ಸೈಬರ್‌ ಕ್ರೈಂ ವಿರುದ್ಧ ಕಠಿಣ ಕ್ರಮ

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಪೊಲೀಸರಿಗೆ ಸೂಚನೆ

Team Udayavani, Jul 8, 2019, 12:21 PM IST

Udayavani Kannada Newspaper

ಶಿವಮೊಗ್ಗ: ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಅಥವಾ ಅವಹೇಳನ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಡಾ| ಎಂ. ಅಶ್ವಿ‌ನಿ ತಿಳಿಸಿದರು.

ನಗರದ ಡಿಎಆರ್‌ ಸಭಾಂಗಣದಲ್ಲಿ ಶನಿವಾರ ಎಸ್ಸಿ-ಎಸ್ಟಿ ಮುಖಂಡರೊಂದಿಗೆ ಕುಂದುಕೊರತೆ ಸಭೆಯಲ್ಲಿ ದೂರುಗಳನ್ನು ಆಲಿಸಿ ಮಾತನಾಡಿದ ಅವರು, ಟಿಕ್‌ಟಾಕ್‌ ಬಗ್ಗೆ ನಮಗೂ ಅಸಮಾಧಾನವಿದೆ. ಯಾವುದೇ ಸಮುದಾಯದ ನಾಯಕರು, ಸಮಾಜದ ಬಗ್ಗೆ ಅವಹೇಳನ ಮಾಡುವುದು ಅಪರಾಧ. ಆ ನಿಟ್ಟಿನಲ್ಲಿ ಪ್ರಾಥಮಿಕವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಪುನರಾವರ್ತನೆಯಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪೊಲೀಸ್‌ ಠಾಣೆಗೆ ಯಾರೇ ದೂರು ನೀಡಲು ಹೋದರೂ ಸೌಜನ್ಯದಿಂದ ನಡೆದುಕೊಳ್ಳುವಂತೆ ಜಿಲ್ಲೆಯ ಡಿವೈಎಸ್‌ಪಿಗಳು, ಸಿಪಿಐಗಳು ಹಾಗೂ ಪಿಎಸ್‌ಐಗಳಿಗೆ ಸಲಹೆ ನೀಡಿದರು. ಠಾಣೆಗೆ ಬಂದವರನ್ನು ಗೌರವದಿಂದ ಕಾಣಬೇಕು. ಕೆಲಸದ ಒತ್ತಡದ ನಡುವೆಯೂ ಸಮಸ್ಯೆಗಳನ್ನು ಸಮಾಧಾನದಿಂದ ಕೇಳಬೇಕು ಎಂದು ಸಲಹೆ ನೀಡಿದರು.

ಹೊಳೆಹೊನ್ನೂರು ಮತ್ತು ಕುಂಸಿ ಠಾಣಾ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಭದ್ರಾವತಿ ಮತ್ತು ಶಿವಮೊಗ್ಗ ಡಿವೈಎಸ್‌ಪಿಗಳು ವಾರಕ್ಕೆ ಎರಡು ದಿನ ಆಯಾ ಠಾಣೆಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಆ ನಿಟ್ಟಿನಲ್ಲಿ ವಾರದಲ್ಲಿ ಒಂದು ದಿನ ಸಾರ್ವಜನಿಕರು ಸೂಚಿಸುವ ಸ್ಥಳಕ್ಕೆ ತಾವೂ ಸೇರಿ ಹಿರಿಯ ಅಧಿಕಾರಿಗಳು ಬರುತ್ತಾರೆ ಎಂದು ತಿಳಿಸಿದರು.

ಸ್ಮಶಾನ ಭೂಮಿ ಬಗ್ಗೆ ಪತ್ರದಲ್ಲಿ ಬರೆದುಕೊಟ್ಟರೆ ಡಿಸಿ ಗಮನಕ್ಕೆ ತರಲಾಗುವುದು. ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡಿರುವ ಮರಗಳನ್ನು ಕಡಿಮೆ ದರಲ್ಲಿ ಆಶ್ರಯ ಮನೆ ನಿರ್ಮಾಣಕ್ಕೆ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳು ಒಲವು ತೋರಿದ್ದು, ಆ ಬಗ್ಗೆ ಮತ್ತೂಮ್ಮೆ ಚರ್ಚಿ ಸಲಾಗುವುದು ಎಂದರು. ಭೂ ವಿವಾದಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಅಧಿಕಾರಿಗಳ ಸಮಕ್ಷಮದಲ್ಲಿ ಸಮಸ್ಯೆ ಆಲಿಸುವಂತೆ ಡಿವೈಎಸ್ಪಿ ಮತ್ತು ಸಿಪಿಐಗಳಿಗೆ ಸೂಚಿಸಿದ್ದೇನೆ. ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಮಾಡುವ ಪ್ರಯತ್ನ ನಮ್ಮದಾಗಿದೆ. ಅದು ಸಾಧ್ಯವಾಗದಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಎಎಸ್‌ಪಿ ಡಾ| ಎಚ್.ಟಿ. ಶೇಖರ್‌, ಡಿವೈಎಸ್‌ಪಿಗಳಾದ ಎನ್‌. ಯತೀಶ್‌, ಉಮೇಶ್‌ ನಾಯ್ಕ, ಗಣೇಶ್‌ ಹೆಗಡೆ, ವೀರಭದ್ರಯ್ಯ ಇದ್ದರು.

ಸಭೆಯಲ್ಲಿ ಕೇಳಿ ಬಂದಿದ್ದು
ಶಿವಮೊಗ್ಗದ ಶೇಷಾದ್ರಿಪುರದಲ್ಲಿರುವ ಮದ್ಯದಂಗಡಿ ತೆರವು. ಮೀನಾಕ್ಷಿ ಭವನ ಎದುರು ಪಾರ್ಕಿಂಗ್‌ ವ್ಯವಸ್ಥೆ ಸರಿಪಡಿಸುವುದು. ತೀರ್ಥಹಳ್ಳಿಯಲ್ಲಿ ಆಶ್ರಯ ಮನೆಗಳಿಗೆ ಕಡಿಮೆ ದರಕ್ಕೆ ಮರಳು ಮತ್ತು ಕಲ್ಲು ಪೂರೈಕೆ, ಮೇಲ್ವರ್ಗದವರಿಂದ ದಲಿತರ ಮೇಲೆ ನಿರಂತರ ದಬ್ಟಾಳಿಕೆ. ಸಾಗರದ ಖಂಡಿಕಾ ಗ್ರಾಪಂ ವ್ಯಾಪ್ತಿಯ ದಲಿತ ಮನೆಗಳಿಗೆ ನೀರು ಕೊಡದ ಮೇಲ್ವರ್ಗದವರು. ಸಾಗರ ಗ್ರಾಮಾಂತರ ಠಾಣೆಯಲ್ಲಿ ಸಭೆ ಕರೆಯದಿರುವುದು. ಟೌನ್‌ನಲ್ಲಿ ಪಿಲೀಸ್‌ ಬೀಟ್ ಅವ್ಯವಸ್ಥೆ, ಟಿಕ್‌ಟಾಕ್‌ನಲ್ಲಿ ಅವಹೇಳನಕಾರಿ ವರ್ತನೆಗೆ ಕ್ರಮ. ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ, ಅಸಹಾಯಕರ ಮೇಲೆ ಪೊಲೀಸರ ದಬ್ಟಾಳಿಕೆ ಸೇರಿ ಹಲವು ದೂರುಗಳನ್ನು ದಲಿತ ಮುಖಂಡರು ಪೊಲೀಸರ ಎದುರು ಹೇಳಿಕೊಂಡರು.

 

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.