ಅನ್ಯಾಯದ ವಿರುದ್ಧ ಹೋರಾಡಿ: ವಸಂತ

•ಸಾಹಿತ್ಯ ಹುಣ್ಣಿಮೆಯಿಂದ ಮನಸ್ಸು ಕಟ್ಟುವ ಕೆಲಸ•ಭ್ರಷ್ಟ ರಹಿತ ರಾಜಕಾರಣ ಆರಂಭವಾಗಲಿ

Team Udayavani, Aug 18, 2019, 12:02 PM IST

18-Agust-19

ಶಿವಮೊಗ್ಗ: ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮದಲ್ಲಿ ನೊಮಿಟೋ ಕಾಮದಾರ್‌, ಎಸ್‌.ಎಲ್.ಎನ್‌. ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಶಿವಮೊಗ್ಗ: ಸಾಹಿತ್ಯ ಹುಣ್ಣಿಮೆಯ ಮೂಲಕ ಸಾಹಿತ್ಯ, ಸಾಂಸ್ಕೃತಿಕ ವಾತಾವರಣದಲ್ಲಿ ಮನಸ್ಸು ಕಟ್ಟುವ ಕೆಲಸ ನಡೆಯುತ್ತಿದೆ. ಪ್ರತಿಭೆಗಳನ್ನು ಗುರುತಿಸಿ ಬೆಳಗಿಸಿ ನಾಡಿಗೆ ಕೊಡುಗೆಯಾಗಿ ನೀಡುವ ಈ ಪ್ರಯತ್ನ ಸಾರ್ಥಕವಾಗಲಿ. ಇದು ಗಿನ್ನೆಸ್‌ ದಾಖಲೆಗೆ ಸೇರುವಂತಾಗಬೇಕು. ಸ್ವಾತಂತ್ರ್ಯ ಹೋರಾಟಗಾರರ ಮಾತು ನಮಗೆ ಹೋರಾಟಕ್ಕೆ ಪ್ರೇರಣೆಯಾಯಿತು. ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡಬೇಕು. ಭ್ರಷ್ಟ ರಹಿತ ರಾಜಕಾರಣ ನಿರ್ಮಾಣವಾಗಬೇಕು. ಅದಕ್ಕಾಗಿ ಹೋರಾಟ, ಜನಜಾಗೃತಿ ಅನಿವಾರ್ಯವಾಗಿದೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ. ವಿ. ವಸಂತಕುಮಾರ್‌ ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯು ಆ. 15 ರಂದು ಸಂಜೆ ನಗರದ ಮಥುರಾ ಹೊಟೇಲ್ ಸಭಾಂಗಣದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್‌ ಆತಿಥ್ಯದಲ್ಲಿ ಏರ್ಪಡಿಸಿದ್ದ ಸಾಹಿತ್ಯ ಹುಣ್ಣಿಮೆಯ 166 ನೇ ತಿಂಗಳ ಕಾರ್ಯಕ್ರಮ ಮತ್ತು ಸ್ವಾತಂತ್ರ್ಯ ಚಿಂತನೆ, ಶ್ರಾವಣ ಸಂಭ್ರಮ, ಅಭಿನಂದನೆ, ಕವಿ, ಕಾವ್ಯ, ಕಥಾ ನೋಟ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಅದು ಅನ್ಯಾಯ, ಮೋಸ, ಭ್ರಷ್ಟಾಚಾರಗಳಿಂದ ದೇಶ ಕಟ್ಟಲು ಸಾಧ್ಯವಾಗುವುದಿಲ್ಲ. ಕಳಪೆ ಕಾಮಗಾರಿಗಳು ಅಭಿವೃದ್ಧಿಗಳಲ್ಲ. ನಮ್ಮ ರಾಜಕಾರಣಿಗಳ ತಮ್ಮ ಬಳಿಯಿರುವ ಅಕ್ರಮ ಹಣದಿಂದ ವ್ಯವಸ್ಥೆಯನ್ನು ಬುಡಮೇಲೆ ಮಾಡುತ್ತಿದ್ದಾರೆ. ಹೀಗೇ ಬಿಟ್ಟರೆ ವ್ಯವಸ್ಥೆ ನಮ್ಮನ್ನೇ ನುಂಗುತ್ತದೆ. ಮುಂದಿನ ಪೀಳಿಗೆಗೆ ಭವಿಷ್ಯ ರೂಪಿಸಲು ಬದಲಾವಣೆಗೆ ಎಲ್ಲರೂ ಪ್ರಯತ್ನ ಮಾಡೋಣ, ಅನ್ಯಾಯದ ವಿರುದ್ಧ, ಅಸಹ್ಯ ಬದುಕಿನ ವಿರುದ್ಧ ಮಾತನಾಡೋಣ. ಈ ಹೋರಾಟ ಶಿವಮೊಗ್ಗದಿಂದಲೇ ಆಗಲಿ ಎಂದರು.

