ್ಕ ಮತಗಳನ್ನು ಒಟ್ಟಗೂಡಿಸಿದರೆ ಜೆಡಿಎಸ್‌ ಉತ್ತಮ ಅಂತರದಿಂದ ಗೆಲುವು ಸಾಸಬೇಕಿತ್ತು. ಆದರೆ ಮತದಾರರು ವಿಧಾನಸಭೆಗೂ ಮತ್ತು ಲೋಕಸಭೆಗೂ ಬೇರೆ ಲೆಕ್ಕಾಚಾರದಲ್ಲ ಮತ ಚಲಾಯಿಸುತ್ತಿದ್ದಾರೆ.

2018 ಲೋಕಸಭೆ ಉಪ ಚುನಾವಣೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 77388, ಜೆಡಿಎಸ್‌ 51815 ಮತ ಪಡೆದಿತ್ತು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್‌ 67899, ಬಿಜೆಪಿ 75181, ಭದ್ರಾವತಿ ಕ್ಷೇತ್ರದಲ್ಲಿ ಜೆಡಿಎಸ್‌ 62415, ಬಿಜೆಪಿ 51469, ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್‌ 58105, ಬಿಜೆಪಿ 65319, ಶಿಕಾರಿಪುರ ಕ್ಷೇತ್ರದಲ್ಲಿ ಜೆಡಿಎಸ್‌ 58787, ಬಿಜೆಪಿ 77570, ಸೊರಬ ತಾಲ್ಲೂಕು ಜೆಡಿಎಸ್‌ 68605, ಬಿಜೆಪಿ 67108, ಸಾಗರ ತಾಲ್ಲೂಕು ಜೆಡಿಎಸ್‌ 68993, ಬಿಜೆಪಿ 60526, ಬೈಂದೂರು ಜೆಡಿಎಸ್‌ 54522, ಬಿಜೆಪಿ 68992 ಮತ ಪಡೆದಿವೆ. ಉಪ ಚುನಾವಣೆ ಫಲಿತಾಂಶ ಗಮನಿಸಿದಾಗ ಬಿಜೆಪಿ ಭದ್ರಾವತಿ, ಸೊರಬ, ಸಾಗರದಲ್ಲಿ ಹಿನ್ನಡೆ ಅನುಭವಿಸಿದ್ದು ಬಿಟ್ಟರೆ ಉಳಿದೆಲ್ಲ ಕ್ಷೇತ್ರಗಳಲ್ಲೂ ಮುನ್ನಡೆ ಸಾಸಿತ್ತು. ಈ ಬಾರಿ ಉಪ ಚುನಾವಣೆಗಿಂತಲೂ 2 ಲಕ್ಷ ಹೆಚ್ಚುವರಿ ಮತದಾನವಾಗಿದ್ದು, ಈ ಮತಗಳು ಯಾರ ಪಾಲಾಗಿವೆ ಎಂಬುದು ಕುತೂಹಲ ಮೂಡಿಸಿವೆ.

