ಭಾವೈಕ್ಯದ ಮೊಹರಂ ಮೆರವಣಿಗೆ

ಕೆಂಡ ಹಾಯುವುದು- ಅಲಾದಿ ಕುಣಿತ- ಹುಲಿವೇಷ ಹಾಕಿ ಮೊಹರಂ ಆಚರಣೆ

Team Udayavani, Sep 11, 2019, 3:36 PM IST

11-Sepctember–21

ಶಿವಮೊಗ್ಗ: ಅಮೀರ್‌ ಅಹಮ್ಮದ್‌ ಸರ್ಕಲ್ನಲ್ಲಿ ಪೀರಲ ದೇವರುಗಳನ್ನು ಮೆರವಣಿಗೆ ಮಾಡಲಾಯಿತು.

ಶಿವಮೊಗ್ಗ: ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯದ ಸಂದೇಶ ಸಾರುವ ಮೊಹರಂ ಹಬ್ಬದ ಆಚರಣೆಯ ಅಂಗವಾಗಿ ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ಮುಸ್ಲಿಮರು ಮೆರವಣಿಗೆ ನಡೆಸಿದರು.

ಗಾಂಧಿ ಬಜಾರ್‌ ಮಾರ್ಗವಾಗಿ ಮೆರವಣಿಗೆಯಲ್ಲಿ ಮುಸ್ಲಿಮರು ಶಾಂತಿಯುತವಾಗಿ ಸಾಗಿದರು. ಶಾಂತಿ ಮತ್ತು ಧರ್ಮದ ಉಳಿವಿಗಾಗಿ ಹೋರಾಡಿ ಮಡಿದ ಪ್ರವಾದಿ ಮಹಮ್ಮದ್‌ ಪೈಗಂಬರರ ಮೊಮ್ಮಕ್ಕಳಾದ ಹಜರತ್‌ ಹಸನ್‌ ಮತ್ತು ಹುಸೇನ್‌ರ ನೆನಪಿಗಾಗಿ ಈ ಹಬ್ಬ ಆಚರಿಸಲಾಗುತ್ತದೆ. ಅಲ್ಲದೆ, ಮೊಹರಂ ಹಬ್ಬದಿಂದ ಇಸ್ಲಾಂ ಧರ್ಮೀಯರ ಹೊಸವರ್ಷ ಆರಂಭ ಎಂಬ ಪ್ರತೀತಿಯೂ ಇದೆ. ಸತ್ಯ, ಧರ್ಮ, ನ್ಯಾಯಕ್ಕಾಗಿ ಮತ್ತು ಯುದ್ಧದಲ್ಲಿ ಮಡಿದ ಇಮಾಂ ಹುಸೇನರ ಪುಣ್ಯಸ್ಮರಣೆಗಾಗಿ ಈ ಹಬ್ಬ ಆಚರಿಸಲಾಗುತ್ತದೆ. ಹಿಂದೂಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ವಿಶೇಷವಾಗಿದೆ.

ಹಬ್ಬದ ಸಂದರ್ಭದಲ್ಲಿ ಕೆಂಡ ಹಾಯುವುದು, ಆಲಾದಿ ಕುಣಿತ, ಮರಗಾಲು ಕುಣಿತ, ಹುಲಿವೇಷ ಸೇರಿದಂತೆ ಹಲವು ವೇಷಗಳನ್ನು ಕೂಡ ಹಾಕಲಾಗುತ್ತದೆ. ಅಲ್ಲದೆ ಈ ಹಬ್ಬದ ಸಂದರ್ಭದಲ್ಲಿ ಭಕ್ತರು ನಾನಾ ಹರಕೆಗಳನ್ನು ನೆರವೇರಿಸುತ್ತಾರೆ. ಬೆಂಕಿಯಲ್ಲಿ ನಡೆಯುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಾರೆ. ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಪ್ರಕೃತಿ ವಿಕೋಪಗಳು ಸಂಭವಿಸದಿರಲಿ ಎಂಬುದೇ ಈ ಹಬ್ಬದ ಆಶಯವಾಗಿದೆ.

ಪರಸ್ಪರ ಪ್ರೀತಿ-ಸಂತೋಷ, ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯುತ್ತವೆ. ಇಂದು ಶ್ರದ್ಧಾಭಕ್ತಿಯಿಂದ ಮುಸ್ಲಿಮರು ಈ ಹಬ್ಬ ಆಚರಿಸಿದರು. ಮನೆಗಳಲ್ಲಿ ವಿಶೇಷ ಅಡುಗೆ ಮಾಡಿಕೊಂಡು ಸವಿದರು. ಹಿಂದೂ ಮುಸ್ಲಿಮರ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬವೇ ಮೊಹರಂ ಆಗಿರುವುದು ವಿಶೇಷವಾಗಿದೆ. ನಗರದಲ್ಲಿ ಮೆರವಣಿಗೆ ನಡೆಸಿದ ಮುಸ್ಲಿಮರು ವಿದ್ಯಾನಗರದ ಬಳಿ ಕೆಂಡ ಹಾಯ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.