ಪುರಾತನ ದೇಗುಲಕ್ಕೆ ಕಾಯಕಲ್ಪ

ಇತಿಹಾಸ ಪ್ರಸಿದ್ಧ ಬಿದನೂರು ನಗರದ ನೀಲಕಂಠೇಶ್ವರ ದೇವಸ್ಥಾನ ಪುನರ್ನಿರ್ಮಾಣ

Team Udayavani, Apr 21, 2019, 10:27 AM IST

21-April-3

ಹೊಸನಗರ: ಬಿದನೂರು ನಗರದಲ್ಲಿ ಸುಮಾರು ರೂ.4 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೀಲಕಂಠೇಶ್ವರ ಶಿಲಾಮಯ ದೇಗುಲ

ಹೊಸನಗರ: ಇತಿಹಾಸ ಪ್ರಸಿದ್ಧ ಬಿದನೂರು ನಗರದ ಆರಾಧ್ಯದೈವ ನೀಲಕಂಠೇಶ್ವರ ದೇಗುಲ ಮತ್ತೂಮ್ಮೆ ಪುನರ್‌ ಪ್ರತಿಷ್ಠಾಪನೆ ಮತ್ತು ಜೀರ್ಣೋದ್ಧಾರಕ್ಕೆ ಸಾಕ್ಷಿಯಾಗಲಿದೆ.

ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿರುವ ಅಂದಿನ ಬಿದನೂರು ಇಂದಿನ ನಗರ ಕೆಳದಿ ಸಾಮ್ರಾಜ್ಯದ ಮೂರನೇ ರಾಜಧಾನಿಯಾಗಿ ಗಮನ
ಸೆಳೆದಿತ್ತು. ಇಲ್ಲಿರುವ ಶ್ರೀ ನೀಲಕಂಠೇಶ್ವರ ದೇಗುಲ ಕೆಳದಿ ಅರಸರ ಆರಾಧ್ಯ ದೈವ ಎನಿಸಿಕೊಂಡಿತ್ತು. 8ನೇ ಶತಮಾನದ ದೇಗುಲ ಎನ್ನಲಾದ ಈ ದೇಗುಲವನ್ನು ಕೆಳದೆ ಅರಸರ ಕಾಲಕ್ಕಿಂತ ಮುನ್ನ ಹೊನ್ನೆಕಂಬಳಿ ಅರಸರು ಜೀರ್ಣೋದ್ಧಾರಗೊಳಿಸಿದ್ದರು. ನೀಲಕಂಠೇಶ್ವರ ದೇಗುಲ ಬಿರುಕು ಬಿಟ್ಟು ಶಿಥಿಲಾವಸ್ಥೆಗೆ ತಲುಪಿದ್ದ ಕಾರಣ ಭಕ್ತರು ಆತಂಕಕ್ಕೊಳಗಾಗಿದ್ದರು. ಅಂದಿನಿಂದ ಇಂದಿನವರೆಗೂ ಅವಿನಾಭಾವ ಸಂಬಂಧ ಹೊಂದಿರುವ ಶೃಂಗೇರಿ ಜಗದ್ಗುರುಗಳ
ಆದೇಶ ಮತ್ತು ಸಹಾಯದೊಂದಿಗೆ ಮತ್ತೆ ಜೀರ್ಣೋದ್ಧಾರಕ್ಕೆ ನೀಲಕಂಠೇಶ್ವರ ದೇಗುಲ ಸಾಕ್ಷಿಯಾಗಲಿದೆ.

ಸುಮಾರು 4 ಲಕ್ಷ ವೆಚ್ಚದಲ್ಲಿ ದೇಗುಲ ನಿರ್ಮಾಣ ಕಾರ್ಯ: ಶೃಂಗೇರಿ ಪೀಠ ಮತ್ತು ಭಕ್ತರ ಸಹಕಾರದೊಂದಿಗೆ ಸುಮಾರು 4 ಲಕ್ಷ ವೆಚ್ಚದಲ್ಲಿ ಪುನರ್‌ನಿರ್ಮಾಣ ಕಾರ್ಯ ನಡೆಯುತ್ತಿದೆ. ಈಗಾಗಲೇ 3 ಕೋಟಿ ಹಣ ವೆಚ್ಚ ಮಾಡಲಾಗಿದೆ. ಇನ್ನು ಒಂದು ಕೋಟಿ ಹಣದ ಅಗತ್ಯವಿದೆ. ಶೃಂಗೇರಿ
ಪೀಠದ ಆಸ್ಥಾನ ಸ್ಥಪತಿ ಶಿಲ್ಪರತ್ನಂ ಜಿ.ಶಂಕರ ಸ್ಥಪತಿ ಮತ್ತು ಶ್ರೀಶಂಕರ ಶಿಲ್ಪಕಲಾ ಶಾಲಾ ನೇತೃತ್ವದಲ್ಲಿ ವಿಮಾನ ಗೋಪುರ ಶೈಲಿಯಲ್ಲಿ ಸಂಪೂರ್ಣ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ.

