ಗೋ ಸೇವೆಯಿಂದ ದೇಶ ಸುಭಿಕ್ಷ

•ಜೀವನದಲ್ಲಿ ಧರ್ಮಕ್ಕೆ ಪ್ರಾಧಾನ್ಯತೆ ನೀಡಿ: ವಿಧುಶೇಖರ ಸ್ವಾಮೀಜಿ

Team Udayavani, May 26, 2019, 4:13 PM IST

26-May-31

ಶಿವಮೊಗ್ಗ: ಶ್ರೀಗಂಧ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಧುಶೇಖರ ಶ್ರೀಗಳು ಆಶೀರ್ವಚನ ನೀಡಿದರು.

ಶಿವಮೊಗ್ಗ: ಸಂಸ್ಕಾರ ಅಳವಡಿಸಿಕೊಳ್ಳಿ. ಧರ್ಮವನ್ನು ಆಚರಿಸುತ್ತಾ ಧಾರ್ಮಿಕರಾಗಿ, ಸಜ್ಜನರಾಗಿ. ಭಗವಂತ ಮತ್ತು ಗುರುವಿನಲ್ಲಿ ನಂಬಿಕೆ ಇಟ್ಟು ವ್ಯಸನಮುಕ್ತ ಜೀವನವನ್ನು ಪಾಲಿಸಿ. ಗುರು-ಹಿರಿಯರ-ಗೋವಿನ ಸೇವೆ ಮಾಡಿ. ಗೋ ಸೇವೆಯಿಂದ ದೇಶ ಸುಭಿಕ್ಷವಾಗುತ್ತದೆ ಎಂದು ಶೃಂಗೇರಿ ಪೀಠದ ಜಗದ್ಗುರು ವಿಧುಶೇಖರ ಮಹಾಸ್ವಾಮೀಜಿ ತಿಳಿಸಿದರು.

ಶುಕ್ರವಾರ ಕುವೆಂಪು ರಂಗಮಂದಿರದಲ್ಲಿ ಶ್ರೀಗಂಧ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಯಾರನ್ನು ಗೌರವಿಸಬೇಕೋ ಅವರನ್ನು ಗೌರವಿಸದಿದ್ದರೆ, ಶ್ರೇಯಸ್ಸಿಗೆ ಧಕ್ಕೆ ಬರುತ್ತದೆ. ಭಗವಂತ ಗುರು ಮತ್ತು ಸಮಾಜ ಸೇವೆಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ಧರ್ಮ ಮತ್ತು ಸಂಸ್ಕೃತಿ ಉಳಿಸುವ ಕೆಲಸ ಮಾಡಬೇಕು. ತ್ರಿಕರಣ ಶುದ್ಧಿಯಿಂದ ನಾವು ಕೆಲಸ ಮಾಡಬೇಕು ಎಂದರು.

ಜೀವನದಲ್ಲಿ ಧರ್ಮಕ್ಕೆ ಪ್ರಾಧಾನ್ಯತೆ ಕೊಡಬೇಕು. ಧರ್ಮದಿಂದಲೇ ಎಲ್ಲವೂ ತಾನಾಗಿ ಬರುತ್ತದೆ. ಯಾವುದನ್ನು ಮಾಡುವುದರಿಂದ ಒಳ್ಳೆಯದಾಗುತ್ತದೆಯೋ ಅದೇ ಧರ್ಮ. ನಾವು ಯಾವುದೇ ಕೆಲಸ ಮಾಡುವ ಮುನ್ನ ಅದರ ಅರ್ಥ ತಿಳಿದುಕೊಳ್ಳಬೇಕು. ಆನಂತರ ಆಚರಣೆ ಮಾಡಬೇಕು. ಧರ್ಮವನ್ನು ತಿಳಿದುಕೊಂಡರೆ ಆಚರಣೆಗೆ ಅನುಕೂಲವಾಗುತ್ತದೆ. ಅಧರ್ಮವನ್ನು ತಿಳಿದುಕೊಂಡರೆ, ದುರ್ಮಾರ್ಗವನ್ನು ಬಿಡಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಧರ್ಮವನ್ನು ಆಚರಿಸುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳುವುದು ಅವಶ್ಯ. ಬಾಲ್ಯದಿಂದಲೇ ಒಳ್ಳೆಯ ಮಾರ್ಗದಲ್ಲಿ ಸಾಗುವ ಸಂಸ್ಕಾರವನ್ನು ಪಾಲಕರು ನೀಡಬೇಕು. ಕುಟುಂಬದ ಹಿರಿಯರು ಮತ್ತು ಗುರುಗಳಿಂದ ಈ ಸಂಸ್ಕಾರ ಪಡೆಯಬೇಕು. ಗ್ರಂಥಗಳಿಂದಲೂ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ಸಿಗುತ್ತದೆ ಎಂದರು.

ಈ ದೇಶದ ಸಂಸ್ಕೃತಿ ಬಹುದೊಡ್ಡದು. ಇದನ್ನು ಎಲ್ಲಾ ಗ್ರಂಥಗಳು ಸಾರುತ್ತಿವೆ. ವಿದೇಶದವರು ಬಾಯಿ ತುಂಬಿ ಹೊಗಳುತ್ತಿದ್ದಾರೆ. ಸಂಸ್ಕಾರ, ಸಂಸ್ಕೃತಿ ಮತ್ತು ಧರ್ಮಾಚರಣೆಯಲ್ಲಿ ಭಾರತ ದೊಡ್ಡದು. ಆದರೆ, ಉಳಿದ ದೇಶಗಳು ಅರ್ಥ ಮತ್ತು ಕಾಮಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಇದು ಭಾರತ ಮತ್ತು ಇತರ ದೇಶಗಳಿಗಿರುವ ವ್ಯತ್ಯಾಸ ಎಂದು ಹೇಳಿದರು.

