ಸ್ಮಾರ್ಟ್‌ಸಿಟಿ ಕಾಮಗಾರಿ ವಿಳಂಬ ಬೇಡ

•ಅಧಿಕಾರಿಗಳು-ಗುತ್ತಿಗೆದಾರರ ಮಧ್ಯೆ ಸಮನ್ವಯ ಕೊರತೆ: ಆರೋಪ

Team Udayavani, May 10, 2019, 1:07 PM IST

10-May-19

ಶಿವಮೊಗ್ಗ: ಸ್ಮಾರ್ಟ್‌ ಸಿಟಿ ಕಾಮಗಾರಿಗಳ ವಿಳಂಬ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು

ಶಿವಮೊಗ್ಗ: ಸ್ಮಾರ್ಟ್‌ ಸಿಟಿ ಯೋಜನೆ ಕಾಮಗಾರಿ ವಿಳಂಬ ನೀತಿ ಖಂಡಿಸಿ ಗುರುವಾರ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ರೂಪಿಸಿರುವ ಕಾಮಗಾರಿಗಳ ವಿಳಂಬ ಖಂಡಿಸಿ ಅನುಭವ ಇಲ್ಲದ ಸ್ಮಾರ್ಟ್‌ಸಿಟಿ ಇಂಜಿನಿಯರ್‌ರ ಧೋರಣೆಯಿಂದ ನಾಗರಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದ ಯೋಜನೆಗಳಲ್ಲಿ ಒಂದಾದ ಸ್ಮಾರ್ಟ್‌ಸಿಟಿ ಯೋಜನೆ 2ನೇ ಹಂತ ನಗರದಲ್ಲಿ ಅನುಷ್ಠಾನಗೊಂಡಿದೆ. ನಗರದ ನಾಗರಿಕರು, ಸ್ಥಳೀಯ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಉದ್ಯಮಿಗಳು, ವರ್ತಕರು, ಕಾರ್ಮಿಕರು, ಶಿಕ್ಷಕರು ಹೀಗೆ ಸಮಾಜದ ಅನೇಕ ವರ್ಗಗಳ ಜನ, ಸಮುದಾಯ ಸರ್ಕಾರದ ಎಲ್ಲ ಇಲಾಖೆ ಅಧಿಕಾರಿಗಳ ಸಹಾಯದಿಂದ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.

ಎಲ್ಲರೊಂದಿಗೆ ಚರ್ಚಿಸಿ ರೂಪಿಸಲಾದ ಯೋಜನೆಗಳನ್ನು ಕೈಬಿಟ್ಟು ಅದರಲ್ಲಿ ಬಹುತೇಕ ಕಾಮಗಾರಿಗಳನ್ನು ಬದಲಿಸಿ ಸ್ಮಾರ್ಟ್‌ಸಿಟಿ ಟೆಂಡರ್‌ ಕರೆಯಲಾಗಿದೆ. ಚಾನಲ್ ರಿ ಡೆವಲಪ್‌ಮೆಂಟ್ ಕಾಮಗಾರಿಯಲ್ಲಿ ಸ್ಥಳೀಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘ, ಸ್ಥಳೀಯ ಜನಪ್ರತಿನಿಧಿಗಳು ಸೇರಿ ಯೋಜನೆ ರೂಪಿಸಿದ್ದರು. ಆದರೆ ಸ್ಮಾರ್ಟ್‌ ಸಿಟಿ ಪ್ರವೇಟ್ ಲಿಮಿಟೆಡ್‌ ವತಿಯಿಂದ ಅನಾವಶ್ಯಕವಾದ 70 ಲಕ್ಷ ರೂ. ಕೆಟೆರಿಯಾ (ಹೋಟೆಲ್) ನಿರ್ಮಿಸುತ್ತಿದ್ದು, ಹಳೆಯ ಬಸ್‌ ನಿಲ್ದಾಣ ರಿ ಡೆವೆಲಪ್‌ಮೆಂಟ್‌ಗೆ ಒತ್ತು ನೀಡಿಲ್ಲ ಎಂದು ದೂರಿದರು.

