ಯಕ್ಪಗಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಶೋಗಾಥೆ

ಜ್ಯೋತಿ ಶಾಸ್ತ್ರಿ ರಚಿಸಿರುವ "ನರೇಂದ್ರ ವಿಜಯ' ಯಕ್ಷಗಾನ ಕೃತಿ ತೆರೆಗೆ ಬರಲು ಸಿದ್ಧ | ಜನವರಿ 5ರಂದು ಮಂಗಳೂರಿನಲ್ಲಿ ಮೊದಲ ಪ್ರದರ್ಶನ

Team Udayavani, Dec 30, 2019, 10:55 AM IST

30-December-8

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಜೀವನ ಯಶೋಗಾಥೆ ತಲೆ ತಲಾಂತರಗಳಿಗೆ ಉಳಿಯಬೇಕೆಂಬ ದೃಷ್ಟಿಯಿಂದ ಅಭಿಮಾನಿಯೊಬ್ಬರು ಯಕ್ಷಗಾನ ಪ್ರಸಂಗ “ನರೇಂದ್ರ ವಿಜಯ’ ಕೃತಿ ರಚಿಸಿದ್ದರು. ಈಗ ಅದು ತೆರೆ ಕಾಣಲು ಸಿದ್ಧವಾಗಿದೆ.

ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಆದಾಗಿನಿಂದ ಇಲ್ಲಿವರೆಗಿನ ಪ್ರಮುಖ ಘಟನೆಗಳನ್ನು ಯಕ್ಷಗಾನದಲ್ಲಿ ಅಳವಡಿಸಲಾಗಿದೆ. ಅಮಿತ್‌ ಶಾ “ವಿಜಯ’ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ತೀರ್ಥಹಳ್ಳಿ ತಾಲೂಕಿನ ಯಕ್ಷಗಾನ ಕಲಾವಿದೆ ಜ್ಯೋತಿ ಶಾಸ್ತ್ರಿ ಕೃತಿ ರಚಿಸಿದ್ದಾರೆ.

ಅವರ ಮಾವ ದಿ| ಚಿದಂಬರ ಶಾಸ್ತ್ರಿಗಳು ಸ್ವಾತಂತ್ರ್ಯ ಹೋರಾಟಗಾರ ಹಾಗೂ ಬಾಬ್ರಿ ಧ್ವಂಸ ಪ್ರಕರಣದಲ್ಲಿ ಎಲ್‌.ಕೆ.ಅಡ್ವಾಣಿ ಬಂಧನ ಖಂಡಿಸಿ ಚಳವಳಿ ನಡೆಸಿದ್ದರಿಂದ 14 ದಿನ ಜೈಲು ವಾಸ ಅನುಭವಿಸಿದ್ದರು. ಕಳೆದ ನ.26ರಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಕೃತಿ ಲೋಕಾರ್ಪಣೆಗೊಳಿಸಿದ್ದರು. ಜ್ಯೋತಿ ಅವರ ತಂಡವು ಜ.5ರಂದು ಮಂಗಳೂರಿನ ಕೊಡಿಯಾಲ್‌ಬೈಲ್‌ ನಲ್ಲಿ ಮೊದಲ ಪ್ರದರ್ಶನ ನೀಡಲಿದೆ.

ಕೃತಿ ವಿಶೇಷತೆ ಏನು?: ನರೇಂದ್ರ ಮೋದಿ ಗುಜರಾತ್‌ ಸಿಎಂ ಆದಾಗಿನಿಂದ ಇಲ್ಲಿವರೆಗಿನ ಪ್ರಮುಖ ಘಟನಾವಳಿಗಳನ್ನು ಯಕ್ಷಗಾನಕ್ಕೆ ಪೂರಕವಾಗಿ ಕೃತಿಯನ್ನಾಗಿ ರಚಿಸಲಾಗಿದೆ. ಎರಡೂವರೆ ಗಂಟೆ ಪ್ರದರ್ಶನದಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದು, ಆ ಸಂದರ್ಭದಲ್ಲಿ ತಮ್ಮ ಬಲಗೈ ಭಂಟ ಜೈಲಿಗೆ ಹೋಗಿದ್ದನ್ನು ದುಃ ಖದ ಸಂದರ್ಭವನ್ನಾಗಿ ಹಾಗೂ ಜೈಲಿನಲ್ಲಿ ಕೊಟ್ಟ ಕಷ್ಟಗಳು, ನಂತರ ಜೈಲಿನಿಂದ ಹೊರಬಂದ
ಸಂದರ್ಭವನ್ನು ಸಂತೋಷದ ಕ್ಷಣವನ್ನಾಗಿ ತೋರಿಸಿದ್ದಾರೆ. ಯಕ್ಷಗಾನದಲ್ಲೂ ಅದೇ ರೀತಿ ಮೂಡಿ ಬರಲಿದೆ.

ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರದ ಕಡಿವಾಣಕ್ಕೆ ಕೈಗೊಂಡ ನೋಟ್‌ ಬ್ಯಾನ್‌, ತ್ರಿವಳಿ ತಲಾಖ್‌ ಮಸೂದೆ ಜಾರಿ, ಕೇದಾರನಾಥಕ್ಕೆ ಭೇಟಿ ನೀಡಿದ್ದು (ಈ ಸಂದರ್ಭದಲ್ಲಿ ಶಿವ ಪ್ರತ್ಯಕ್ಷನಾಗುವ ಸನ್ನಿವೇಶ ಕೂಡ ಇದೆ). ಆರ್ಟಿಕಲ್‌ 370 ರದ್ದು ಮಾಡಿದ್ದು, ಇದರಿಂದ ಉಂಟಾದ ಪರಿಣಾಮಗಳು, ಬಾಲಾಕೋಟ್‌ ಉಗ್ರ ಶಿಬಿರದ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ಹೀಗೆ ಅನೇಕ ವಿಷಯಗಳು ಪ್ರಸಂಗದಲ್ಲಿ ಬರಲಿವೆ. ಸರ್ಜಿಕಲ್‌ ಸ್ಟ್ರೈಕ್‌ ವಿಷಯವನ್ನು ಮಾತಿನಲ್ಲಿ ಹೇಳಲಿದ್ದಾರೆ.

ಹೀಗೆ ಹಲವು ದಿನಗಳ ಪರಿಶ್ರಮದಿಂದ ಅಂತಿಮ ರೂಪ ಕೊಡಲು ಪರಿಶ್ರಮ ಹಾಕುತ್ತಿದ್ದಾರೆ ಕಲಾವಿದೆ ಜ್ಯೋತಿ ಶಾಸ್ತ್ರಿ. ನಿಜ ಜೀವನದಲ್ಲಿ ಚಂದ್ರಯಾನ-2 ಯೋಜನೆಯು ನಿಗದಿತ ಗುರಿ ತಲುಪದಿದ್ದರೂ ಅದೊಂದು ಐತಿಹಾಸಿಕ ಸಾಧನೆ ಹಿನ್ನೆಲೆಯಲ್ಲಿ ತಮ್ಮ ಕೃತಿಯಲ್ಲಿ ಯೋಜನೆಯನ್ನು ಯಶಸ್ವಿಗೊಳಿಸಿರುವುದು ಮತ್ತೊಂದು ವಿಶೇಷ.

ಮೋದಿ ಪಾತ್ರದಲ್ಲಿ ಜ್ಯೋತಿ, ಶಾ ಪಾತ್ರದಲ್ಲಿ ವರದಾ
ಯಕ್ಷಗಾನ ಕಲಾವಿದೆಯಾಗಿರುವ ಜ್ಯೋತಿ ಚೊಚ್ಚಲ ಕೃತಿಯಾಗಿ “ನರೇಂದ್ರ ವಿಜಯ’ ರಚಿಸಿದ್ದಲ್ಲದೇ ಆ ಪಾತ್ರವನ್ನು ತಾವೇ ಖುದ್ದು ನಿರ್ವಹಿಸುತ್ತಿದ್ದಾರೆ. ಅಮಿತ್‌ ಶಾ ಪಾತ್ರವನ್ನು ಶಿವಮೊಗ್ಗದ ವರದಾ ಎಂಬುವರು ನಿರ್ವಹಿಸಲಿದ್ದಾರೆ. ಇವರ ಜತೆ ತ್ರಿವಳಿ ತಲಾಖ್‌ನಲ್ಲಿ ಅಪ್ಪ, ಮಗಳ ಪಾತ್ರ, ಬಾಲಾಕೋಟ್‌ ದಾಳಿ ವೇಳೆ ಸೈನಿಕರು, ಶಿವ ಪ್ರತ್ಯಕ್ಷನಾಗುವುದು, ನೋಟ್‌ ಬ್ಯಾನ್‌ ಕುರಿತು ಓರ್ವ ಕಲಾವಿದ ಸೇರಿ 7 ಮಂದಿ ವಿವಿಧ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.

ನರೇಂದ್ರ ಮೋದಿ ಮಹಾನ್‌ ದೇಶಭಕ್ತ, ಶಿವಭಕ್ತ. ಅವರ ಕುರಿತು ಕೃತಿ ರಚಿಸಿದ್ದೇ ನನ್ನ ಪುಣ್ಯ. ಈಗ ಅವರ ಪಾತ್ರವನ್ನು ನಾನೇ ನಿರ್ವಹಿಸುತ್ತಿರುವುದು ಪೂರ್ವ ಜನ್ಮದ ಪುಣ್ಯವೆಂದೇ ಭಾವಿಸಿದ್ದೇನೆ. ಆ ಸಂತೋಷವನ್ನು ಮಾತುಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ.
ಜ್ಯೋತಿ ಶಾಸ್ತ್ರಿ,
ಯಕ್ಷಗಾನ ಕಲಾವಿದೆ

ಶರತ್‌ ಭದ್ರಾವತಿ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.