ಸಂಸ್ಕಾರವಿದ್ದಲ್ಲಿ ಎಲ್ಲಾ ಒಳ್ಳೆಯ ಗುಣಗಳು ತಾನಾಗಿಯೇ ಬರುತ್ತವೆ. ವ್ಯಕ್ತಿಯು ಇತರರಿಂದಲೇ ಒಳ್ಳೆಯ ಮಾತುಗಳನ್ನು ತೆಗೆದುಕೊಳ್ಳುತ್ತಾನೆ. ತಪ್ಪು ಎಂದು ಗೊತ್ತಾದರೆ ಮತ್ತೆ ತಪ್ಪು ಮಾಡುವುದಿಲ್ಲ ಎಂದು ಹೇಳಿದರು.

ಶೃಂಗೇರಿ ಪೀಠದ ಧರ್ಮಾಧಿಕಾರಿ ವಿ.ಎಸ್‌. ಗೌರಿಶಂಕರ್‌ ಮಾತನಾಡಿ, ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಿಕೊಳ್ಳುವ ಅವಶ್ಯಕತೆ ಈಗ ಹೆಚ್ಚಿದೆ. ಹೊಸ-ಹೊಸ ವಿದ್ಯೆಗಳು ನಮ್ಮನ್ನು ಮೋಹಗೊಳಿಸುತ್ತಿವೆ. ಅದರಿಂದ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯನ್ನು ನಾವು ಹೊಂದಿದ್ದೇವೆ. ಆದರೆ, ಇದು ಸುಳ್ಳು. ಸಮಾಜದಲ್ಲಿ ಹಿರಿಯರು ಒಳ್ಳೆಯ ಸಂಸ್ಕೃತಿ ಮತ್ತು ವಾತಾವರಣವನ್ನು ಬೆಳೆಸುತ್ತಿದ್ದಾರೆ. ಇದನ್ನು ಬೆಳೆಸಿಕೊಂಡು ಹೋಗುವುದು ವ್ಯಕ್ತಿ ಮತ್ತು ಸಂಘ-ಸಂಸ್ಥೆಗಳ ಕೆಲಸ ಎಂದರು.

ಶಾಸಕ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ನಗರದಲ್ಲಿ ಸಾಂಸ್ಕೃತಿಕ ಕಂಪನ್ನು ಹರಡುವುದು ಮತ್ತು ಪ್ರಜ್ಞಾವಂತರನ್ನು ಪುರಸ್ಕರಿಸುವುದು ತಮ್ಮ ಸಂಸ್ಥೆಯ ಉದ್ದೇಶ. ಸಮಾಜವನ್ನು ಜಾಗೃತಿಗೊಳಿಸಿ ಜಾತ-ಮತ ಭೇದವಿಲ್ಲದೆ ಕಾರ್ಯಕ್ರಮವನ್ನು ನೀಡಲಾಗುತ್ತದೆ. ಇತ್ತೀಚೆಗೆ ದೇವರು ಜಾತಿಗೆ ಸೀಮಿತವಾಗುತ್ತಿರುವ ಸಂದರ್ಭದಲ್ಲಿ ನಾವೆಲ್ಲರೂ ಒಂದೇ ಎನ್ನುವುದನ್ನು ಸಾಧಿಸಿ ತೋರಿಸುವ ಕೆಲಸವನ್ನು ತಮ್ಮ ಸಂಸ್ಥೆ ಮಾಡುತ್ತಿದೆ ಎಂದರು.

ಶ್ರೀಗಂಧದ ಕಾರ್ಯಕ್ರಮಕ್ಕೆ ವರ್ಷಕ್ಕೊಮ್ಮೆ ಬಂದು ಆಶೀರ್ವಚನ ನೀಡಬೇಕೆಂದು ಈಶ್ವರಪ್ಪ ಅವರು ಸ್ವಾಮೀಜಿ ಅವರಲ್ಲಿ ವಿನಂತಿಸಿದರು.

ಶಿವಮೊಗ್ಗದಲ್ಲಿ ಮೊನ್ನೆ ಪುನರುಜ್ಜೀವನಗೊಂಡ ಶೃಂಗೇರಿ ಶಂಕರಮಠದ ಶಾರದಾಂಬೆ, ಮಹಾಗಣಪತಿ, ಚಂದ್ರಮೌಳೇಶ್ವರ ಮತ್ತು ಶಂಕರಾಚಾರ್ಯರ ವಿಗ್ರಹವನ್ನು ಕೆ.ಎಸ್‌. ಈಶ್ವರಪ್ಪ ಅವರು, ನೀಡಿರುವ ಹಿನ್ನೆಲೆಯಲ್ಲಿ ಅವರನ್ನು ಮಠದ ವತಿಯಿಂದ ಶಾಲು ಹೊದಿಸಿ ಫಲಮಂತ್ರಾಕ್ಷತೆ ನೀಡಿ ಗೌರವಿಸಲಾಯಿತು. ಇದೇ ರೀತಿ ಕಾರ್ಯಕ್ರಮಕ್ಕೆ ಆಗಮಿಸಿ ಭಕ್ತರನ್ನು ಆಶೀರ್ವಚಿಸಿದ ಸ್ವಾಮೀಜಿಯವರಿಗೂ ಸಹ ಈಶ್ವರಪ್ಪ ಕುಟುಂಬದವರು ಫಲಪುಷ್ಪ ಸಮರ್ಪಿಸಿದರು. ಮಠದ ಧರ್ಮಾಧಿಕಾರಿ ಗೌರಿಶಂಕರ್‌ ಅವರನ್ನೂ ಸಹ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.