ನೆರೆ ಹೊರೆ ತಗ್ಗಿಸಿದ ಅಗ್ನಿಶಾಮಕ ದಳ!

•ಜನ-ಜಾನುವಾರುಗಳಿಗೆ ಮರುಜನ್ಮ•ನೆರೆ ಪೀಡಿತ ಪ್ರದೇಶಗಳಲ್ಲಿ ಹಗಲಿರುಳ ಕಾರ್ಯಾಚರಣೆ

Team Udayavani, Aug 19, 2019, 12:15 PM IST

19-Agust-18

ಶಿವಮೊಗ್ಗ: ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆಯಲ್ಲಿ ತೊಡಗಿದ್ದ ಅಗ್ನಿಶಾಮಕ ದಳ.

ವಿಶೇಷ ವರದಿ
ಶಿವಮೊಗ್ಗ:
ಎಂದೂ ಕಾಣದ ಮಳೆಯಿಂದ ಇಡೀ ಶಿವಮೊಗ್ಗ ಜಿಲ್ಲೆಯೇ ನರಕಸದೃಶವಾಗಿತ್ತು. ಮಳೆ ನೀರು ರಾತ್ರೋರಾತ್ರಿ ಮನೆಗಳಿಗೆ ನುಗ್ಗಿ ಜನ ರಸ್ತೆ, ನೆಲ ಕಾಣದೇ ಆತಂಕಗೊಂಡಿದ್ದರು. ಇಂತಹ ಸಂದರ್ಭದಲ್ಲಿ ನೆರವಾಗಿದ್ದೆ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್‌, ಪೊಲೀಸ್‌, ಮೆಸ್ಕಾಂ, ಅರಣ್ಯ ಹಾಗೂ ಇತರೆ ಇಲಾಖೆಗಳ ಸಿಬ್ಬಂದಿ.