ರವೀಂದ್ರನಗರದಲ್ಲಿ ಸ್ಮಾರ್ಟ್‌ಸಿಟಿ ಪ್ಯಾಕೇಜ್‌ 2-ಎ ಕಾಮಗಾರಿ ಪ್ರಾರಂಭಿಸಿ ಮನೆಗಳ ಮುಂದೆ ಚರಂಡಿ, ಕಲ್ಲುಗಳನ್ನು ಕಿತ್ತು ಯುುಡಿಜಿ ಪೈಪ್‌ಗ್ಳಿಗೆ ಡ್ಯಾಮೇಜ್‌ ಮಾಡಿ 2 ತಿಂಗಳಾದರೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಗುತ್ತಿಗೆದಾರರ ಬಳಿ ಕಾಮಗಾರಿ ವಿಳಂಬಕ್ಕೆ ಕಾರಣ ಕೇಳಿದಾಗ ಅಧಿಕಾರಿಗಳಿಂದ ಡ್ರಾಯಿಂಗ್‌ ಬಂದಿಲ್ಲ ಎಂದು ಹೇಳುತ್ತಾರೆ. ಅಧಿಕಾರಿಗಳು ಗುತ್ತಿಗೆದಾರರ ಬಳಿ ಮೆಟೀರಿಯಲ್ ಸ್ಟಾಕ್‌ ಇಲ್ಲ ಎಂದು ಹೇಳುತ್ತಾರೆ ಹಾಗೂ ಚರಂಡಿ ಕಲ್ಲುಗಳನ್ನು ಕಿತ್ತು ಹಾಗೆಯೇ ಬಿಟ್ಟಿರುವುದರಿಂದ ನಿವಾಸಿಗಳಿಗೆ ತೊಂದರೆಯಾಗಿದೆ ಎಂದು ಹೇಳಿದರು.

ಕನ್ಸರ್‌ವೆನ್ಸಿಗಳಲ್ಲಿ ಮ್ಯಾನ್‌ ಹೋಲ್ಗಳು ಹಾಳಾಗಿದ್ದು, ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಮ್ಯಾನ್‌ ಹೋಲ್ಗಳ ಬಗ್ಗೆ ಯೋಜನೆ ರೂಪಿಸಿಲ್ಲ ಎಂದು ಹೇಳಿದರು. ಇನ್ನು ಕಾಮಗಾರಿ ನಡೆಯುವ ಸ್ಥಳದಲ್ಲಿ ಸೂಚನಾ ಫಲಕ ಅಳವಡಿಸಿಲ್ಲ. ಮಾಹಿತಿ ಇಲ್ಲದೇ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ದೂರಿದರು.

ನಗರದಲ್ಲಿ ಡಾಂಬರೀಕರಣ ಯೋಜನೆ ಅವೈಜ್ಞಾನಿಕವಾಗಿದೆ. ಈ ಯೋಜನೆಯ ಟೆಂಡರನ್ನು ರಿ ಟೆಂಡರ್‌ ಕರೆಯಬೇಖೀದೆ. ಸ್ಮಾರ್ಟ್‌ಸಿಟಿ ಇಂಜಿನಿಯರ್‌ಗಳಿಗೆ ಅನುಭವ ಇಲ್ಲದಿರುವುದು ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ. ಕಾಮಗಾರಿಗಳು ಹೊರ ರಾಜ್ಯಗಳ ಗುತ್ತಿಗೆದಾರರ ನೇತೃತ್ವದಲ್ಲಿ ನಡೆಯುತ್ತಿದ್ದು ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ ಕಾಮಗಾರಿ ಕೈಗೊಳ್ಳಬೇಕೆಂದು ಒತ್ಥಾಯಿಸಿದರು.

ಸ್ಥಳೀಯರಾದ ನಾಗರಾಜ ಕಂಕಾರಿ, ಕೆ. ರಂಗನಾಥ್‌, ಎಚ್.ಸಿ. ಯೋಗೀಶ್‌, ಕಾಶಿ ವಿಶ್ವನಾಥ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.