ಹಾಸ್ಟೆಲ್ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ
ಹಾಸ್ಟೆಲ್ ವ್ಯವಸ್ಥೆಗೆ ಪಟ್ಟು•ಜಿಲ್ಲಾಧಿಕಾರಿಗಳ ಮನವೊಲಿಕೆಗೂ ಜಗ್ಗದ ಪ್ರತಿಭಟನಾಕಾರರು
Team Udayavani, Aug 24, 2019, 12:52 PM IST
ಶಿವಮೊಗ್ಗ:ಹಾಸ್ಟೆಲ್ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು.
ಶಿವಮೊಗ್ಗ: ಹಾಸ್ಟೆಲ್ ಸ್ಥಳಾಂತರ ವಿರೋಧಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರಸ್ತೆ ತೆರವು ಮಾಡುವಂತೆ ಪೊಲೀಸರು ಎಷ್ಟೇ ಹೇಳಿದರೂ ಕೇಳಲಿಲ್ಲ. ಈ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ತಳ್ಳಾಟ- ನೂಕಾಟ ನಡೆಯಿತು.
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾನಗರದಲ್ಲಿ ನಡೆಯುತ್ತಿದ್ದು ಇತ್ತೀಚೆಗೆ ನೆರೆ ಹಾವಳಿಯಿಂದಾಗಿ ಹಾಸ್ಟೆಲ್ ಕಟ್ಟಡಕ್ಕೆ ನೀರು ನುಗ್ಗಿದ್ದರಿಂದ ಅಲ್ಲಿನ ವಿದ್ಯಾರ್ಥಿಗಳನ್ನು ನವುಲೆಯಲ್ಲಿರುವ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಹೀಗೆ ಸ್ಥಳಾಂತರಿಸುವಾಗ ವಿದ್ಯಾರ್ಥಿಗಳ ಗಮನಕ್ಕೆ ತಂದಿರಲಿಲ್ಲ. ಸಹ್ಯಾದ್ರಿ ಕಾಲೇಜು ಸೇರಿದಂತೆ ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗಿತ್ತು. ಶುಕ್ರವಾರ ವಿದ್ಯಾರ್ಥಿಗಳು ತಮ್ಮ ಲಗೇಜ್ ಸಮೇತ ದಿಢೀರ್ ಜಿಲ್ಲಾಧಿಕಾರಿಗಳ ಎದುರು ಇರುವ ರಸ್ತೆಯಲ್ಲಿ ಪ್ರತಿಭಟನೆಗಿಳಿದರು. ಇದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರೂ ಕೇಳದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದರು. ಕೊನೆಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ. ಶಾಂತರಾಜು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಿದರು. ಈಗಲೇ ನಮಗೆ ಹಾಸ್ಟೆಲ್ ವ್ಯವಸ್ಥೆ ಆಗಬೇಕು. ಅಲ್ಲಿವರೆಗೆ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದರು. ಕೊನೆಗೆ ವಿದ್ಯಾರ್ಥಿಗಳು ರಸ್ತೆ ಬಿಟ್ಟು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು