ರಾಜಬೀದಿ ಉತ್ಸವಕ್ಕೆ ಸಿದ್ಧತೆ


Team Udayavani, Sep 11, 2019, 1:43 PM IST

11-Sepctember–14

ಶಿವಮೊಗ್ಗ: ನಗರದ ಗಾಂಧಿ ಬಜಾರ್‌ ರಸ್ತೆ ಸಿಂಗಾರಗೊಂಡಿರುವುದು.

ಶಿವಮೊಗ್ಗ: ಹಿಂದೂ ಮಹಾಸಭಾ 75ನೇ ಗಣೇಶೋತ್ಸವ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು ಕೇಸರಿಮಯವಾಗಿವೆ. ಸೆ.12ರಂದು ನಡೆಯುವ ರಾಜಬೀದಿ ಉತ್ಸವಕ್ಕೆ ಸಕಲಸಿದ್ಧತೆ ಪೂರ್ಣಗೊಂಡಿದೆ. ಎಲ್ಲೆಲ್ಲೂ ಕೇಸರಿ ಬಂಟಿಂಗ್ಸ್‌, ಫೆಕ್ಸ್‌ಗಳು ರಾರಾಜಿಸುತ್ತಿವೆ. ಸ್ವಾಗತ ಕಮಾನುಗಳು ಒಂದಕ್ಕಿಂತ ಒಂದು ಆಕರ್ಷಕವಾಗಿವೆ. 24 ಅಡಿಯ ಎತ್ತರದ ಬೃಹತ್‌ ಮಹಾದ್ವಾರ, 18 ಅಡಿಯ ಛತ್ರಪತಿ ಶಿವಾಜಿ ಪ್ರತಿಮೆಯ ಈ ಬಾರಿಯ ಪ್ರಮುಖ ಅಕರ್ಷಣೆ.

ಗಾಂಧಿ ಬಜಾರ್‌ ಸೇರಿದಂತೆ ಶಿವಪ್ಪ ನಾಯಕ ವೃತ್ತ, ಅಮೀರ್‌ ಅಹಮ್ಮದ್‌ ವೃತ್ತ, ಗೋಪಿ ವೃತ್ತ, ರಾಮಣ್ಣ ಶ್ರೇಷ್ಠಿ ಪಾರ್ಕ್‌ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದ್ದು, ಇದಕ್ಕಾಗಿ ಸುಮಾರು 8 ಲಕ್ಷ ರೂ.ಗೂ ಅಧಿಕ ಹಣ ವೆಚ್ಚವಾಗಿದೆ. ಭದ್ರಾವತಿಯ ಹಿಂದೂಮಹಾಸಭಾ ಗಣೇಶ ಮೂರ್ತಿ ವಿಸರ್ಜನೆಗೆ ಸಾವಿರಾರು ಜನ ಸೇರಿದ್ದು, ಶಿವಮೊಗ್ಗದಲ್ಲೂ ಅದಕ್ಕಿಂತ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ. ಹಿಂದು ಮಹಾಸಭಾ ಗಣಪತಿ ಪ್ರತಿಷ್ಠಾನೆ ಅಂಗವಾಗಿ ನಗರದ ಗಾಂಧಿ ಬಜಾರ್‌ನಲ್ಲಿ ನಿರ್ಮಾಣವಾಗಿರುವ ಹಿಂದೂ ಸಂಘಟನಾ ಮಹಾ ಮಂಡಳಿಯ ಮಹಾದ್ವಾರವೂ ಕೇಂದ್ರ ಬಿಂದುವಾಗಿದ್ದು ಕಳೆದ ಬಾರಿಗಿಂತಲೂ ಈ ಬಾರಿ ಎತ್ತರವಾಗಿ ಮಹಾದ್ವಾರ ನಿರ್ಮಾಣವಾಗಿದೆ.

ಈ ಬಾರಿ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ, ಜನಪದ ಕಲಾ ತಂಡಗಳು ಸೇರಿದಂತೆ ಭಾರತೀಯ ಸಂಸ್ಕೃತಿ ಬಿಂಬಿಸುವ ಎಲ್ಲ ವಾದ್ಯಗಳು ಮೆರೆವಣಿಯಲ್ಲಿ ಇರಲಿವೆ. 75ನೇ ವರ್ಷದ ವಿಸರ್ಜನೆ ಮರವಣಿಗೆ ಅದ್ದೂರಿಯಾಗಿ ನಡೆಯಲಿದ್ದು ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಜನರು ಸೇರುವ ನಿರೀಕ್ಷೆ ಹಿಂದೂ ಸಂಘಟನಾ ಮಹಾ ಮಂಡಳಿಯದ್ದು.

75ನೇ ವರ್ಷದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಅದ್ಧೂರಿ ವಿಸರ್ಜನೆಗೆ ಇಡೀ ನಗರವೇ ಸಜ್ಜಾಗಿದೆ. ಈ ಬಾರಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಅಂಗವಾಗಿ ಸುಮಾರು 2 ಲಕ್ಷಕ್ಕೂ ಅಧಿಕ ರೂ. ವೆಚ್ಚದಲ್ಲಿ ಗಾಂಧಿ ಬಜಾರ್‌ನ ಮುಖ್ಯದ್ವಾರದ ಮೇಲೆ ನಿರ್ಮಿಸಲಾಗಿರುವ 18 ಅಡಿ ಶಿವಾಜಿ ಪ್ರತಿಮೆ ಎಲ್ಲರನ್ನು ಆಕರ್ಷಿಸುತ್ತಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಅಂಗವಾಗಿ ನಿರ್ಮಾಣಗೊಂಡಿರುವ 18 ಅಡಿಯ ಶಿವಾಜಿ ಪ್ರತಿಮೆ ಹಿರಿಯರ ಮಾರ್ಗದರ್ಶದಂತೆ ಶಿವಮೊಗ್ಗದ ಹೆಸರಾಂತ ಶಿಲ್ಪಿ ಜೀವನ್‌ ಮತ್ತು ತಂಡದವರ ಕೈಚಳಕದಿಂದ ಮೂಡಿ ಬಂದಿದೆ.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.