ಅಗ್ನಿಶಾಮಕ ದಳ ಎಂದರೆ ಬೆಂಕಿ ನಂದಿಸುವುದಷ್ಟೇ ಎಂದು ಬಹುತೇಕರು ತಿಳಿದಿದ್ದಾರೆ. ಆದರೆ ಅವರಲ್ಲೊಬ್ಬ ಈಜುಗಾರ, ಸಾಹಸಿ ಇದ್ದಾನೆ ಎಂಬುದು ಬಹುತೇಕರಿಗೆ ತಿಳಿದಿಲ್ಲ. ಶಿವಮೊಗ್ಗ ಅಗ್ನಿಶಾಮಕ ದಳವು ನೆರೆ ಸಂದರ್ಭದಲ್ಲಿ ಹಗಲು- ರಾತ್ರಿ, ನೀರು ಪ್ರವಾಹ ಲೆಕ್ಕಿಸದೆ ಕೆಲಸ ಮಾಡಿದೆ. 991 ಮಂದಿಯನ್ನು ರಕ್ಷಣೆ ಮಾಡಿರುವುದೇ ಇದಕ್ಕೆ ಉದಾಹರಣೆ. ಶಿವಮೊಗ್ಗದ ಅಣ್ಣಾ ನಗರ, ಆರ್‌.ಎಂ.ಎಲ್. ನಗರ, ಶಾಂತಮ್ಮ ಲೇಔಟ್, ಗುಡ್ಡೇಕಲ್, ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗುಂಡಪ್ಪ ಶೆಡ್‌, ಮಲ್ಲೇಶ್ವರ ನಗರ, ವಿದ್ಯಾನಗರ, ಶಾದಿ ಮಹಲ್, ನ್ಯೂ ಮಂಡ್ಲಿ, ಭಾರತಿ ಕಾಲೋನಿ, ನಿಸರ್ಗ ಲೇಔಟ್ ಜಲಾವೃತವಾಗಿ, ಮನೆಯಿಂದ ಜನರು ಹೊರಗೆ ಬಾರದ ಸ್ಥಿತಿಗೆ ತಲುಪಿದ್ದರು. ಮಳೆ ಪ್ರಮಾಣ ಹೆಚ್ಚಳವಾಗಿ ನೀರಿನ ಮಟ್ಟ ಏರಿಕೆ ಆಗಿದ್ದರೆ ಇಲ್ಲಿ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಆದರೆ ಅಷ್ಟರಲ್ಲಿ ಕಾರ್ಯಾಚರಣೆಗೆ ಇಳಿದ ಅಗ್ನಿಶಾಮಕ ಸಿಬ್ಬಂದಿ ಇಲ್ಲಿಂದ 831 ಜನರನ್ನು ಕಾಪಾಡಿದರು. ಭದ್ರಾವತಿಯ ಹೊಳೆಹೊನ್ನೂರಿನಲ್ಲಿ 55 ಜನ, ಸಾಗರದ ನೀರಕೊಡು ಬಡಾವಣೆ, ಗಣಪತಿ ಕೆರೆ ಬಳಿ, ವಿನೋಬನಗರ, ದುಗಾಂರ್ಬಾ ಸರ್ಕಲ್, ಸೊರಬ ರಸ್ತೆಯಲ್ಲಿ 9 ಜನ, ಸೊರಬ ತಾಲೂಕಿನ ಲಕ್ಕವಳ್ಳಿ, ಮೂಗೂರು, ಹಾಯ್‌ಹೊಳೆ, ನೆಲ್ಲಿಕೇರಿ ಗ್ರಾಮಗಳಲ್ಲಿ 34 ಜನ, ತೀರ್ಥಹಳ್ಳಿಯ ಆರಗ, ಇಂದಾವರ, ಕನ್ನಂಗಿ ಬಳಿಯ ಅತ್ತಿಗದ್ದೆ, ಶಿಲಕುಣಿ, ಮಹಿಷಿ ಗ್ರಾಮಗಳಲ್ಲಿ 40 ಜನ, ಹೊಸನಗರದ ಸೂಡೂರು ಗ್ರಾಮದಲ್ಲಿ 22 ಜನರನ್ನು ಅಗ್ನಿಶಾಮಕ ಸಿಬ್ಬಂದಿ ಕಾಪಾಡಿದ್ದಾರೆ. ಇನ್ನು, ಜಿಲ್ಲಾದ್ಯಂತ 43 ಪ್ರಾಣಿಗಳನ್ನು ಅಗ್ನಿಶಾಮಕ ಸಿಬ್ಬಂದಿಯೇ ರಕ್ಷಣೆ ಮಾಡಿ, ವಾರಸುದಾರರಿಗೆ ತಲುಪಿಸಿದ್ದಾರೆ. ಶಿವಮೊಗ್ಗದ 60 ಅಗ್ನಿಶಾಮಕ ಸಿಬ್ಬಂದಿ ಹಗಲು ರಾತ್ರಿ ಅನ್ನದೆ ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ. ಮನೆ, ಕುಟುಂಬನ್ನಲ್ಲದೆ ಜನರ ರಕ್ಷಣೆ ಮಾಡಿದ್ದಾರೆ. ಜಿಲ್ಲೆಯ 60 ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಅಗ್ನಿಶಾಮಕ ಸಿಬ್ಬಂದಿಗೆ ಇನ್ನಷ್ಟು ಸೌಲಭ್ಯ ಕೊಟ್ಟರೆ ನಮ್ಮ ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡ ಬರುವುದೇ ಬೇಡ. ಎಲ್ಲವನ್ನೂ ಅವರೇ ನಿಭಾಯಿಸಿ, ಜನರ ಪ್ರಾಣ ಉಳಿಸುತ್ತಾರೆ. ತುಂಬಾ ಚೆನ್ನಾಗಿ ಇಡೀ ಜಿಲ್ಲೆಯಲ್ಲಿ ಕೆಲಸ ಮಾಡಿದ್ದಾರೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಿಎಂ ಬಿ.ಎಸ್‌. ಯಡಿಯೂರಪ್ಪ ಮುಂದೆ ಅಗ್ನಿಶಾಮಕ ದಳದ ಕಾರ್ಯವನ್ನು ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದರು.