2018 ರ ನಾರೀ ಶಕ್ತಿ ರಾಷ್ಟ್ರೀಯ ಪುರಸ್ಕಾರವನ್ನು ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪಡೆದ ಹೊನ್ನೇಮರಡು ನಲ್ಲಿರುವ ಭಾರತೀಯ ಸಾಹಸ ಸಮನ್ವಯ ಕೇಂದ್ರದ ನಿರ್ದೇಶಕರಾದ ನೊಮಿಟೋ ಕಾಮದಾರ್‌ ಮತ್ತು ಎಸ್‌.ಎಲ್.ಎನ್‌.ಸ್ವಾಮಿ ಅವರನ್ನು ಅಭಿನಂದಿಸಲಾಯಿತು. ಮಥುರಾ ಫುಡ್‌ ಪ್ರಾಡೆಕ್ಟ್ನ ಉದ್ಯಮಿಗಳಾದ ಬಿ.ವಿ. ಲಕ್ಷ್ಮೀದೇವಿ ಗೋಪಿನಾಥ ಮಾತನಾಡಿ, ಜನರಲ್ಲಿ ಸಾತ್ವಿಕ ಭಾವನೆ ಮೂಡಿಸುವಲ್ಲಿ ಸಂಗೀತ, ಸಾಹಿತ್ಯ ಚಟುವಟಿಕೆ ನಿರಂತರವಾಗಿ ನಡೆಯಬೇಕು. ಆ ಮೂಲಕ ದೇಶಕ್ಕೆ ನಮ್ಮದೇ ಆದ ಕೊಡುಗೆ ನೀಡಲು ನೆರವಾಗಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾ ಸಂಚಾಲಕಿ ಪ್ರತಿಮಾ ಡಾಕಪ್ಪ ಗೌಡ ಅವರು ದತ್ತಿ ಹಣ ನೀಡಿ ನಿರಂತರ ಚಟುವಟಿಕೆಗೆ ಕೊಡುಗೆ ನೀಡಿದರು. ಆದಿಚುಂಚನಗಿರಿ ಪಿ.ಯು. ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ| ಅನಿತಾ ಹೆಗ್ಗೋಡು ಅವರು ಕಥೆ ಹೇಳಿದರು. ದೂರದರ್ಶನ ಹಾಸ್ಯ ಕಲಾವಿದರಾದ ಉಮೇಶ್‌ಗೌಡ ಅವರು ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಸಾಗರ ತಾಲೂಕು ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ವಿ. ಟಿ. ಸ್ವಾಮಿ ಅಭಿನಂದನಾ ಮಾತುಗಳನ್ನಾಡಿದರು.

ಕರ್ನಾಟಕ ಸುಗಮ ಸಂಗೀತ ಪರಿಷತ್‌ ಕಲಾವಿದರು ಕಾರ್ಯದರ್ಶಿ ಮಂಜುನಾಥ ಅವರ ನೇತೃತ್ವದಲ್ಲಿ ಸಮೂಹ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಗಾಯಕರಾದ ಸಹನಾ ಜಿ. ಭಟ್ ಮತ್ತು ಪ್ರತಿಭಾ ನಾಗರಾಜ್‌ ಅವರು ಭಾವಗೀತೆ, ದೇಶಭಕ್ತಿ ಗೀತೆಗಳನ್ನು ಹಾಡಿದರು. ಹಿರಿಯ ಕವಿಗಳಾದ ಡಿ. ಬಿ.ರಜಿಯಾ, ಬಿ.ಟಿ. ಅಂಬಿಕಾ, ಡಿ. ಮಂಜುನಾಥ, ಎಂ ಎಂ. ಸ್ವಾಮಿ, ಪೀಟರ್‌ ಭದ್ರಾವತಿ ಯುವ ಕವಿ ಶಶಿಕುಮಾರ್‌, ವಿದ್ಯಾರ್ಥಿನಿ ನಿಧಿ ಹೊಸಮನೆ ಅವರು ಕವನ, ಚುಟುಕು ವಾಚಿಸಿದರು. ಉಪನ್ಯಾಸಕ ನೃಪತುಂಗ ನಿರೂಪಿಸಿದರು. ಕೆ.ಎಸ್‌. ಮಂಜಪ್ಪ ಸ್ವಾಗತಿಸಿದರು. ಡಿ. ಗಣೇಶ್‌ ವಂದಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.