ಏ.24 ರಿಂದ ಜೀರ್ಣೋದ್ಧಾರ ಕಾರ್ಯಕ್ರಮ
8ನೇ ಶತಮಾನದ ಬಿದನೂರು ನಗರದ ನೀಲಕಂಠೇಶ್ವರ ದೇವಸ್ಥಾನದ ಪುನರ್ನಿರ್ಮಾಣ, ಪ್ರತಿಷ್ಠಾಪನಾ ಮಹೋತ್ಸವವು ಶೃಂಗೇರಿ ಶ್ರೀಗಳ ಸಾನ್ನಿಧ್ಯದಲ್ಲಿ ಏ.24ರಿಂದ 30ತನಕ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗೋಳಿಮನೆ ಗೋಪಾಲ ಉಡುಪ ತಿಳಿಸಿದ್ದಾರೆ. ಬಿದನೂರು ನಗರ ಆಳಿದ ಕೆಳದಿ ಅರಸರ ಆರಾಧ್ಯ ದೈವ ನೀಲಕಂಠೇಶ್ವರ ದೇಗುಲವನ್ನು 14ನೇ ಶತಮಾನದಲ್ಲಿ ಜೀರ್ಣೋದ್ಧಾರ ಮಾಡಲಾಗಿತ್ತು. ಈಗ ಶಿಲ್ಪಿ ರತ್ನ ಶೃಂಗೇರಿ ಆಸ್ಥಾನ ಶಿಲ್ಪಿ ಜಿ. ಶಂಕರ ಸ್ಥಪತಿ ನೇತೃತ್ವದಲ್ಲಿ ಸುಮಾರು ರೂ.4 ಕೋಟಿ ವೆಚ್ಚದ ಸಂಪೂರ್ಣ ಶಿಲಾಮಯ ದೇವಸ್ಥಾನವು ಭಕ್ತರ ಕೊಡುಗೆಯಿಂದ ನಿರ್ಮಾಣ ಆಗುತ್ತಿದೆ ಎಂದು
ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶೃಂಗೇರಿಯ ಭಾರತೀ ತೀರ್ಥ ಸ್ವಾಮೀಜಿಯವರು 2015ರಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನೀಲಕಂಠೇಶ್ವರ ದೇಗುಲ ಹಾಗೂ ಶೃಂಗೇರಿ ಮಠಕ್ಕೂ ಅವಿನಾಭಾವ ಸಂಬಂಧ ಇದೆ. ಅದರಂತೆ ಅಂದು ಅವರು ನೀಡಿದ ಆದೇಶ ಹಾಗೂ ಅಪೇಕ್ಷೆಯಂತೆ ಜೀರ್ಣೋದ್ಧಾರ ಕಾರ್ಯಕ್ಕೆ ಸಂಕಲ್ಪ ಮಾಡಲಾಯಿತು ಎಂದು ಅವರು ಹೇಳಿದರು.
ಏ.24ರಂದು ಪುನರ್‌ ಪ್ರತಿಷ್ಠಾ ವಿಧಿ  ವಿಧಾನ ಆರಂಭ, ದೇವನಾಂದಿ, ಮಹಾಗಣಪತಿ ಹೋಮ, ನವಗ್ರಹ ಯಾಗ, ಮಹಾರುದ್ರಾಭಿಷೇಕ ಸಂಜೆ ಹೋಮಾದಿ ಗಳು ನಡೆಯಲಿದೆ. ಏ.25ರಂದು ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ನೀಲಕಂಠೇಶ್ವರ ದೇವರ ಪ್ರತಿಷ್ಠೆ, ಜೀವಕುಂಭ, ಅಷ್ಟಬಂಧ ಸೇಚನ, ಶಂಕರೇಶ್ವರ
ದೇವರ ಅಷ್ಟಬಂಧ ಪ್ರತಿಷ್ಠಾಪನೆ. ಸಂಜೆ 108 ಬ್ರಹ್ಮ ಕಲಶ ಸ್ಥಾಪನೆ, ಶ್ರೀ ಭಾರತೀ ತೀರ್ಥಸಭಾಭವನ ಉದ್ಘಾಟನೆ, ಶ್ರೀಗಳ ಅನುಗ್ರಹ ಭಾಷಣ ನಡೆಯಲಿದೆ ಎಂದರು.

ಏ.26ರಂದು ಶ್ರೀಗಳಿಂದ ನೀಲಕಂಠೇಶ್ವರ ಹಾಗೂ ಶಂಕರೇಶ್ವರ ದೇವರಿಗೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಮಹಾರುದ್ರ ಯಾಗದ ಪೂರ್ಣಾಹುತಿ, ಅನುಗ್ರಹ ಭಾಷಣ, ಸಾಮೂಹಿಕ ಅನ್ನಸಂತರ್ಪಣೆ
ನಡೆಯಲಿದೆ.ರಥೋತ್ಸವ ಕಾರ್ಯಕ್ರಮಗಳು ಏ.27ರಿಂದ ಆರಂಭ ಆಗಲಿದೆ. ಏ.28ರಂದು ಮನ್ಮಹಾರಥೋತ್ಸವ, ನಂತರ ರಥೋತ್ಸವ
ಸಂಬಂ ಧಿ ವಿಧಿ-  ವಿಧಾನಗಳು ನಡೆಯಲಿವೆ ಎಂದರು.

7 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಹೊರ ರಾಜ್ಯದಿಂದ ಸುಮಾರು 15 ಸಾವಿರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಾರ್ಯಕ್ರಮ ಸಾಂಗವಾಗಿ ನೆರವೇರಲು ಸುಮಾರು 15 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು. ಪ್ರತಿದಿನ ಭಜನೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

ಕುಮುದಾ ಬಿದನೂರು

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.