ಗೋರಕ್ಷಕರಾದ ಪೊಲೀಸ್‌ ಅರಣ್ಯ ಇಲಾಖೆ ಸಿಬ್ಬಂದಿ
ರಾತ್ರೋರಾತ್ರಿ ನದಿಮಟ್ಟ ಏರಿಕೆಯಾಗಿ ಮನೆ-ಮಠಗಳಿಗೆಲ್ಲ ನೀರು ನುಗ್ಗಿತ್ತು. ಮನುಷ್ಯರ ನೆರವಿಗಾಗಿ ನೂರಾರು ಜನ ಬಂದಿದ್ದರು. ಆದರೆ ಮೂಕಪ್ರಾಣಿಗಳು ಮಾತ್ರ ಜೀವಬಿಗಿ ಹಿಡಿದು ವೇದನೆ ಅನುಭವಿಸುತ್ತಿದ್ದವು. ಇಂತಹ ಸಂದರ್ಭದಲ್ಲಿ ರಕ್ಷಣೆಗೆ ಧಾವಿಸಿದ್ದೇ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ. ಆ. 10 ರಂದು ಶಿವಮೊಗ್ಗದ ಮಹಾವೀರ ಜೈನ್‌ ಗೋಶಾಲೆ ಜಲಾವೃತವಾಗಿತ್ತು. ಹಾಗಾಗಿ ಗೋ ಶಾಲೆ ಸಿಬ್ಬಂದಿ ಅಲ್ಲಿಗೆ ತೆರಳಲು ಅಸಾಧ್ಯವಾಗಿತ್ತು. ಗೋ ಶಾಲೆಯೊಳಗೆ ನೀರು ನುಗ್ಗಿ, ಇಡೀ ರಾತ್ರಿ ನೀರಿನಲ್ಲಿ ಕಳೆದ ಗೋವುಗಳು, ಕೂಗಲು ಆರಂಭಿಸಿದ್ದವು. ಆದರೆ ಗೋವುಗಳ ಧ್ವನಿ ಕೇಳಿದರೂ ರಕ್ಷಣೆ ಮಾಡಲು ಯಾರಿಂದಲೂ ಸಾಧ್ಯವಾಗಿರಲಿಲ್ಲ. ವಿದ್ಯಾನಗರ ಜಲಾವೃತ ಪ್ರದೇಶದಲ್ಲಿ ಜನರ ಸುರಕ್ಷತೆಯ ಬಂದೋಬಸ್ತ್ ಡ್ಯೂಟಿಗೆ ಬಂದಿದ್ದ ಕೋಟೆ ಪಿಎಸ್‌ಐ ಮತ್ತು ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ವಿಚಾರ ತಿಳಿಯುತ್ತಿದ್ದಂತೆ, ಗೋವುಗಳ ರಕ್ಷಣಾ ಕಾರ್ಯಕ್ಕೆ ಧುಮುಕಿದರು. ಜಲಾವೃತ ಗೋಶಾಲೆಗೆ ತಲುಪಿ, ನೀರಿನಲ್ಲಿದ್ದ 200ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಿದರು. ಗೋಶಾಲೆಯಲ್ಲಿಯೇ ಸುರಕ್ಷಿತ ಜಾಗಕ್ಕೆ ಅವುಗಳನ್ನು ಸ್ಥಳಾಂತರಿಸಿದರು. ಗೋಶಾಲೆಯಲ್ಲಿದ್ದ ಮೇವು ತಂದು ಗೋವುಗಳಿಗೆ ಹಾಕಿದರು. ಇಡೀ ರಾತ್ರಿ ನೀರಿನಲ್ಲಿ ಕಳೆದಿದ್ದರಿಂದ ಸಮಾರು 15 ಗೋವುಗಳು ಮೃತಪಟ್ಟಿದ್ದವು. ಇನ್ನಷ್ಟು ಗೋವುಗಳ ಸ್ಥಿತಿ ಗಂಭೀರವಾಗಿತ್ತು. ಹಾಗಾಗಿ ವೈದ್ಯರನ್ನು ಕರೆಸಿ ಪೊಲೀಸರೇ ಅವುಗಳಿಗೆ ಚಿಕಿತ್ಸೆ ಕೊಡಿಸಿದರು. ಕೋಟೆ ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.