ಬೂತ್‌ವಾರು ತಂತ್ರ: ಕಳೆದ ಬಾರಿ ಕಡಿಮೆ ಮತ ಬಂದಿದ್ದ ಬೂತ್‌ಗಳ ಮೇಲೆ ಎರಡೂ ಪಕ್ಷಗಳು ನಿಗಾವಹಿಸಿದ್ದವು. ಅದರಲ್ಲೂ ಯುವ ಮತದಾರರು, ಬೇರೆ ಜಿಲ್ಲೆಗಳಲ್ಲಿರುವ ಮತದಾರರು ಕರೆತಂದು ಮತ ಹಾಕಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದೆ. ಭದ್ರಾವತಿ, ಸಾಗರ, ಸೊರಬದಲ್ಲಿ ಲೀಡ್‌ ತರಲು ಹೆಚ್ಚಿನ ಕೆಲಸ ಮಾಡಿದೆ. ಅಮಿತ್‌ಶಾ, ಬಿಎಸ್‌ವೈ, ಎಸ್‌.ಎಂ.ಕೃಷ್ಣ, ನಿರ್ಮಲಾ ಸೀತಾರಾಮನ್‌, ಕೆ.ಎಸ್‌.ಈಶ್ವರಪ್ಪರ ರ್ಯಾಲಿಗಳ ಹೊರತಾಗಿಯೂ ಪೇಜ್‌ ಪ್ರಮುಖರು ಮನೆ ಮನೆ ತಲುಪಿ ಮತಯಾಚಿಸಿದ್ದರು. ಪೇಜ್‌ ಪ್ರಮುಖರು ನೀಡಿದ ಮಾಹಿತಿ ಮೇರೆಗೆ ಮತಗಳಿಕೆ ಪ್ರಮಾಣ ಲೆಕ್ಕ ಹಾಕಿದೆ. ಮೋದಿ ಟೀಂಕೂಡ ಬಂದು ಸಹ ಸಮೀಕ್ಷೆ ಮಾಡಿಕೊಂಡು ಹೋಗಿದೆ.

ಇನ್ನು ಜೆಡಿಎಸ್‌ ಸಹ 2021 ಬೂತ್‌ಗಳ ಪಟ್ಟಿ ಮಾಡಿಕೊಂಡು ಕಳೆದ ಬಾರಿ ಕಡಿಮೆ ಮತ ಬಂದ ಕೆಲಸ ಮಾಡಿದರೆ ಇನ್ನಷ್ಟು ಮತಗಳಿಸಲು ಸಾಧ್ಯವಾಗಬಹುದಾದ ಬೂತ್‌ಗಳ ಮೇಲೆ ಹೆಚ್ಚಿನ ಪ್ರಚಾರ ನಡೆಸಿತ್ತು. ಅತೃಪ್ತ ಮುಖಂಡರನ್ನು ಒಂದೇ ವೇದಿಕೆಗೆ ತರಲು ಸಹ ಯಶಸ್ವಿಯಾಗಿತ್ತು. ಜತೆಗೆ ಡಿ.ಕೆ.ಬದ್ರರ್ ಚುನಾವಣೆ ಉಸ್ತುವಾರಿ ತೆಗೆದುಕೊಂಡಿದ್ದು, ಸಿಎಂ ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆ ಎರಡು ದಿನ ಶಿವಮೊಗ್ಗದಲ್ಲೆ ಉಳಿದು ಪ್ರಚಾರ ಮಾಡಿದ್ದು, ಎಚ್.ಡಿ.ದೇವೇಗೌಡ, 15 ಮಂದಿ ಸಚಿವರು, ಶಾಸಕರು ಸಹ ಪ್ರಚಾರ ಮಾಡಿದ್ದು ಈಬಾರಿ ಕೈಹಿಡಿಯಬಹುದೆಂಬ ನಿರೀಕ್ಷೆಯಲ್ಲಿದೆ.

ಮುಗಿಯದ ಲೆಕ್ಕಾಚಾರ
ಬೂತ್‌ವಾರು ಕಾರ್ಯಕರ್ತರಿಂದ ಮಾಹಿತಿ ತರಿಸಿಕೊಂಡರೂ ಯಾವ ಜಾತಿಯವರು ಯಾರ ಕೈಹಿಡಿದಿದ್ದಾರೆ ತಿಳಿಯದೇ ಪಕ್ಷದ ಮುಖಂಡರು ಹೈರಾಣಾಗಿದ್ದಾರೆ. ದಿನಕ್ಕೊಂದು ಸಮೀಕ್ಷೆ ವರದಿಗಳು ಅಭ್ಯರ್ಥಿಗಳ ಕೈಸೇರುತ್ತಿವೆ. ಸೋಲು, ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿರುವ ಅಭ್ಯರ್ಥಿಗಳು, ಮತದಾರರು ಮೇ 23ರ ನಿರೀಕ್ಷೆಯಲ್ಲಿದ್ದಾರೆ.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.